• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರುಣಾಚಲ ಪ್ರದೇಶದಲ್ಲಿ ಹೆಚ್ಚುವರಿ ಸೈನಿಕರ ನಿಯೋಜನೆ, ಚೀನಾಕ್ಕೆ ಭಾರತದ ತಪರಾಕಿ

TNN Correspondent Posted On April 1, 2018
0


0
Shares
  • Share On Facebook
  • Tweet It

ಗುವಾಹಟಿ: ಗಡಿಯಲ್ಲಿ ಚೀನಾ ಚುಟುವಟಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತದ ಅರುಣಾಚಲ ಪ್ರದೇಶದ ದಿಬಂಗ್, ದೌ-ದೆಲಾಯಿ ಹಾಗೂ ಲೋಹಿತ್ ಕಣಿವೆ ಬೆಟ್ಟದ ಪ್ರದೇಶದಲ್ಲಿ ಹೆಚ್ಚುವರಿಯಾಗಿ ಸೈನಿಕರನ್ನು ನಿಯೋಜಿಸಿದ್ದು, ಚೀನಾಗೆ ತಪರಾಕಿ ನೀಡಿದೆ.

ಕಳೆದ ವರ್ಷ ಅಸ್ಸಾಂನ ಡೊಕ್ಲಾಂ ಗಡಿ ಪ್ರದೇಶದಲ್ಲಿ 73 ದಿನ ಸೈನಿಕರನ್ನು ನಿಯೋಜಿಸಿ ಉದ್ಧಟತನ ಮೆರೆದಿದ್ದ ಚೀನಾಕ್ಕೆ ಈ ಮೂಲಕ ಭಾರತ ಸ್ಪಷ್ಟ ಸಂದೇಶವನ್ನು ರವಾನಿಸಿದ್ದು, ಭಾರತ ಯಾವ ಪರಿಸ್ಥಿತಿ ಬೇಕಾದರೂ ಎದುರಿಸಲು ಸಿದ್ಧ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದೆ.

ಈ ಮೂರು ಪ್ರದೇಶಗಳ ಮೇಲೆ ಕಣ್ಣಿಡಲು ಹಾಗೂ ಭದ್ರತೆ ಒದಗಿಸಲು ಕಿಬಿತು ಎಂಬ ಪ್ರದೇಶದಲ್ಲಿ ಭಾರತೀಯ ಸೇನಾ ನೆಲೆಯನ್ನು ಸ್ಥಾಪಿಸಲಾಗಿದ್ದು, ಈ ಪ್ರದೇಶದ ಸೇನಾ ಮುಖ್ಯಸ್ಥ ಮಾಹಿತಿ ನೀಡಿದ್ದು, ಡೋಕ್ಲಾಂನಲ್ಲಿ ಈ ಹಿಂದೆ ಉಂಟಾಗಿದ್ದ ಬಿಕ್ಕಟ್ಟನ್ನು ಗಮನಿಸಿ ಈ ಪ್ರದೇಶದಲ್ಲಿ ಹೆಚ್ಚುವರಿಯಾಗಿ ಸೈನಿಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಗಡಿಯಲ್ಲಿ ನಾವು ಸೈನಿಕರನ್ನು ನಿಯೋಜಿಸಿ ಸುಮ್ಮನಿರುವುದಿಲ್ಲ. ಬದಲಾಗಿ ಚೀನಾ ಯಾವುದೇ ಉಪಟಳ ಮಾಡಿದರೂ ನಿಗ್ರಹಿಸುತ್ತೇವೆ ಹಾಗೂ ಎಂತಹುದೇ ಪರಿಸ್ಥಿತಿಯನ್ನು ಬೇಕಾದರೂ ಎದುರಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಿನಲ್ಲಿ ಸ್ನೇಹ, ಸೌಹಾರ್ದದ ಮಾತುಕತೆಯಾಡಿ, ಬೆನ್ನಿಗೆ ಚೂರಿ ಹಾಕುವ ಪಾಕಿಸ್ತಾನದಂತೆ ಚೀನಾವೂ ಕಪಟತನ ಮಾಡುತ್ತಿದ್ದು, ಅದಕ್ಕೆ ಭಾರತವೂ ಗಡಿಯಲ್ಲಿ ಸೈನಿಕರನ್ನು ನಿಯೋಜಿಸುವ ಮೂಲಕ ಸರಿಯಾಗಿಯೇ ತಪರಾಕಿ ನೀಡಿದೆ.

 

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search