• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಗತಿಕ ಭಯೋತ್ಪಾದನೆ ತೊಲಗಿಸಲು ಕೇಂದ್ರ ಸರ್ಕಾರ ಯಾವ ಪ್ರಮುಖ ನಿರ್ಧಾರ ಕೈಗೊಂಡಿದೆ ಗೊತ್ತಾ?

TNN Correspondent Posted On March 27, 2018
0


0
Shares
  • Share On Facebook
  • Tweet It

ಜೈಪುರ: ಭಾರತದ ದಿಟ್ಟ ಪ್ರತ್ಯುತ್ತರದ ನಡುವೆಯೂ ಇತ್ತೀಚೆಗೆ ಗಡಿಯಲ್ಲಿ ಪಾಕಿಸ್ತಾನ ಹಾಗೂ ಚೀನಾ ಉಪಟಳ ಮಾಡುತ್ತಿರುವ ಬೆನ್ನಲ್ಲೇ ದೇಶದಲ್ಲಿ ಶತ್ರುಗಳ ಉಪದ್ವ್ಯಾಪದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿವೆ. ಆದಾಗ್ಯೂ ಇತ್ತೀಚೆಗಷ್ಟೇ ಚೀನಾ, ನಾವು ಶತ್ರುಗಳನ್ನು ಸದೆಬಡಿಯದೇ ಬಿಡುವುದಿಲ್ಲ ಎಂದು ಹೇಳಿರುವುದು ಸಹ ಭಾರತವನ್ನು ಕೆಣಕುವಂತಿದೆ. ಅತ್ತ ಪಾಕಿಸ್ತಾನಿ ಭಯೋತ್ಪಾದಕರಂತೂ ಸ್ವಲ್ಪ ಸಮಯ, ಜಾಗ ಸಿಕ್ಕರೂ ಭಾರತದೊಳಕ್ಕೆ ನುಸುಳಿಬಿಡುತ್ತಾರೆ.

ಆದರೆ ಈ ವೈರಿಗಳ, ಭಯೋತ್ಪಾದಕರ ಉಪಟಳವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಮ್ಮನಿರಬೇಕಲ್ಲ. ಇವರನ್ನು ಮಟ್ಟಹಾಕಲೆಂದೇ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿದೆ. ಹೌದು, ದೇಶದಲ್ಲೇ ಮೊದಲ ಬಾರಿಗೆ ಜಾಗತಿಕ ಭಯೋತ್ಪಾದನೆ ನಿಗ್ರಹ ಕೇಂದ್ರವೊಂದನ್ನು ತೆರೆಯಲು ಕೇಂದ್ರ ಸರ್ಕಾರ ಮುಂದಾಗಿದೆ.

ಜೈಪುರ ಜಿಲ್ಲೆಯ ಬಾಗ್ರು ಎಂಬಲ್ಲಿ ಕೇಂದ್ರ ತೆರೆಯಲು 50 ಎಕರೆ ಜಾಗವನ್ನು ಗುರುತಿಸಿದ್ದು, ಸುಮಾರು 275 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಇದರಲ್ಲಿ ರಾಜ್ಯ ಸರ್ಕಾರ 110 ಕೋಟಿ ರೂ. ನೀಡಲಿದ್ದು, ಕೇಂದ್ರ ಸ್ಥಾಪನೆಯಾದರೆ ಇದು ದೇಶದ ಮೊದಲ ಜಾಗತಿಕ ಭಯೋತ್ಪಾದನೆ ನಿಗ್ರಹ ಹಾಗೂ ಆಘಾತ ನಿಗ್ರಹ ಕೇಂದ್ರ ಎನಿಸಲಿದೆ ಎಂದು ತಿಳಿದುಬಂದಿದೆ.

ಜೈಪುರ ಅಭಿವೃದ್ಧಿ ಪ್ರಾಧಿಕಾರ ಈಗಾಗಲೇ ಜಾಗ ಗುರುತಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರದಲ್ಲಿ ಭಯೋತ್ಪಾದನೆ ಚಟುವಟಿಕೆಗಳನ್ನು ಪ್ರಾಯೋಗಿಕ ಹಾಗೂ ತಾಂತ್ರಿಕವಾಗಿ ಹೇಗೆ ನಿಗ್ರಹಿಸಬೇಕು, ಹೇಗೆ ಎದುರಾಳಿಗಳ ದಾಳಿಗೆ ಪ್ರತಿ ದಾಳಿ ಮಾಡಬೇಕು, ಭಯೋತ್ಪಾದಕರ ಚಲನವಲನಗಳನ್ನು ಹೇಗೆ ಗುರುತಿಸಬೇಕು ಎಂಬುದರ ಕುರಿತು ಸೈನಿಕರಿಗೆ ತರಬೇತಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
  • Popular Posts

    • 1
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 2
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search