• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಟ್ಟಿದ್ದ ಗುಂಡಿನ ಬಿಸಿ, ಗಡಚಿರೋಲಿಯಲ್ಲಿ ಕೆಂಪು ಉಗ್ರರ ಶರಣಾಗತಿ

TNN Correspondent Posted On March 29, 2018
0


0
Shares
  • Share On Facebook
  • Tweet It

ಗಡಚಿರೋಲಿ: ಕೇಂದ್ರ ಸರ್ಕಾರ ನಕ್ಸಲರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ ದೇಶದಲ್ಲಿ ಕೆಂಪು ಉಗ್ರರ ಉಪಟಳ ಕಡಿಮೆಯಾಗುತ್ತ ಬಂದಿದ್ದು, ಇದೀಗ ಮಹಾರಾಷ್ಟ್ರದ ಗಡಚಿರೋಲಿಯಲ್ಲಿ ಐದು ಉಗ್ರರು ಪೊಲೀಸರಿಗೆ ಶರಣಾಗತಿಯಾಗಿದ್ದಾರೆ.

ಶರಣಾಗತಿಯಾಗಿರುವ ಕ್ರಾಂತಿಕಾರಿ ಮುಖಂಡರ ಪ್ರತಿಯೊಬ್ಬರ ತಲೆಗೆ 25 ಲಕ್ಷ ಘೋಷಣೆ ಮಾಡಲಾಗಿತ್ತು. ಆದ್ದರಿಂದ ಜೀವ ಉಳಿಸಿಕೊಳ್ಳಲು ನಕ್ಸಲರು ಇದೀಗ ಸಮಾಜದ ಮುಖ್ಯವಾಹಿನಿಗೆ ಬರಲು ನಿರ್ಧರಿಸಿದ್ದಾರೆ. ಈ ಕುರಿತು ಬುಧವಾರ ಮಹಾರಾಷ್ಟ್ರ ಪೊಲೀಸರು ಘೋಷಣೆ ಮಾಡಿದ್ದು, ಎಲ್ಲರನ್ನು ಕೆಲ ದಿನಗಳವರೆಗೆ ವಿಚಾರಣೆ ನಡೆಸಿ, ನಂತರ ಸಮಾಜದ ಮುಖ್ಯವಾಹಿನಿಗೆ ಬಿಡಲಾಗುವುದು ಎಂದು ತಿಳಿಸಿದ್ದಾರೆ.

ನಕ್ಸಲ್ ಪ್ಲಟೂನ್ 4 ‘ಎ’  ತಂಡದ ಕಮಾಂಡರ್ ಸೈನು ಅಲಿಯಾಸ್ ಮಿರ್ಗು ಜಿರು ವಡೆಹಾ(35) ಶರಣಾಗಿದ್ದು, ಈತನ ವಿರುದ್ಧ 17 ಕೊಲೆ ಪ್ರಕರಣಗಳು ದಾಖಲಾಗಿವೆ. ಈತನ ತಲೆಗೆ 12 ಲಕ್ಷ ಘೋಷಣೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಅರ್ಜುನ್ ಬರ್ಸಯ್ಯ ಪೊಯಾ(25), ಚಾಯಾ ಅಲಿಯಾಸ್ ರಾಜೆ ದೇವು ಕುಡಿಯಾತಿ (23), ವೇಣು ಅಲಿಯಾಸ್ ಬಿಜಾವು ಸುಂದರ್ ಕೊವಾಚಿ (23) ಶರಣಾದವರು.

ಕಳೆದ ತಿಂಗಳು ಇಬ್ಬರು ನಕ್ಸರಲನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಮುಗಿಸಿದ ನಂತರ ಎರಡನೇ ಬಾರಿಗೆ ನಕ್ಸಲರು ಶರಣಾಗತಿಯಾಗುತ್ತಿರುವುದು. 22 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಗಡಚಿರೋಲಿಯಲ್ಲಿ ಈ ಮಟ್ಟದಲ್ಲಿ ನಕ್ಸಲರ ಶರಣಾಗತಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search