• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಫೇಸ್ ಬುಕ್ ನಿಂದಲೇ ಪಾಕಿ ಐಎಸ್ ಐ ಮಾಡುತ್ತೇ ಹನಿಟ್ರ್ಯಾಪ್, ಇಲ್ಲಿದೇ ನೋಡಿ ಪ್ರಖರ ಸಾಕ್ಷಿ

TNN Correspondent Posted On March 31, 2018


  • Share On Facebook
  • Tweet It

ಅಮೃತಸರ: ಭಾರತದ ವಿರುದ್ಧ ಪಾಕಿಸ್ತಾನದ ಕುತಂತ್ರ ಬುದ್ಧಿ ಮುಂದುವರಿದಿದೆ. ಭಾರತ ಎಷ್ಟೇ ಶಾಂತಿ ಭಯಸಿದರೂ ಒಂದಲ್ಲ ಒಂದು ರೀತಿ ಸದಾ ಕೇಡುವ ಭಯಸುವ ಪಾಕಿಸ್ತಾನ ತನ್ನ ಷಡ್ಯಂತ್ರ ಸದಾ ಕಾಪಿಟ್ಟುಕೊಳ್ಳುತ್ತಿದೆ. ಧರ್ಮದ ಆಧಾರದಲ್ಲಿ ವಿಭಜನೆಯಾದ ನಂತರವೂ ಪಾಕಿಸ್ತಾನ ಸದಾ ಭಾರತದಲ್ಲಿ ದುಷ್ಕೃತ್ಯ ನಡೆಸುವ ಹಳೆ ಚಾಳಿಯಲ್ಲೇ ದಿನ ದೂಡುತ್ತಿದೆ. ಇದೀಗ ಪಾಕಿಸ್ತಾನದ ಷಡ್ಯಂತ್ರದ ಚಾಳಿಗೆ ಮತ್ತೊಂದು ಪ್ರಬಲ ಸಾಕ್ಷಿ ದೊರೆತಿದ್ದು, ಹನಿಟ್ರ್ಯಾಪ್ ಮೂಲಕ ಭಾರತದ ವ್ಯಕ್ತಿಯೊಬ್ಬನನ್ನು ಬಲೆಗೆ ಹಾಕಿಕೊಂಡು ಗುಪ್ತಚರನಂತೆ ಬಳಸಿಕೊಳ್ಳಲಾಗಿದೆ.

ಪಂಜಾಬ್ ನ ರವಿಕುಮಾರ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ ಐ ಗೆ ಹನಿಟ್ರ್ಯಾಪ್ ಗೆ ಒಳಗಾದವರು. ಕಳೆದ ಏಳೆಂಟು ತಿಂಗಳಿಂದ ಫೇಸ್ ಬುಕ್ ಮೂಲಕ ರವಿಕುಮಾರ್ ಅವರನ್ನು ಕುತಂತ್ರದಿಂದ ಸಂಪರ್ಕಿಸಿದ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ ಐ ಹನಿಟ್ರ್ಯಾಪ್ ಮಾಡಿದೆ. ಅಲ್ಲದೇ ರವಿಕುಮಾರ ಅವರನ್ನು ಐಎಸ್ ಐ ಎಜೆಂಟ್ ಆಗಿ ಪರಿವರ್ತಿಸಿಕೊಂಡು ಬಳಸಿಕೊಳ್ಳಲಾಗುತ್ತಿತ್ತು.

ಭಾರತೀಯ ಗುಪ್ತಚರ ಸಂಸ್ಥೆ ಪಂಜಾಬ್ ಪೊಲೀಸ್ ಮತ್ತು ಸೈನ್ಯಕ್ಕೆ ಈ ಮಾಹಿತಿ ನೀಡಿದ್ದು, ಪಂಜಾಬ್ ವಿಶೇಷ ತನಿಖಾ ದಳ ಸೈನ್ಯದ ಸಹಾಯದೊಂದಿಗೆ ಕಾರ್ಯಾಚರಣೆ ನಡೆಸಿ, ರವಿಕುಮಾರ್ ನನ್ನು ಅಮೃತಸರ ಜಿಲ್ಲೆಯ ಚಾತಿವಿಂಡ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿದೆ.

ಮಹತ್ವದ ಮಾಹಿತಿ ನೀಡಿದ್ದ ಭೂಪ: ರವಿಕುಮಾರ ಭಾರತೀಯ ಸೇನೆಯ ವಿಭಾಗಗಳು, ಬಂಕರ್ ಗಳ ರಚನೆ, ಗಡಿಯಲ್ಲಿ ಸೈನ್ಯದ ತಯಾರಿ, ಸೈನ್ಯದ ವಾಹನಗಳ ತಾಕತ್ತು, ತರಬೇತಿ ಶಿಬಿರಗಳ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದಾನೆ ಎನ್ನಲಾಗಿದೆ. ಅಲ್ಲದೇ ಭಾರತೀಯ ಸೈನ್ಯದ ನಿಷೇಧಿತ ಪ್ರದೇಶಗಳ ಚಿತ್ರಗಳನ್ನು ನೀಡಿದ್ದಾನೆ. ಈ ಎಲ್ಲ ಸಂಚಿನ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಾಕಿಸ್ತಾನದ ಸಂಸ್ಥೆಯೊಂದು ಯುವತಿಯರ ಹೆಸರಲ್ಲಿ ಫೇಸ್ ಬುಕ್ ಅಕೌಂಟ್ ಆರಂಭಿಸಿ, ಭಾರತದ ನಿರುದ್ಯೋಗಿ ಯುವಕರು, ನಿವೃತ್ ಅಧಿಕಾರಿಗಳು, ಸೈನ್ಯದ ಅಧಿಕಾರಿಗಳನ್ನು ಬಲೆಗೆ ಹಾಕಿಕೊಳ್ಳುತ್ತದೆ. ಆ ಮೂಲಕ ಭಾರತದ ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search