• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಒಬ್ಬ ಐಎಎಸ್ ಅಧಿಕಾರಿಯನ್ನು ನಡೆಸಿಕೊಳ್ಳುವ ರೀತಿ ಇದೇನಾ?

TNN Correspondent Posted On March 29, 2018
0


0
Shares
  • Share On Facebook
  • Tweet It

ಬೆಂಗಳೂರು: ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ದಕ್ಷ ಅಧಿಕಾರಿಗಳನ್ನು ಹೇಗೆ ಕೆಟ್ಟದಾಗಿ ನಡೆಸಿಕೊಂಡರು ಎಂಬುದು ಇಡೀ ರಾಜ್ಯದ ಜನರಿಗೇ ಗೊತ್ತಿದೆ. ಡಿ.ಕೆ.ಅನುಮಾನಾಸ್ಪದ ಸಾವಿನ ತನಿಖೆ ವಿಫಲ, ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ, ಸಿ.ಶಿಖಾ ವರ್ಗಾವಣೆ, ಅನುಪಮಾ ಶೆಣೈ ಮಾಡಿದ ಆರೋಪಗಳೆಲ್ಲವೂ ರಾಜ್ಯ ಸರ್ಕಾರದ ಅಧಿಕಾರ ದರ್ಪಕ್ಕೆ ಹಿಡಿದ ಕನ್ನಡಿಯಾಗಿದೆ.

ಈಗಲೂ ಸರ್ಕಾರ ತನ್ನ ದರ್ಪವನ್ನು ಮುಂದುವರಿಸಿದ್ದು, ಒಬ್ಬ ಐಎಎಸ್ ಅಧಿಕಾರಿಯನ್ನು ಕೆಟ್ಟದಾಗಿ ನಡೆಸಿಕೊಂಡಿದೆ. ಕಳೆದ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಯೊಬ್ಬರನ್ನು ಅವಮಾನಗೊಳಿಸಿದ ಹಿನ್ನೆಲೆಯಲ್ಲಿ ಆ ಅಧಿಕಾರಿ ಮನನೊಂದು ರಜೆ ಮೇಲೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಗಣಿ ಕಾರ್ಯದರ್ಶಿ ರೇಜೇಂದರ್ ಕುಮಾರ್ ಕಟಾರಿಯಾ ಅವರು ಸಚಿವರೊಬ್ಬರಿಗೆ ಅನುಕೂಲವಾಗುವ ಹಾಗೆ ಗಣಿ ಗುತ್ತಿಗೆ ನೀಡಲಿಲ್ಲ ಎಂಬ ಕಾರಣಕ್ಕಾಗಿ ಆ ಸಚಿವರು ಅವಮಾನ ಮಾಡಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಆದರೆ ಈ ಕುರಿತು ಆ ಸಚಿವ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅಧಿಕಾರಿಯ ಮೇಲೆಯೇ ಆರೋಪ ಮಾಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಕಟಾರಿಯಾ ಅವರು ಬರೀ ನಿಯಮ ಪುಸ್ತಕವನ್ನೇ ಉಲ್ಲೇಖಿಸುತ್ತಿದ್ದು, ಇತರ ಅಧಿಕಾರಿಗಳು ಸಹ ಅವರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜಕೀಯ ಪ್ರೇರಣೆ ಬಿಟ್ಟು ಬರೀ ನಿಯಮಾವಳಿಯನ್ನೇ ಉಲ್ಲೇಖಿಸಿದ ಕಾರಣ ಖಾರವಾಗಿ ಪ್ರತಿಕ್ರಿಯಿಸಬೇಕಾಗಿ ಬಂತು ಎಂದು ತಿಳಿಸಿದ್ದಾರೆ.

ಆದರೆ, ತಮಗೆ ಅನುಕೂಲವಾಗದಂತೆ ಗಣಿ ಗುತ್ತಿಗೆ ನೀಡಲು ಒಪ್ಪದ್ದೇ ಅಧಿಕಾರಿಯನ್ನು ಅವಮಾನಿಸಲು ಕಾರಣ ಎಂದು ತಿಳಿದುಬಂದಿದೆ. ಅದರಲ್ಲೂ ಮೊದಲಿನಿಂದಲೂ ದಕ್ಷ ಅಧಿಕಾರಿಗಳಿಗೆ ಸರ್ಕಾರ ನೀಡಿದ ಕಿರುಕುಳ ನೋಡಿದರೆ ಸರ್ಕಾರದ್ದೇ ತಪ್ಪು ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಅಷ್ಟಕ್ಕೂ ಅಧಿಕಾರಿಯೊಬ್ಬರು ನಿಯಮಾವಳಿ ಉಲ್ಲೇಖಿಸಿ ಕಾರ್ಯನಿರ್ವಹಿಸುವುದೇ ತಪ್ಪು ಎಂದರೆ ಹೇಗೆ?

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search