• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಗತಿಕ ಭಯೋತ್ಪಾದನೆ ತೊಲಗಿಸಲು ಕೇಂದ್ರ ಸರ್ಕಾರ ಯಾವ ಪ್ರಮುಖ ನಿರ್ಧಾರ ಕೈಗೊಂಡಿದೆ ಗೊತ್ತಾ?

TNN Correspondent Posted On March 27, 2018
0


0
Shares
  • Share On Facebook
  • Tweet It

ಜೈಪುರ: ಭಾರತದ ದಿಟ್ಟ ಪ್ರತ್ಯುತ್ತರದ ನಡುವೆಯೂ ಇತ್ತೀಚೆಗೆ ಗಡಿಯಲ್ಲಿ ಪಾಕಿಸ್ತಾನ ಹಾಗೂ ಚೀನಾ ಉಪಟಳ ಮಾಡುತ್ತಿರುವ ಬೆನ್ನಲ್ಲೇ ದೇಶದಲ್ಲಿ ಶತ್ರುಗಳ ಉಪದ್ವ್ಯಾಪದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿವೆ. ಆದಾಗ್ಯೂ ಇತ್ತೀಚೆಗಷ್ಟೇ ಚೀನಾ, ನಾವು ಶತ್ರುಗಳನ್ನು ಸದೆಬಡಿಯದೇ ಬಿಡುವುದಿಲ್ಲ ಎಂದು ಹೇಳಿರುವುದು ಸಹ ಭಾರತವನ್ನು ಕೆಣಕುವಂತಿದೆ. ಅತ್ತ ಪಾಕಿಸ್ತಾನಿ ಭಯೋತ್ಪಾದಕರಂತೂ ಸ್ವಲ್ಪ ಸಮಯ, ಜಾಗ ಸಿಕ್ಕರೂ ಭಾರತದೊಳಕ್ಕೆ ನುಸುಳಿಬಿಡುತ್ತಾರೆ.

ಆದರೆ ಈ ವೈರಿಗಳ, ಭಯೋತ್ಪಾದಕರ ಉಪಟಳವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಮ್ಮನಿರಬೇಕಲ್ಲ. ಇವರನ್ನು ಮಟ್ಟಹಾಕಲೆಂದೇ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿದೆ. ಹೌದು, ದೇಶದಲ್ಲೇ ಮೊದಲ ಬಾರಿಗೆ ಜಾಗತಿಕ ಭಯೋತ್ಪಾದನೆ ನಿಗ್ರಹ ಕೇಂದ್ರವೊಂದನ್ನು ತೆರೆಯಲು ಕೇಂದ್ರ ಸರ್ಕಾರ ಮುಂದಾಗಿದೆ.

ಜೈಪುರ ಜಿಲ್ಲೆಯ ಬಾಗ್ರು ಎಂಬಲ್ಲಿ ಕೇಂದ್ರ ತೆರೆಯಲು 50 ಎಕರೆ ಜಾಗವನ್ನು ಗುರುತಿಸಿದ್ದು, ಸುಮಾರು 275 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಇದರಲ್ಲಿ ರಾಜ್ಯ ಸರ್ಕಾರ 110 ಕೋಟಿ ರೂ. ನೀಡಲಿದ್ದು, ಕೇಂದ್ರ ಸ್ಥಾಪನೆಯಾದರೆ ಇದು ದೇಶದ ಮೊದಲ ಜಾಗತಿಕ ಭಯೋತ್ಪಾದನೆ ನಿಗ್ರಹ ಹಾಗೂ ಆಘಾತ ನಿಗ್ರಹ ಕೇಂದ್ರ ಎನಿಸಲಿದೆ ಎಂದು ತಿಳಿದುಬಂದಿದೆ.

ಜೈಪುರ ಅಭಿವೃದ್ಧಿ ಪ್ರಾಧಿಕಾರ ಈಗಾಗಲೇ ಜಾಗ ಗುರುತಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರದಲ್ಲಿ ಭಯೋತ್ಪಾದನೆ ಚಟುವಟಿಕೆಗಳನ್ನು ಪ್ರಾಯೋಗಿಕ ಹಾಗೂ ತಾಂತ್ರಿಕವಾಗಿ ಹೇಗೆ ನಿಗ್ರಹಿಸಬೇಕು, ಹೇಗೆ ಎದುರಾಳಿಗಳ ದಾಳಿಗೆ ಪ್ರತಿ ದಾಳಿ ಮಾಡಬೇಕು, ಭಯೋತ್ಪಾದಕರ ಚಲನವಲನಗಳನ್ನು ಹೇಗೆ ಗುರುತಿಸಬೇಕು ಎಂಬುದರ ಕುರಿತು ಸೈನಿಕರಿಗೆ ತರಬೇತಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search