• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಗೆ ಬಿತ್ತು ದೊಡ್ಡ ಹೊಡೆತ, ಕೈ ಕೊಡಲಿದ್ದಾರೆ ಸಿದ್ದು ಆಪ್ತ

TNN Correspondent Posted On March 29, 2018
0


0
Shares
  • Share On Facebook
  • Tweet It

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯರ ಬಗ್ಗೆ ಮೃಧು ಧೋರಣೆ ಹೊಂದಿರುವ, ತನ್ನ ಜಿಲ್ಲೆಯಲ್ಲಿ ತನಗೆ ಸೂಕ್ತ ಸ್ಥಾನ ಸಿಗದಿದ್ದರೂ, ಅನುಭವ, ಅವಕಾಶವಿದ್ದರೂ ಸಚಿವ ಸ್ಥಾನದಿಂದ ವಂಚಿತರಾಗಿದ್ದರೂ, ಆಕ್ರೋಶದ ಮಧ್ಯೆ ಸಿದ್ದರಾಮಯ್ಯ ಸರ್ಕಾರಕ್ಕೆ ಸಾಥ್ ನೀಡಿದ ಅಫಜಲಪುರ ಶಾಸಕ ಮಾಲೀಕಯ್ಯ ಗುತ್ತೇದಾರ ಇದೀಗ ಕಾಂಗ್ರೆಸ್ ಗೆ ಕೈ ಕೊಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

  ಹೈದ್ರಾಬಾದ್ ಕರ್ನಾಟಕದಲ್ಲಿ ಖರ್ಗೆ ನಂತರ ಕಾಂಗ್ರೆಸ್ ನಲ್ಲಿ  ಹಿರಿಯರಾದ ಮಾಲೀಕಯ್ಯ ಗುತ್ತೇದಾರ ಇದೀಗ ಕಾಂಗ್ರೆಸ್ ಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ತಮ್ಮ ಹಿರಿತನಕ್ಕೆ ಕಾಂಗ್ರೆಸ್ ನಲ್ಲಿ ಬೆಲೆ ನೀಡುತ್ತಿಲ್ಲ, ಖರ್ಗೆ ಮಾತಿಗೆ ಕಟುಬಿದ್ದು, ಸಚಿವ ಸ್ಥಾನದಿಂದ ವಂಚಿಸಲಾಗಿದೆ. ಹಿರಿಯರಾದರೂ ಸಚಿವ ಸ್ಥಾನ ನೀಡದೇ ಮೋಸ ಮಾಡಲಾಗಿದೆ ಎಂಬುದು ಮಾಲೀಕಯ್ಯ ಗುತ್ತೇದಾರ ಆರೋಪ. ಖರ್ಗೆ ಮಾಲೀಕಯ್ಯ ಮಧ್ಯೆ ಇರುವ ವೈಮನಸ್ಸು ಮತ್ತು ಸದಾ ತುಳಿತಕ್ಕೆ ಒಳ ಮಾಡುತ್ತಿರುವುದಕ್ಕೆ ಬೇಸತ್ತು ಮಾಲೀಕಯ್ಯ ಕಾಂಗ್ರೆಸ್ ಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ.

ಸಿದ್ದರಾಮಯ್ಯಗೆ ತೀವ್ರ ಆಪ್ತರಾಗಿರುವ ಮಾಲೀಕಯ್ಯ ಸಿಎಂ ಮಾತಿಗೆ ಕಟುಬಿದ್ದು, ರಾಜೀನಾಮೆ ನೀಡದೇ ಇದುವರೆಗೆ ಯತಾಸ್ಥಿತಿ ಕಾದು ಕೊಂಡು ಬಂದಿದ್ದರು. ಸೂಕ್ತ ಸ್ಥಾನ ನೀಡಿದ್ದರೂ ಸಿಎಂ ಮಾತಿನಿಂದ ಸುಮ್ಮನ್ನಿದ್ದ ಗುತ್ತೇದಾರ ಇದೀಗ ಅಮಿತ್ ಷಾ ಜಾಲಕ್ಕೆ ಬಿದ್ದಿದ್ದು, ಬಿಜೆಪಿ ಸೇರುವ ಅನುಮಾನಗಳು ದಟ್ಟವಾಗಿವೆ.

ಮಾಲೀಕಯ್ಯ ಕಾಂಗ್ರೆಸ್ ಗೆ ರಾಜೀನಾಮೆ ನೀಡುವುದರಿಂದ ಹೈಕ ಭಾಗದಲ್ಲಿ ಕೆಲವು ಕ್ಷೇತ್ರಗಳಲ್ಲಿ ನಿರ್ಣಾಯಕರಾಗಿರುವ ಮತ್ತು ಆರ್ಥಿಕವಾಗಿ ಬಲಿಷ್ಠರಾಗಿರುವ ಈಡೀಗ ಸಮಾಜದ ಮತಗಳು ಕಾಂಗ್ರೆಸ್ ಕೈ ತಪ್ಪುವುದು ನಿಶ್ಚಿತ. ಅಲ್ಲದೇ ಕಲಬುರಗಿಯ ನಾಲ್ಕೈದು ಕ್ಷೇತ್ರದ ಫಲಿತಾಂಶವನ್ನು ಬದಲಾಯಿಸುವ ತಾಕತ್ತು ಇರುವ ಗುತ್ತೇದಾರ ಕಾಂಗ್ರೆಸ್ ಗೆ ಭಾರಿ ಹೊಡೆತ ನೀಡುವ ಎಲ್ಲ ಲಕ್ಷಣಗಳು ಗೋಚರಿಸಿವೆ.

ಕಲಬುರಗಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಹಿರಿಯರಾದ ಮಾಲೀಕಯ್ಯ ಗುತ್ತೇದಾರ ಅವರಿಗೆ ಅವರದ್ದೇ ಜಿಲ್ಲೆಯ ಮಲ್ಲಿಕಾರ್ಜುನ ಖರ್ಗೆ ಅವರೇ ಕಂಟಕ ಎಂಬುದು ಪ್ರಿಯಾಂಕ್ ಖರ್ಗೆಗೆ ಸಚಿವ ಸ್ಥಾನ ನೀಡಿದ್ದಾಗಲೇ ಸಾಬೀತಾಗಿದೆ. ಸಿದ್ದರಾಮಯ್ಯ ಪ್ರಿಯಾಂಕ್ ಗೆ ಸಚಿವ ಸ್ಥಾನ ನೀಡಿ, ಮಲ್ಲಿಕಾರ್ಜುನ ಖರ್ಗೆ ಅವರ ಬಾಯಿ ಮುಚ್ಚಿಸಿದ್ದಾರೆ. ಆದರೆ ಖರ್ಗೆ ಅವರು ಗುತ್ತೇದಾರ ಅವರನ್ನು ಯಶಸ್ವಿಯಾಗಿ ಹತ್ತಿಕ್ಕುವ ಪ್ರಯತ್ನ ಮುಂದುವರಿಸಿದ್ದಾರೆ. ಅಲ್ಲದೇ ಇತ್ತೀಚೆಗೆ ನಡೆದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲೂ ಮಾಲೀಕಯ್ಯ ಸೂಕ್ತ ಸ್ಪಂದನೆ ದೊರೆಯದಿರುವುದರಿಂದ ಗುತ್ತೇದಾರ ಕಾಂಗ್ರೆಸ್ ವಿರುದ್ಧ ತೀವ್ರ ಬೇಸರಕ್ಕೆ ಒಳಗಾಗಿದ್ದಾರೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search