• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಟ್ಟಿದ್ದ ಗುಂಡಿನ ಬಿಸಿ, ಗಡಚಿರೋಲಿಯಲ್ಲಿ ಕೆಂಪು ಉಗ್ರರ ಶರಣಾಗತಿ

TNN Correspondent Posted On March 29, 2018
0


0
Shares
  • Share On Facebook
  • Tweet It

ಗಡಚಿರೋಲಿ: ಕೇಂದ್ರ ಸರ್ಕಾರ ನಕ್ಸಲರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ ದೇಶದಲ್ಲಿ ಕೆಂಪು ಉಗ್ರರ ಉಪಟಳ ಕಡಿಮೆಯಾಗುತ್ತ ಬಂದಿದ್ದು, ಇದೀಗ ಮಹಾರಾಷ್ಟ್ರದ ಗಡಚಿರೋಲಿಯಲ್ಲಿ ಐದು ಉಗ್ರರು ಪೊಲೀಸರಿಗೆ ಶರಣಾಗತಿಯಾಗಿದ್ದಾರೆ.

ಶರಣಾಗತಿಯಾಗಿರುವ ಕ್ರಾಂತಿಕಾರಿ ಮುಖಂಡರ ಪ್ರತಿಯೊಬ್ಬರ ತಲೆಗೆ 25 ಲಕ್ಷ ಘೋಷಣೆ ಮಾಡಲಾಗಿತ್ತು. ಆದ್ದರಿಂದ ಜೀವ ಉಳಿಸಿಕೊಳ್ಳಲು ನಕ್ಸಲರು ಇದೀಗ ಸಮಾಜದ ಮುಖ್ಯವಾಹಿನಿಗೆ ಬರಲು ನಿರ್ಧರಿಸಿದ್ದಾರೆ. ಈ ಕುರಿತು ಬುಧವಾರ ಮಹಾರಾಷ್ಟ್ರ ಪೊಲೀಸರು ಘೋಷಣೆ ಮಾಡಿದ್ದು, ಎಲ್ಲರನ್ನು ಕೆಲ ದಿನಗಳವರೆಗೆ ವಿಚಾರಣೆ ನಡೆಸಿ, ನಂತರ ಸಮಾಜದ ಮುಖ್ಯವಾಹಿನಿಗೆ ಬಿಡಲಾಗುವುದು ಎಂದು ತಿಳಿಸಿದ್ದಾರೆ.

ನಕ್ಸಲ್ ಪ್ಲಟೂನ್ 4 ‘ಎ’  ತಂಡದ ಕಮಾಂಡರ್ ಸೈನು ಅಲಿಯಾಸ್ ಮಿರ್ಗು ಜಿರು ವಡೆಹಾ(35) ಶರಣಾಗಿದ್ದು, ಈತನ ವಿರುದ್ಧ 17 ಕೊಲೆ ಪ್ರಕರಣಗಳು ದಾಖಲಾಗಿವೆ. ಈತನ ತಲೆಗೆ 12 ಲಕ್ಷ ಘೋಷಣೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಅರ್ಜುನ್ ಬರ್ಸಯ್ಯ ಪೊಯಾ(25), ಚಾಯಾ ಅಲಿಯಾಸ್ ರಾಜೆ ದೇವು ಕುಡಿಯಾತಿ (23), ವೇಣು ಅಲಿಯಾಸ್ ಬಿಜಾವು ಸುಂದರ್ ಕೊವಾಚಿ (23) ಶರಣಾದವರು.

ಕಳೆದ ತಿಂಗಳು ಇಬ್ಬರು ನಕ್ಸರಲನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಮುಗಿಸಿದ ನಂತರ ಎರಡನೇ ಬಾರಿಗೆ ನಕ್ಸಲರು ಶರಣಾಗತಿಯಾಗುತ್ತಿರುವುದು. 22 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಗಡಚಿರೋಲಿಯಲ್ಲಿ ಈ ಮಟ್ಟದಲ್ಲಿ ನಕ್ಸಲರ ಶರಣಾಗತಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search