• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಒಬ್ಬ ಐಎಎಸ್ ಅಧಿಕಾರಿಯನ್ನು ನಡೆಸಿಕೊಳ್ಳುವ ರೀತಿ ಇದೇನಾ?

TNN Correspondent Posted On March 29, 2018
0


0
Shares
  • Share On Facebook
  • Tweet It

ಬೆಂಗಳೂರು: ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ದಕ್ಷ ಅಧಿಕಾರಿಗಳನ್ನು ಹೇಗೆ ಕೆಟ್ಟದಾಗಿ ನಡೆಸಿಕೊಂಡರು ಎಂಬುದು ಇಡೀ ರಾಜ್ಯದ ಜನರಿಗೇ ಗೊತ್ತಿದೆ. ಡಿ.ಕೆ.ಅನುಮಾನಾಸ್ಪದ ಸಾವಿನ ತನಿಖೆ ವಿಫಲ, ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ, ಸಿ.ಶಿಖಾ ವರ್ಗಾವಣೆ, ಅನುಪಮಾ ಶೆಣೈ ಮಾಡಿದ ಆರೋಪಗಳೆಲ್ಲವೂ ರಾಜ್ಯ ಸರ್ಕಾರದ ಅಧಿಕಾರ ದರ್ಪಕ್ಕೆ ಹಿಡಿದ ಕನ್ನಡಿಯಾಗಿದೆ.

ಈಗಲೂ ಸರ್ಕಾರ ತನ್ನ ದರ್ಪವನ್ನು ಮುಂದುವರಿಸಿದ್ದು, ಒಬ್ಬ ಐಎಎಸ್ ಅಧಿಕಾರಿಯನ್ನು ಕೆಟ್ಟದಾಗಿ ನಡೆಸಿಕೊಂಡಿದೆ. ಕಳೆದ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಯೊಬ್ಬರನ್ನು ಅವಮಾನಗೊಳಿಸಿದ ಹಿನ್ನೆಲೆಯಲ್ಲಿ ಆ ಅಧಿಕಾರಿ ಮನನೊಂದು ರಜೆ ಮೇಲೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಗಣಿ ಕಾರ್ಯದರ್ಶಿ ರೇಜೇಂದರ್ ಕುಮಾರ್ ಕಟಾರಿಯಾ ಅವರು ಸಚಿವರೊಬ್ಬರಿಗೆ ಅನುಕೂಲವಾಗುವ ಹಾಗೆ ಗಣಿ ಗುತ್ತಿಗೆ ನೀಡಲಿಲ್ಲ ಎಂಬ ಕಾರಣಕ್ಕಾಗಿ ಆ ಸಚಿವರು ಅವಮಾನ ಮಾಡಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಆದರೆ ಈ ಕುರಿತು ಆ ಸಚಿವ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅಧಿಕಾರಿಯ ಮೇಲೆಯೇ ಆರೋಪ ಮಾಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಕಟಾರಿಯಾ ಅವರು ಬರೀ ನಿಯಮ ಪುಸ್ತಕವನ್ನೇ ಉಲ್ಲೇಖಿಸುತ್ತಿದ್ದು, ಇತರ ಅಧಿಕಾರಿಗಳು ಸಹ ಅವರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜಕೀಯ ಪ್ರೇರಣೆ ಬಿಟ್ಟು ಬರೀ ನಿಯಮಾವಳಿಯನ್ನೇ ಉಲ್ಲೇಖಿಸಿದ ಕಾರಣ ಖಾರವಾಗಿ ಪ್ರತಿಕ್ರಿಯಿಸಬೇಕಾಗಿ ಬಂತು ಎಂದು ತಿಳಿಸಿದ್ದಾರೆ.

ಆದರೆ, ತಮಗೆ ಅನುಕೂಲವಾಗದಂತೆ ಗಣಿ ಗುತ್ತಿಗೆ ನೀಡಲು ಒಪ್ಪದ್ದೇ ಅಧಿಕಾರಿಯನ್ನು ಅವಮಾನಿಸಲು ಕಾರಣ ಎಂದು ತಿಳಿದುಬಂದಿದೆ. ಅದರಲ್ಲೂ ಮೊದಲಿನಿಂದಲೂ ದಕ್ಷ ಅಧಿಕಾರಿಗಳಿಗೆ ಸರ್ಕಾರ ನೀಡಿದ ಕಿರುಕುಳ ನೋಡಿದರೆ ಸರ್ಕಾರದ್ದೇ ತಪ್ಪು ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಅಷ್ಟಕ್ಕೂ ಅಧಿಕಾರಿಯೊಬ್ಬರು ನಿಯಮಾವಳಿ ಉಲ್ಲೇಖಿಸಿ ಕಾರ್ಯನಿರ್ವಹಿಸುವುದೇ ತಪ್ಪು ಎಂದರೆ ಹೇಗೆ?

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search