• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಒಬ್ಬ ಐಎಎಸ್ ಅಧಿಕಾರಿಯನ್ನು ನಡೆಸಿಕೊಳ್ಳುವ ರೀತಿ ಇದೇನಾ?

TNN Correspondent Posted On March 29, 2018
0


0
Shares
  • Share On Facebook
  • Tweet It

ಬೆಂಗಳೂರು: ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ದಕ್ಷ ಅಧಿಕಾರಿಗಳನ್ನು ಹೇಗೆ ಕೆಟ್ಟದಾಗಿ ನಡೆಸಿಕೊಂಡರು ಎಂಬುದು ಇಡೀ ರಾಜ್ಯದ ಜನರಿಗೇ ಗೊತ್ತಿದೆ. ಡಿ.ಕೆ.ಅನುಮಾನಾಸ್ಪದ ಸಾವಿನ ತನಿಖೆ ವಿಫಲ, ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ, ಸಿ.ಶಿಖಾ ವರ್ಗಾವಣೆ, ಅನುಪಮಾ ಶೆಣೈ ಮಾಡಿದ ಆರೋಪಗಳೆಲ್ಲವೂ ರಾಜ್ಯ ಸರ್ಕಾರದ ಅಧಿಕಾರ ದರ್ಪಕ್ಕೆ ಹಿಡಿದ ಕನ್ನಡಿಯಾಗಿದೆ.

ಈಗಲೂ ಸರ್ಕಾರ ತನ್ನ ದರ್ಪವನ್ನು ಮುಂದುವರಿಸಿದ್ದು, ಒಬ್ಬ ಐಎಎಸ್ ಅಧಿಕಾರಿಯನ್ನು ಕೆಟ್ಟದಾಗಿ ನಡೆಸಿಕೊಂಡಿದೆ. ಕಳೆದ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಯೊಬ್ಬರನ್ನು ಅವಮಾನಗೊಳಿಸಿದ ಹಿನ್ನೆಲೆಯಲ್ಲಿ ಆ ಅಧಿಕಾರಿ ಮನನೊಂದು ರಜೆ ಮೇಲೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಗಣಿ ಕಾರ್ಯದರ್ಶಿ ರೇಜೇಂದರ್ ಕುಮಾರ್ ಕಟಾರಿಯಾ ಅವರು ಸಚಿವರೊಬ್ಬರಿಗೆ ಅನುಕೂಲವಾಗುವ ಹಾಗೆ ಗಣಿ ಗುತ್ತಿಗೆ ನೀಡಲಿಲ್ಲ ಎಂಬ ಕಾರಣಕ್ಕಾಗಿ ಆ ಸಚಿವರು ಅವಮಾನ ಮಾಡಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಆದರೆ ಈ ಕುರಿತು ಆ ಸಚಿವ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅಧಿಕಾರಿಯ ಮೇಲೆಯೇ ಆರೋಪ ಮಾಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಕಟಾರಿಯಾ ಅವರು ಬರೀ ನಿಯಮ ಪುಸ್ತಕವನ್ನೇ ಉಲ್ಲೇಖಿಸುತ್ತಿದ್ದು, ಇತರ ಅಧಿಕಾರಿಗಳು ಸಹ ಅವರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜಕೀಯ ಪ್ರೇರಣೆ ಬಿಟ್ಟು ಬರೀ ನಿಯಮಾವಳಿಯನ್ನೇ ಉಲ್ಲೇಖಿಸಿದ ಕಾರಣ ಖಾರವಾಗಿ ಪ್ರತಿಕ್ರಿಯಿಸಬೇಕಾಗಿ ಬಂತು ಎಂದು ತಿಳಿಸಿದ್ದಾರೆ.

ಆದರೆ, ತಮಗೆ ಅನುಕೂಲವಾಗದಂತೆ ಗಣಿ ಗುತ್ತಿಗೆ ನೀಡಲು ಒಪ್ಪದ್ದೇ ಅಧಿಕಾರಿಯನ್ನು ಅವಮಾನಿಸಲು ಕಾರಣ ಎಂದು ತಿಳಿದುಬಂದಿದೆ. ಅದರಲ್ಲೂ ಮೊದಲಿನಿಂದಲೂ ದಕ್ಷ ಅಧಿಕಾರಿಗಳಿಗೆ ಸರ್ಕಾರ ನೀಡಿದ ಕಿರುಕುಳ ನೋಡಿದರೆ ಸರ್ಕಾರದ್ದೇ ತಪ್ಪು ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಅಷ್ಟಕ್ಕೂ ಅಧಿಕಾರಿಯೊಬ್ಬರು ನಿಯಮಾವಳಿ ಉಲ್ಲೇಖಿಸಿ ಕಾರ್ಯನಿರ್ವಹಿಸುವುದೇ ತಪ್ಪು ಎಂದರೆ ಹೇಗೆ?

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search