• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಒಬ್ಬ ಐಎಎಸ್ ಅಧಿಕಾರಿಯನ್ನು ನಡೆಸಿಕೊಳ್ಳುವ ರೀತಿ ಇದೇನಾ?

TNN Correspondent Posted On March 29, 2018
0


0
Shares
  • Share On Facebook
  • Tweet It

ಬೆಂಗಳೂರು: ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ದಕ್ಷ ಅಧಿಕಾರಿಗಳನ್ನು ಹೇಗೆ ಕೆಟ್ಟದಾಗಿ ನಡೆಸಿಕೊಂಡರು ಎಂಬುದು ಇಡೀ ರಾಜ್ಯದ ಜನರಿಗೇ ಗೊತ್ತಿದೆ. ಡಿ.ಕೆ.ಅನುಮಾನಾಸ್ಪದ ಸಾವಿನ ತನಿಖೆ ವಿಫಲ, ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ, ಸಿ.ಶಿಖಾ ವರ್ಗಾವಣೆ, ಅನುಪಮಾ ಶೆಣೈ ಮಾಡಿದ ಆರೋಪಗಳೆಲ್ಲವೂ ರಾಜ್ಯ ಸರ್ಕಾರದ ಅಧಿಕಾರ ದರ್ಪಕ್ಕೆ ಹಿಡಿದ ಕನ್ನಡಿಯಾಗಿದೆ.

ಈಗಲೂ ಸರ್ಕಾರ ತನ್ನ ದರ್ಪವನ್ನು ಮುಂದುವರಿಸಿದ್ದು, ಒಬ್ಬ ಐಎಎಸ್ ಅಧಿಕಾರಿಯನ್ನು ಕೆಟ್ಟದಾಗಿ ನಡೆಸಿಕೊಂಡಿದೆ. ಕಳೆದ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಯೊಬ್ಬರನ್ನು ಅವಮಾನಗೊಳಿಸಿದ ಹಿನ್ನೆಲೆಯಲ್ಲಿ ಆ ಅಧಿಕಾರಿ ಮನನೊಂದು ರಜೆ ಮೇಲೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಗಣಿ ಕಾರ್ಯದರ್ಶಿ ರೇಜೇಂದರ್ ಕುಮಾರ್ ಕಟಾರಿಯಾ ಅವರು ಸಚಿವರೊಬ್ಬರಿಗೆ ಅನುಕೂಲವಾಗುವ ಹಾಗೆ ಗಣಿ ಗುತ್ತಿಗೆ ನೀಡಲಿಲ್ಲ ಎಂಬ ಕಾರಣಕ್ಕಾಗಿ ಆ ಸಚಿವರು ಅವಮಾನ ಮಾಡಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಆದರೆ ಈ ಕುರಿತು ಆ ಸಚಿವ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅಧಿಕಾರಿಯ ಮೇಲೆಯೇ ಆರೋಪ ಮಾಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಕಟಾರಿಯಾ ಅವರು ಬರೀ ನಿಯಮ ಪುಸ್ತಕವನ್ನೇ ಉಲ್ಲೇಖಿಸುತ್ತಿದ್ದು, ಇತರ ಅಧಿಕಾರಿಗಳು ಸಹ ಅವರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜಕೀಯ ಪ್ರೇರಣೆ ಬಿಟ್ಟು ಬರೀ ನಿಯಮಾವಳಿಯನ್ನೇ ಉಲ್ಲೇಖಿಸಿದ ಕಾರಣ ಖಾರವಾಗಿ ಪ್ರತಿಕ್ರಿಯಿಸಬೇಕಾಗಿ ಬಂತು ಎಂದು ತಿಳಿಸಿದ್ದಾರೆ.

ಆದರೆ, ತಮಗೆ ಅನುಕೂಲವಾಗದಂತೆ ಗಣಿ ಗುತ್ತಿಗೆ ನೀಡಲು ಒಪ್ಪದ್ದೇ ಅಧಿಕಾರಿಯನ್ನು ಅವಮಾನಿಸಲು ಕಾರಣ ಎಂದು ತಿಳಿದುಬಂದಿದೆ. ಅದರಲ್ಲೂ ಮೊದಲಿನಿಂದಲೂ ದಕ್ಷ ಅಧಿಕಾರಿಗಳಿಗೆ ಸರ್ಕಾರ ನೀಡಿದ ಕಿರುಕುಳ ನೋಡಿದರೆ ಸರ್ಕಾರದ್ದೇ ತಪ್ಪು ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಅಷ್ಟಕ್ಕೂ ಅಧಿಕಾರಿಯೊಬ್ಬರು ನಿಯಮಾವಳಿ ಉಲ್ಲೇಖಿಸಿ ಕಾರ್ಯನಿರ್ವಹಿಸುವುದೇ ತಪ್ಪು ಎಂದರೆ ಹೇಗೆ?

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search