• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

46ನೇ ವಯಸ್ಸಲ್ಲಿ, ಮಗನೊಂದಿಗೆ 10ನೇ ಪರೀಕ್ಷೆ ಬರೆದ ಈ ಮಹಾತಾಯಿ ಸರ್ವರಿಗೂ ಸ್ಫೂರ್ತಿ

TNN Correspondent Posted On March 29, 2018
0


0
Shares
  • Share On Facebook
  • Tweet It

ಲುದಿಯಾನಾ: ಜ್ಞಾನ ಹೊಂದಲು ವಯಸ್ಸಿನ ಮಿತಿಯಿಲ್ಲ, ಯಾರು ಬೇಕಾದರೂ, ಯಾವುದೇ ವಯಸ್ಸಿನಲ್ಲಿ ಶಿಕ್ಷಣ ಪಡೆಯಬಹುದು ಎಂಬ ಸಂದೇಶವನ್ನು ಪಂಜಾಬ್ ಲುದಿಯಾನಾದ ಮಹಾತಾಯಿಯೊಬ್ಬರು ಸಾಬೀತು ಮಾಡಿದ್ದಾರೆ. ಮಗನೊಂದಿಗೆ 10ನೇ ತರಗತಿ ಪರೀಕ್ಷೆ ಬರೆಯುವ ಮೂಲಕ ವಯಸ್ಕರೂ ಶಿಕ್ಷಣ ಪಡೆಯಬಹುದು ಎಂಬ ಸಂದೇಶವನ್ನು ಸಾರಿದ್ದಾರೆ.

1989ರಲ್ಲಿ ಒಂಬತನೇ ತರಗತಿ ಪಾಸ್ ಆಗಿದ್ದ ರಜ್ನಿ ಬಲಾ ಅನಿವಾರ್ಯ ಕಾರಣಗಳಿಂದ ಮುಂದಿನ ತರಗತಿಗೆ ಹೋಗಲು ಆಗಿರಲಿಲ್ಲ. ಆದರೆ ಇದೀಗ 10ನೇ ತರಗತಿಗೆ ಪ್ರವೇಶ ಪಡೆದಿದ್ದು, ಮಗನೊಂದಿಗೆ ಬೋರ್ಡ್ ಪರೀಕ್ಷೆ ಬರೆಯುವ ಮೂಲಕ ಮಹತ್ವದ ಸಂದೇಶವನ್ನು ನೀಡಿದ್ದಾರೆ. ಮೂರು ಮಕ್ಕಳನ್ನು ಹೊಂದಿರುವ ರಜ್ನಿ ಬಲಾ ಪತಿಯ ಆಶಯದಂತೆ ಶಾಲೆಗೆ ಪ್ರವೇಶ ಪಡೆದಿದ್ದಾರೆ.

ಮೂರು ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದು, ಆಸ್ಪತ್ರೆಯೊಂದರಲ್ಲಿ ವಾರ್ಡ್ ಅಟೆಂಡೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಪತಿ ಒತ್ತಾಯದಂತೆ ಶಾಲೆಗೆ ಪ್ರವೇಶ ಪಡೆದಿದ್ದು, ನಿತ್ಯ ಮಗನೊಂದಿಗೆ ತರಗತಿ ಹಾಜರಾಗಿದ್ದೇನೆ. ಅಲ್ಲದೇ ಇದೀಗ 10ನೇ ತರಗತಿ ಪರೀಕ್ಷೆ ಬರೆಯುತ್ತಿದ್ದೇನೆ. ನಿಜವಾಗಲು ಪರೀಕ್ಷೆ ಪಾಸ್ ಆಗುವುದು ಸವಾಲಿನ ಕೆಲಸ ಎಂಬ ಅರಿವಾಗಿದೆ ಎನ್ನುತ್ತಾರೆ ರಜ್ನಿ ಬಲಾ.

ಪತಿಯ ಪ್ರೋತ್ಸಾಹ, ಮಕ್ಕಳ ಸಹಕಾರ, ಮನೆಯ ಹಿರಿಯರ ಬೆಂಬಲದಿಂದ ಈ ನಿರ್ಧಾರ ಕೈಗೊಂಡೆ. ನನ್ನ ಪತಿ ನಿತ್ಯ ಓದಲು ಪ್ರೋತ್ಸಾಹಿಸುತ್ತಾರೆ. ಅಲ್ಲದೇ ಮಗಳು, ಮಗ ನನ್ನ ಓದಿಗೆ ಸಹಕಾರ ನೀಡಿದ್ದಾರೆ. ಇದೇ ರೀತಿ ಪ್ರೋತ್ಸಾಹ ದೊರೆಯುವುದರಿಂದ ನಾನು ಪದವಿ ಮುಗಿಸುವವರೆಗೆ ವಿಶ್ರಮಿಸುವುದಿಲ್ಲ ಎಂದು ರಜ್ನಿ ಬಲಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನನ್ನ ಪತ್ನಿ ಬೆಳಗ್ಗೆ ಬೇಗ ಎದ್ದು ಮಗನೊಂದಿಗೆ ಟ್ಯೂಷನ್ ಗೆ ಹೋಗುವುದು, ಶಾಲೆಗೆ ಹೋಗುವುದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಅವಳು ಶಾಲೆ ಪೂರ್ಣಗೊಳಿಸುವುದು ನಮ್ಮೆಲ್ಲರ ಆಶಯವಾಗಿತ್ತು. ಅದು ಪೂರ್ಣವಾಗುತ್ತಿದೆ. ನಮಗೆಲ್ಲರಿಗೂ ತೀವ್ರ ಸಂತೋಷವಾಗುತ್ತಿದೆ ಎಂದು ರಜ್ನಿ ಅವರ ಪತಿ ರಾಜಕುಮಾರ ಸಾಥಿ ಬೆಂಬಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search