• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಚುನಾವಣೆ ಬಳಿಕವೂ ಮೋದಿ ಅಭಿವೃದ್ಧಿ ಮಂತ್ರ, ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಶೇ.100ರಷ್ಟು ಅನುದಾನ ಕೇಂದ್ರದ್ದೇ!

TNN Correspondent Posted On March 30, 2018


  • Share On Facebook
  • Tweet It

ದೆಹಲಿ: ತ್ರಿಪುರಾ, ನಾಗಾಲೆಂಡ್ ನಲ್ಲಿ ಚುನಾವಣೆ ಸಮೀಪಿಸುತ್ತಿರುವಾಗ ಕೇಂದ್ರ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿತ್ತು. ಆಗ ಕೆಲವು ವಿರೋಧ ಪಕ್ಷಗಳು ಇದು ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಾಡಿರುವ ಗಿಮಿಕ್ ಎಂದು ಬೊಬ್ಬೆ ಹಾಕಿದ್ದವು.

ಆದರೆ, ವಿರೋಧಿಗಳ ಈ ಹುರುಳಿಲ್ಲದ ಆರೋಪವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಮಾಡಿದ್ದು, ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಶೇ.100ರಷ್ಟು ಅನುದಾನ ನೀಡಲು ನಿರ್ಧಾರಿಸಿದ್ದಾರೆ.

ಈ ಕುರಿತು ಸಚಿವ ಸಂಪುಟ ಸಭೆ ಬಳಿಕ ಈಶಾನ್ಯ ಪ್ರದೇಶಾಭಿವೃದ್ಧಿ ಕೇಂದ್ರ ಖಾತೆ ರಾಜ್ಯ ಸಚಿವ ಜೀತೇಂದ್ರ ಸಿಂಗ್ ಮಾಹಿತಿ ನೀಡಿದ್ದು, ಈಶಾನ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಶೇ.100ರಷ್ಟು ಅನುದಾನ ನೀಡಲು ಮುಂದಾಗಿದ್ದು, ಪ್ರಸ್ತುತ ಬರೋಬ್ಬರಿ 4,500 ಕೋಟಿ ರೂ. ವಿನಿಯೋಗಿಸಿದೆ ಎಂದು ವಿವರಿಸಿದ್ದಾರೆ.

ಅಲ್ಲದೆ ಇದೊಂದು ಐತಿಹಾಸಿಕ ನಿರ್ಧಾರವಾಗಿದ್ದು, ಇದುವರೆಗೆ ಕೇಂದ್ರದ ಯೋಜನೆಗಳಿಗೆ ಕೇಂದ್ರ ಸರ್ಕಾರ ಶೇ.90ರಷ್ಟು ಹಾಗೂ ರಾಜ್ಯ ಸರ್ಕಾರಗಳು ಶೇ.10ರಷ್ಟು ಅನುದಾನ ವಿನಿಯೋಗಿಸುತ್ತಿದ್ದವು. ಆದರೆ ಈಶಾನ್ಯ ರಾಜ್ಯಗಳ ಅಭಿವೃದ್ಧಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಆಸಕ್ತಿ ವಹಿಸಿರುವುದರಿಂದ ಇನ್ನು ಮುಂದೆ ನೂರಕ್ಕೆ ನೂರರಷ್ಟು ಅನುದಾನವನ್ನು ಕೇಂದ್ರ ಸರ್ಕಾರವೇ ವಿನಿಯೋಗಿಸಲಿದೆ ಎಂದು ತಿಳಿಸಿದ್ದಾರೆ.

ಬಿದಿರು ಬೆಳೆ ಅಭಿವೃದ್ಧಿ, ರಸ್ತೆ ನಿರ್ಮಾಣ, ಪ್ರಾದೇಶಿಕ ಪ್ರವಾಸೋದ್ಯಮ, ಉನ್ನತ ಶಿಕ್ಷಣ ಸೇರಿ ಹಲವು ಯೋಜನೆಗಳಿಗೆ ಕೇಂದ್ರ ಸರ್ಕಾರ ಬರೋಬ್ಬರಿ ಒಂದು ಸಾವಿರ ಕೋಟಿ ರೂ. ನೀಡುವುದಾಗಿ ಘೋಷಿಸಿದ್ದು, 2020ರ ವೇಳೆಗೆ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಿದೆ. ಒಟ್ಟಿನಲ್ಲಿ ವಿರೋಧಿಗಳ ಬೊಬ್ಬೆಯ ನಡುವೆಯೂ ಕೇಂದ್ರ ಸರ್ಕಾರ ಭಾರತದ ಅಭಿವೃದ್ಧಿ ಪಣತೊಟ್ಟಿರುವುದಂತೂ ದಿಟ.

  • Share On Facebook
  • Tweet It


- Advertisement -


Trending Now
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
Leave A Reply

  • Recent Posts

    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
  • Popular Posts

    • 1
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 2
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 3
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 4
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 5
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search