• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನೂ ತಿನ್ನಲ್ಲ, ತಿನ್ನಲು ಬಿಡಲ್ಲ ಎಂದ ಮೋದಿ ಈಗ ಮಲಗಲು ಸಹ ಬಿಡುತ್ತಿಲ್ಲವಂತೆ! ಏನಿದು? ಈ ಸುದ್ದಿ ಓದಿ!

TNN Correspondent Posted On April 2, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೇ ಹಾಗೆ, ಕುಳಿತಲ್ಲಿ ಕೂರಲಾರದ, ಸದಾ ಕೆಲಸವನ್ನೇ ಮಾಡುವ, ದೇಶಕ್ಕಾಗಿ ಹಲವು ವರ್ಷಗಳಿಂದ ರಜೆಯನ್ನೇ ತೆಗೆದುಕೊಳ್ಳದೆ ದುಡಿಯುವ, ದೇಶದ ಅಭಿವೃದ್ಧಿಯನ್ನೇ ಯೋಚಿಸು, ಸದಾ ಚಿಂತನಾಶೀಲರಾಗಿರುವ ವ್ಯಕ್ತಿ. ಒಬ್ಬ ದೇಶದ ನಾಯಕನಿಗಿರುವ ಪ್ರಮುಖ ಅಂಶಗಳು ಸಹ ಇವೆಯೇ.

ಹಾಗಂತ ದೇಶದ ನಾಯಕ ಮಾತ್ರ ಹೀಗೆ ಹಗಲಿರುಳು ಕೆಲಸ ಮಾಡಬೇಕಾ? ಉಳಿದವರೆಲ್ಲ ಸುಮ್ಮನಿದ್ದರೂ ಆದೀತೇ? ಇದನ್ನು ಮನಗಂಡ ಪ್ರಧಾನಿ ಮೋದಿ ಅವರು 2014ರ ಲೋಕಸಭೆ ಚುನಾವಣೆ ವೇಳೆ ನಾನು ತಿನ್ನುವುದಿಲ್ಲ, ಬೇರೆಯವರಿಗೂ ತಿನ್ನಲು ಬಿಡುವುದಿಲ್ಲ ಎಂದು ಹೇಳಿದ್ದು ಸುದ್ದಿಯಾಗಿತ್ತು. ಈಗ ಅದರಂತೆಯೇ ಸರ್ಕಾರ ಸಹ ನಡೆಸುತ್ತಿರುವುದು ಬೇರೆ ಮಾತು.

ಇಂತಹ ಕ್ರಿಯಾಶೀಲ ನರೇಂದ್ರ ಮೋದಿ ಅವರು ಈಗ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು, ಅಧಿಕಾರಿಗಳಿಗೆ ಮಲಗಲು ಸಹ ಬಿಡುತ್ತಿಲ್ಲವಂತೆ!

ಹೌದು, ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾಹಿತಿ ನೀಡಿದ್ದು, ಯಾವುದೇ ಯೋಜನೆ, ಜವಾಬ್ದಾರಿಯನ್ನು ಪ್ರಧಾನಿ ಮೋದಿ ಅವರು ಯಾರಿಗಾದರೂ ಒಪ್ಪಿಸಿದರೆ, ಅದು ಮುಗಿಯುವವರೆಗೆ ಅವರನ್ನು ಮಲಗಲು ಸಹ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಲಾಥೂರ್ ನಲ್ಲಿ ರೈಲು ಬೋಗಿ ಉತ್ಪಾದನೆ ಕಾರ್ಖಾನೆ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಎಂದಿಗೂ ಅಭಿವೃದ್ಧಿಯ ಬಗ್ಗೆಯೇ ಯೋಚಿಸುತ್ತಾರೆ. ಯಾವುದೇ ಯೋಜನೆ ಜಾರಿಯಾದರೂ ಸಾಕು, ಅದು ಮುಗಿಯುವ ಹಂತದವರೆಗೂ ಪರಿಶೀಲನೆ ನಡೆಸುತ್ತಾರೆ. ವಿಳಂಬವಾದರೆ ಜವಾಬ್ದಾರಿ ವಹಿಸಿಕೊಂಡವರಿಗೆ ಸೂಚಿಸುತ್ತಾರೆ ಎಂದು ತಿಳಿಸಿದ್ದಾರೆ.

ದೇಶದ ಪ್ರಧಾನಿಯಾದವರು ತಾನೂ ತಿನ್ನದೆ, ಬೇರೆಯವರೂ ತಿನ್ನಲು ಬಿಡದೆ, ತಾನೂ ಮಲಗದೆ, ಬೇರೆಯವರನ್ನೂ ಮಲಗದೆ ದೇಶದ ಅಭಿವೃದ್ಧಿಗೆ ಬದ್ಧರಾಗಿದ್ದಾರಲ್ಲ, ಅದಕ್ಕಿಂತ ಇನ್ನೇನು ಬೇಕು ಒಂದು ದೇಶಕ್ಕೆ?

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search