• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಗತಿಕ ಭಯೋತ್ಪಾದನೆ ತೊಲಗಿಸಲು ಕೇಂದ್ರ ಸರ್ಕಾರ ಯಾವ ಪ್ರಮುಖ ನಿರ್ಧಾರ ಕೈಗೊಂಡಿದೆ ಗೊತ್ತಾ?

TNN Correspondent Posted On March 27, 2018
0


0
Shares
  • Share On Facebook
  • Tweet It

ಜೈಪುರ: ಭಾರತದ ದಿಟ್ಟ ಪ್ರತ್ಯುತ್ತರದ ನಡುವೆಯೂ ಇತ್ತೀಚೆಗೆ ಗಡಿಯಲ್ಲಿ ಪಾಕಿಸ್ತಾನ ಹಾಗೂ ಚೀನಾ ಉಪಟಳ ಮಾಡುತ್ತಿರುವ ಬೆನ್ನಲ್ಲೇ ದೇಶದಲ್ಲಿ ಶತ್ರುಗಳ ಉಪದ್ವ್ಯಾಪದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿವೆ. ಆದಾಗ್ಯೂ ಇತ್ತೀಚೆಗಷ್ಟೇ ಚೀನಾ, ನಾವು ಶತ್ರುಗಳನ್ನು ಸದೆಬಡಿಯದೇ ಬಿಡುವುದಿಲ್ಲ ಎಂದು ಹೇಳಿರುವುದು ಸಹ ಭಾರತವನ್ನು ಕೆಣಕುವಂತಿದೆ. ಅತ್ತ ಪಾಕಿಸ್ತಾನಿ ಭಯೋತ್ಪಾದಕರಂತೂ ಸ್ವಲ್ಪ ಸಮಯ, ಜಾಗ ಸಿಕ್ಕರೂ ಭಾರತದೊಳಕ್ಕೆ ನುಸುಳಿಬಿಡುತ್ತಾರೆ.

ಆದರೆ ಈ ವೈರಿಗಳ, ಭಯೋತ್ಪಾದಕರ ಉಪಟಳವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಮ್ಮನಿರಬೇಕಲ್ಲ. ಇವರನ್ನು ಮಟ್ಟಹಾಕಲೆಂದೇ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿದೆ. ಹೌದು, ದೇಶದಲ್ಲೇ ಮೊದಲ ಬಾರಿಗೆ ಜಾಗತಿಕ ಭಯೋತ್ಪಾದನೆ ನಿಗ್ರಹ ಕೇಂದ್ರವೊಂದನ್ನು ತೆರೆಯಲು ಕೇಂದ್ರ ಸರ್ಕಾರ ಮುಂದಾಗಿದೆ.

ಜೈಪುರ ಜಿಲ್ಲೆಯ ಬಾಗ್ರು ಎಂಬಲ್ಲಿ ಕೇಂದ್ರ ತೆರೆಯಲು 50 ಎಕರೆ ಜಾಗವನ್ನು ಗುರುತಿಸಿದ್ದು, ಸುಮಾರು 275 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಇದರಲ್ಲಿ ರಾಜ್ಯ ಸರ್ಕಾರ 110 ಕೋಟಿ ರೂ. ನೀಡಲಿದ್ದು, ಕೇಂದ್ರ ಸ್ಥಾಪನೆಯಾದರೆ ಇದು ದೇಶದ ಮೊದಲ ಜಾಗತಿಕ ಭಯೋತ್ಪಾದನೆ ನಿಗ್ರಹ ಹಾಗೂ ಆಘಾತ ನಿಗ್ರಹ ಕೇಂದ್ರ ಎನಿಸಲಿದೆ ಎಂದು ತಿಳಿದುಬಂದಿದೆ.

ಜೈಪುರ ಅಭಿವೃದ್ಧಿ ಪ್ರಾಧಿಕಾರ ಈಗಾಗಲೇ ಜಾಗ ಗುರುತಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರದಲ್ಲಿ ಭಯೋತ್ಪಾದನೆ ಚಟುವಟಿಕೆಗಳನ್ನು ಪ್ರಾಯೋಗಿಕ ಹಾಗೂ ತಾಂತ್ರಿಕವಾಗಿ ಹೇಗೆ ನಿಗ್ರಹಿಸಬೇಕು, ಹೇಗೆ ಎದುರಾಳಿಗಳ ದಾಳಿಗೆ ಪ್ರತಿ ದಾಳಿ ಮಾಡಬೇಕು, ಭಯೋತ್ಪಾದಕರ ಚಲನವಲನಗಳನ್ನು ಹೇಗೆ ಗುರುತಿಸಬೇಕು ಎಂಬುದರ ಕುರಿತು ಸೈನಿಕರಿಗೆ ತರಬೇತಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search