• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಒಬ್ಬ ಐಎಎಸ್ ಅಧಿಕಾರಿಯನ್ನು ನಡೆಸಿಕೊಳ್ಳುವ ರೀತಿ ಇದೇನಾ?

TNN Correspondent Posted On March 29, 2018


  • Share On Facebook
  • Tweet It

ಬೆಂಗಳೂರು: ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ದಕ್ಷ ಅಧಿಕಾರಿಗಳನ್ನು ಹೇಗೆ ಕೆಟ್ಟದಾಗಿ ನಡೆಸಿಕೊಂಡರು ಎಂಬುದು ಇಡೀ ರಾಜ್ಯದ ಜನರಿಗೇ ಗೊತ್ತಿದೆ. ಡಿ.ಕೆ.ಅನುಮಾನಾಸ್ಪದ ಸಾವಿನ ತನಿಖೆ ವಿಫಲ, ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ, ಸಿ.ಶಿಖಾ ವರ್ಗಾವಣೆ, ಅನುಪಮಾ ಶೆಣೈ ಮಾಡಿದ ಆರೋಪಗಳೆಲ್ಲವೂ ರಾಜ್ಯ ಸರ್ಕಾರದ ಅಧಿಕಾರ ದರ್ಪಕ್ಕೆ ಹಿಡಿದ ಕನ್ನಡಿಯಾಗಿದೆ.

ಈಗಲೂ ಸರ್ಕಾರ ತನ್ನ ದರ್ಪವನ್ನು ಮುಂದುವರಿಸಿದ್ದು, ಒಬ್ಬ ಐಎಎಸ್ ಅಧಿಕಾರಿಯನ್ನು ಕೆಟ್ಟದಾಗಿ ನಡೆಸಿಕೊಂಡಿದೆ. ಕಳೆದ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಯೊಬ್ಬರನ್ನು ಅವಮಾನಗೊಳಿಸಿದ ಹಿನ್ನೆಲೆಯಲ್ಲಿ ಆ ಅಧಿಕಾರಿ ಮನನೊಂದು ರಜೆ ಮೇಲೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಗಣಿ ಕಾರ್ಯದರ್ಶಿ ರೇಜೇಂದರ್ ಕುಮಾರ್ ಕಟಾರಿಯಾ ಅವರು ಸಚಿವರೊಬ್ಬರಿಗೆ ಅನುಕೂಲವಾಗುವ ಹಾಗೆ ಗಣಿ ಗುತ್ತಿಗೆ ನೀಡಲಿಲ್ಲ ಎಂಬ ಕಾರಣಕ್ಕಾಗಿ ಆ ಸಚಿವರು ಅವಮಾನ ಮಾಡಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಆದರೆ ಈ ಕುರಿತು ಆ ಸಚಿವ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅಧಿಕಾರಿಯ ಮೇಲೆಯೇ ಆರೋಪ ಮಾಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಕಟಾರಿಯಾ ಅವರು ಬರೀ ನಿಯಮ ಪುಸ್ತಕವನ್ನೇ ಉಲ್ಲೇಖಿಸುತ್ತಿದ್ದು, ಇತರ ಅಧಿಕಾರಿಗಳು ಸಹ ಅವರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜಕೀಯ ಪ್ರೇರಣೆ ಬಿಟ್ಟು ಬರೀ ನಿಯಮಾವಳಿಯನ್ನೇ ಉಲ್ಲೇಖಿಸಿದ ಕಾರಣ ಖಾರವಾಗಿ ಪ್ರತಿಕ್ರಿಯಿಸಬೇಕಾಗಿ ಬಂತು ಎಂದು ತಿಳಿಸಿದ್ದಾರೆ.

ಆದರೆ, ತಮಗೆ ಅನುಕೂಲವಾಗದಂತೆ ಗಣಿ ಗುತ್ತಿಗೆ ನೀಡಲು ಒಪ್ಪದ್ದೇ ಅಧಿಕಾರಿಯನ್ನು ಅವಮಾನಿಸಲು ಕಾರಣ ಎಂದು ತಿಳಿದುಬಂದಿದೆ. ಅದರಲ್ಲೂ ಮೊದಲಿನಿಂದಲೂ ದಕ್ಷ ಅಧಿಕಾರಿಗಳಿಗೆ ಸರ್ಕಾರ ನೀಡಿದ ಕಿರುಕುಳ ನೋಡಿದರೆ ಸರ್ಕಾರದ್ದೇ ತಪ್ಪು ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಅಷ್ಟಕ್ಕೂ ಅಧಿಕಾರಿಯೊಬ್ಬರು ನಿಯಮಾವಳಿ ಉಲ್ಲೇಖಿಸಿ ಕಾರ್ಯನಿರ್ವಹಿಸುವುದೇ ತಪ್ಪು ಎಂದರೆ ಹೇಗೆ?

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search