• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನೂ ತಿನ್ನಲ್ಲ, ತಿನ್ನಲು ಬಿಡಲ್ಲ ಎಂದ ಮೋದಿ ಈಗ ಮಲಗಲು ಸಹ ಬಿಡುತ್ತಿಲ್ಲವಂತೆ! ಏನಿದು? ಈ ಸುದ್ದಿ ಓದಿ!

TNN Correspondent Posted On April 2, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೇ ಹಾಗೆ, ಕುಳಿತಲ್ಲಿ ಕೂರಲಾರದ, ಸದಾ ಕೆಲಸವನ್ನೇ ಮಾಡುವ, ದೇಶಕ್ಕಾಗಿ ಹಲವು ವರ್ಷಗಳಿಂದ ರಜೆಯನ್ನೇ ತೆಗೆದುಕೊಳ್ಳದೆ ದುಡಿಯುವ, ದೇಶದ ಅಭಿವೃದ್ಧಿಯನ್ನೇ ಯೋಚಿಸು, ಸದಾ ಚಿಂತನಾಶೀಲರಾಗಿರುವ ವ್ಯಕ್ತಿ. ಒಬ್ಬ ದೇಶದ ನಾಯಕನಿಗಿರುವ ಪ್ರಮುಖ ಅಂಶಗಳು ಸಹ ಇವೆಯೇ.

ಹಾಗಂತ ದೇಶದ ನಾಯಕ ಮಾತ್ರ ಹೀಗೆ ಹಗಲಿರುಳು ಕೆಲಸ ಮಾಡಬೇಕಾ? ಉಳಿದವರೆಲ್ಲ ಸುಮ್ಮನಿದ್ದರೂ ಆದೀತೇ? ಇದನ್ನು ಮನಗಂಡ ಪ್ರಧಾನಿ ಮೋದಿ ಅವರು 2014ರ ಲೋಕಸಭೆ ಚುನಾವಣೆ ವೇಳೆ ನಾನು ತಿನ್ನುವುದಿಲ್ಲ, ಬೇರೆಯವರಿಗೂ ತಿನ್ನಲು ಬಿಡುವುದಿಲ್ಲ ಎಂದು ಹೇಳಿದ್ದು ಸುದ್ದಿಯಾಗಿತ್ತು. ಈಗ ಅದರಂತೆಯೇ ಸರ್ಕಾರ ಸಹ ನಡೆಸುತ್ತಿರುವುದು ಬೇರೆ ಮಾತು.

ಇಂತಹ ಕ್ರಿಯಾಶೀಲ ನರೇಂದ್ರ ಮೋದಿ ಅವರು ಈಗ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು, ಅಧಿಕಾರಿಗಳಿಗೆ ಮಲಗಲು ಸಹ ಬಿಡುತ್ತಿಲ್ಲವಂತೆ!

ಹೌದು, ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾಹಿತಿ ನೀಡಿದ್ದು, ಯಾವುದೇ ಯೋಜನೆ, ಜವಾಬ್ದಾರಿಯನ್ನು ಪ್ರಧಾನಿ ಮೋದಿ ಅವರು ಯಾರಿಗಾದರೂ ಒಪ್ಪಿಸಿದರೆ, ಅದು ಮುಗಿಯುವವರೆಗೆ ಅವರನ್ನು ಮಲಗಲು ಸಹ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಲಾಥೂರ್ ನಲ್ಲಿ ರೈಲು ಬೋಗಿ ಉತ್ಪಾದನೆ ಕಾರ್ಖಾನೆ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಎಂದಿಗೂ ಅಭಿವೃದ್ಧಿಯ ಬಗ್ಗೆಯೇ ಯೋಚಿಸುತ್ತಾರೆ. ಯಾವುದೇ ಯೋಜನೆ ಜಾರಿಯಾದರೂ ಸಾಕು, ಅದು ಮುಗಿಯುವ ಹಂತದವರೆಗೂ ಪರಿಶೀಲನೆ ನಡೆಸುತ್ತಾರೆ. ವಿಳಂಬವಾದರೆ ಜವಾಬ್ದಾರಿ ವಹಿಸಿಕೊಂಡವರಿಗೆ ಸೂಚಿಸುತ್ತಾರೆ ಎಂದು ತಿಳಿಸಿದ್ದಾರೆ.

ದೇಶದ ಪ್ರಧಾನಿಯಾದವರು ತಾನೂ ತಿನ್ನದೆ, ಬೇರೆಯವರೂ ತಿನ್ನಲು ಬಿಡದೆ, ತಾನೂ ಮಲಗದೆ, ಬೇರೆಯವರನ್ನೂ ಮಲಗದೆ ದೇಶದ ಅಭಿವೃದ್ಧಿಗೆ ಬದ್ಧರಾಗಿದ್ದಾರಲ್ಲ, ಅದಕ್ಕಿಂತ ಇನ್ನೇನು ಬೇಕು ಒಂದು ದೇಶಕ್ಕೆ?

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search