• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಾಗತಿಕ ಭಯೋತ್ಪಾದನೆ ತೊಲಗಿಸಲು ಕೇಂದ್ರ ಸರ್ಕಾರ ಯಾವ ಪ್ರಮುಖ ನಿರ್ಧಾರ ಕೈಗೊಂಡಿದೆ ಗೊತ್ತಾ?

TNN Correspondent Posted On March 27, 2018
0


0
Shares
  • Share On Facebook
  • Tweet It

ಜೈಪುರ: ಭಾರತದ ದಿಟ್ಟ ಪ್ರತ್ಯುತ್ತರದ ನಡುವೆಯೂ ಇತ್ತೀಚೆಗೆ ಗಡಿಯಲ್ಲಿ ಪಾಕಿಸ್ತಾನ ಹಾಗೂ ಚೀನಾ ಉಪಟಳ ಮಾಡುತ್ತಿರುವ ಬೆನ್ನಲ್ಲೇ ದೇಶದಲ್ಲಿ ಶತ್ರುಗಳ ಉಪದ್ವ್ಯಾಪದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿವೆ. ಆದಾಗ್ಯೂ ಇತ್ತೀಚೆಗಷ್ಟೇ ಚೀನಾ, ನಾವು ಶತ್ರುಗಳನ್ನು ಸದೆಬಡಿಯದೇ ಬಿಡುವುದಿಲ್ಲ ಎಂದು ಹೇಳಿರುವುದು ಸಹ ಭಾರತವನ್ನು ಕೆಣಕುವಂತಿದೆ. ಅತ್ತ ಪಾಕಿಸ್ತಾನಿ ಭಯೋತ್ಪಾದಕರಂತೂ ಸ್ವಲ್ಪ ಸಮಯ, ಜಾಗ ಸಿಕ್ಕರೂ ಭಾರತದೊಳಕ್ಕೆ ನುಸುಳಿಬಿಡುತ್ತಾರೆ.

ಆದರೆ ಈ ವೈರಿಗಳ, ಭಯೋತ್ಪಾದಕರ ಉಪಟಳವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಮ್ಮನಿರಬೇಕಲ್ಲ. ಇವರನ್ನು ಮಟ್ಟಹಾಕಲೆಂದೇ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿದೆ. ಹೌದು, ದೇಶದಲ್ಲೇ ಮೊದಲ ಬಾರಿಗೆ ಜಾಗತಿಕ ಭಯೋತ್ಪಾದನೆ ನಿಗ್ರಹ ಕೇಂದ್ರವೊಂದನ್ನು ತೆರೆಯಲು ಕೇಂದ್ರ ಸರ್ಕಾರ ಮುಂದಾಗಿದೆ.

ಜೈಪುರ ಜಿಲ್ಲೆಯ ಬಾಗ್ರು ಎಂಬಲ್ಲಿ ಕೇಂದ್ರ ತೆರೆಯಲು 50 ಎಕರೆ ಜಾಗವನ್ನು ಗುರುತಿಸಿದ್ದು, ಸುಮಾರು 275 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ಇದರಲ್ಲಿ ರಾಜ್ಯ ಸರ್ಕಾರ 110 ಕೋಟಿ ರೂ. ನೀಡಲಿದ್ದು, ಕೇಂದ್ರ ಸ್ಥಾಪನೆಯಾದರೆ ಇದು ದೇಶದ ಮೊದಲ ಜಾಗತಿಕ ಭಯೋತ್ಪಾದನೆ ನಿಗ್ರಹ ಹಾಗೂ ಆಘಾತ ನಿಗ್ರಹ ಕೇಂದ್ರ ಎನಿಸಲಿದೆ ಎಂದು ತಿಳಿದುಬಂದಿದೆ.

ಜೈಪುರ ಅಭಿವೃದ್ಧಿ ಪ್ರಾಧಿಕಾರ ಈಗಾಗಲೇ ಜಾಗ ಗುರುತಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರದಲ್ಲಿ ಭಯೋತ್ಪಾದನೆ ಚಟುವಟಿಕೆಗಳನ್ನು ಪ್ರಾಯೋಗಿಕ ಹಾಗೂ ತಾಂತ್ರಿಕವಾಗಿ ಹೇಗೆ ನಿಗ್ರಹಿಸಬೇಕು, ಹೇಗೆ ಎದುರಾಳಿಗಳ ದಾಳಿಗೆ ಪ್ರತಿ ದಾಳಿ ಮಾಡಬೇಕು, ಭಯೋತ್ಪಾದಕರ ಚಲನವಲನಗಳನ್ನು ಹೇಗೆ ಗುರುತಿಸಬೇಕು ಎಂಬುದರ ಕುರಿತು ಸೈನಿಕರಿಗೆ ತರಬೇತಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search