• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರುಣಾಚಲ ಪ್ರದೇಶದಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ, ಚೀನಾಕ್ಕೆ ಭಾರತದ ತಪರಾಕಿ

TNN Correspondent Posted On April 1, 2018
0


0
Shares
  • Share On Facebook
  • Tweet It

ಗುವಾಹಟಿ: ಗಡಿಯಲ್ಲಿ ಚೀನಾ ಚುಟುವಟಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತದ ಅರುಣಾಚಲ ಪ್ರದೇಶದ ದಿಬಂಗ್, ದೌ-ದೆಲಾಯಿ ಹಾಗೂ ಲೋಹಿತ್ ಕಣಿವೆ ಬೆಟ್ಟದ ಪ್ರದೇಶದಲ್ಲಿ ಹೆಚ್ಚುವರಿಯಾಗಿ ಸೈನಿಕರನ್ನು ನಿಯೋಜಿಸಿದ್ದು, ಚೀನಾಗೆ ತಪರಾಕಿ ನೀಡಿದೆ.

ಕಳೆದ ವರ್ಷ ಅಸ್ಸಾಂನ ಡೊಕ್ಲಾಂ ಗಡಿ ಪ್ರದೇಶದಲ್ಲಿ 73 ದಿನ ಸೈನಿಕರನ್ನು ನಿಯೋಜಿಸಿ ಉದ್ಧಟತನ ಮೆರೆದಿದ್ದ ಚೀನಾಕ್ಕೆ ಈ ಮೂಲಕ ಭಾರತ ಸ್ಪಷ್ಟ ಸಂದೇಶವನ್ನು ರವಾನಿಸಿದ್ದು, ಭಾರತ ಯಾವ ಪರಿಸ್ಥಿತಿ ಬೇಕಾದರೂ ಎದುರಿಸಲು ಸಿದ್ಧ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದೆ.

ಈ ಮೂರು ಪ್ರದೇಶಗಳ ಮೇಲೆ ಕಣ್ಣಿಡಲು ಹಾಗೂ ಭದ್ರತೆ ಒದಗಿಸಲು ಕಿಬಿತು ಎಂಬ ಪ್ರದೇಶದಲ್ಲಿ ಭಾರತೀಯ ಸೇನಾ ನೆಲೆಯನ್ನು ಸ್ಥಾಪಿಸಲಾಗಿದ್ದು, ಈ ಪ್ರದೇಶದ ಸೇನಾ ಮುಖ್ಯಸ್ಥ ಮಾಹಿತಿ ನೀಡಿದ್ದು, ಡೋಕ್ಲಾಂನಲ್ಲಿ ಈ ಹಿಂದೆ ಉಂಟಾಗಿದ್ದ ಬಿಕ್ಕಟ್ಟನ್ನು ಗಮನಿಸಿ ಈ ಪ್ರದೇಶದಲ್ಲಿ ಹೆಚ್ಚುವರಿಯಾಗಿ ಸೈನಿಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಗಡಿಯಲ್ಲಿ ನಾವು ಸೈನಿಕರನ್ನು ನಿಯೋಜಿಸಿ ಸುಮ್ಮನಿರುವುದಿಲ್ಲ. ಬದಲಾಗಿ ಚೀನಾ ಯಾವುದೇ ಉಪಟಳ ಮಾಡಿದರೂ ನಿಗ್ರಹಿಸುತ್ತೇವೆ ಹಾಗೂ ಎಂತಹುದೇ ಪರಿಸ್ಥಿತಿಯನ್ನು ಬೇಕಾದರೂ ಎದುರಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಿನಲ್ಲಿ ಸ್ನೇಹ, ಸೌಹಾರ್ದದ ಮಾತುಕತೆಯಾಡಿ, ಬೆನ್ನಿಗೆ ಚೂರಿ ಹಾಕುವ ಪಾಕಿಸ್ತಾನದಂತೆ ಚೀನಾವೂ ಕಪಟತನ ಮಾಡುತ್ತಿದ್ದು, ಅದಕ್ಕೆ ಭಾರತವೂ ಗಡಿಯಲ್ಲಿ ಸೈನಿಕರನ್ನು ನಿಯೋಜಿಸುವ ಮೂಲಕ ಸರಿಯಾಗಿಯೇ ತಪರಾಕಿ ನೀಡಿದೆ.

 

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search