• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ತಾಯಿಯ ಬೇಗುದಿ, ಉಗ್ರರ ಗುಂಪು ಸೇರಿರುವ ಆ ಮಗನಿಗೆ ಕೇಳುವುದೇ? ವಾಪಸ್ ಬರುವನೇ?

TNN Correspondent Posted On March 30, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರ ಎಂದರೇನೆ ಹಾಗೆ. ಹೆಸರಿಗೆ ಅದು ಭೂಮಿಯ ಮೇಲಿನ ಸ್ವರ್ಗ ಎಂದಾದರೂ, ಅಲ್ಲಿ ಯಾವಾಗ ಗುಂಡಿನ ಮೊರೆತ ಆರಂಭವಾಗುತ್ತದೆಯೋ, ಯಾವ ಮನೆಯಿಂದ ಹೊರಗೆ ಹೋದ ವ್ಯಕ್ತಿ ಯಾವ ಉಗ್ರರ ಗುಂಪು ಸೇರುತ್ತಾನೋ ಎಂಬ ದುಗುಡ ಕಾಡುತ್ತದೆ.

ಈಗ ಇಂಥಾದ್ದೇ ಒಂದು ದುಗುಡ, ಭಯ, ಯಾತನೆ ಕಾಶ್ಮೀರದ ತಾಯಿಯೊಬ್ಬರಿಗೆ ಕಾಡುತ್ತಿದೆ. ಹೌದು, ಹತ್ತನೇ ಕ್ಲಾಸ ಓದುತ್ತಿದ್ದ ಮುದ್ದಿನ ಮಗ, ಪ್ರಾರ್ಥನೆಗೆಂದು ತೆರಳಿ ಮನೆಗೇ ಬಂದಿಲ್ಲ. ಅಲ್ಲದೆ ಈಗ ಆತ ಉಗ್ರರ ಗುಂಪು ಸೇರಿದ್ದಾನೆ ಎಂದು ತಿಳಿದ ಆ ತಾಯಿ, ದಯಮಾಡಿ ಮನೆಗೆ ಬಾ ಮಗನೆ ಎಂದು ವಿಜ್ಞಾಪಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ತನ್ನ ಮಗ ಉಗ್ರರ ಗುಂಪು ಸೇರಿದ್ದಾಗಿಯೂ, ಆತನ ಫೋಟೋ ನೋಡಿದ್ದಾಗಿಯೂ ಮಾಹಿತಿ ನೀಡಿರುವ ಮೈಮೂನಾ, ಫೋಟೋದಲ್ಲಿ ಕಾಣುತ್ತಿರುವ ಆತ ನನ್ನ ಮಗನೇ ಆಗಿದ್ದು, ಉಗ್ರ ಸಂಘಟನೆ ತೊರೆದು ಮನೆಗೆ ಬಾ ಎಂದು ಮನವಿ ಮಾಡಿದ್ದಾರೆ.

ಶ್ರೀನಗರದ ಖನ್ಯಾರ್ ಎಂಬ ಪ್ರದೇಶದ ವಾಸಿಯಾಗಿರುವ ಇವರ ಮಗ ಹಲವು ತಿಂಗಳಿನಿಂದ ಕಾಣೆಯಾಗಿದ್ದಾನೆ. ಗುಪ್ತಚರ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕರಣ, ಈಕೆಯ ಮಗ 2016ರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಹತ್ಯೆ ಮಾಡಿದ ಬಳಿಕ ಇದೇ ಸಂಘಟನೆ ಸೇರಿದ್ದಾನೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ, ಜಮ್ಮು-ಕಾಶ್ಮೀರದಲ್ಲಿ ಕೆಲವು ಮೂಲಭೂತವಾದಿಗಳ ಉಪಟಳದಿಂದ ಹಲವು ಉಗ್ರರು ಉಗ್ರಸಂಘಟನೆ ಸೇರುತ್ತಿದ್ದು, ಹೀಗೆ ಸೇರುವ ಮುನ್ನ ಈ ತಾಯಿಯ ಮನವಿ, ಅಭಿಲಾಷೆ, ದುಃಖ ನೋಡುವುದು ಒಳಿತು.

0
Shares
  • Share On Facebook
  • Tweet It




Trending Now
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
  • Popular Posts

    • 1
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 2
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 3
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 4
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 5
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!

  • Privacy Policy
  • Contact
© Tulunadu Infomedia.

Press enter/return to begin your search