• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನೂ ತಿನ್ನಲ್ಲ, ತಿನ್ನಲು ಬಿಡಲ್ಲ ಎಂದ ಮೋದಿ ಈಗ ಮಲಗಲು ಸಹ ಬಿಡುತ್ತಿಲ್ಲವಂತೆ! ಏನಿದು? ಈ ಸುದ್ದಿ ಓದಿ!

TNN Correspondent Posted On April 2, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೇ ಹಾಗೆ, ಕುಳಿತಲ್ಲಿ ಕೂರಲಾರದ, ಸದಾ ಕೆಲಸವನ್ನೇ ಮಾಡುವ, ದೇಶಕ್ಕಾಗಿ ಹಲವು ವರ್ಷಗಳಿಂದ ರಜೆಯನ್ನೇ ತೆಗೆದುಕೊಳ್ಳದೆ ದುಡಿಯುವ, ದೇಶದ ಅಭಿವೃದ್ಧಿಯನ್ನೇ ಯೋಚಿಸು, ಸದಾ ಚಿಂತನಾಶೀಲರಾಗಿರುವ ವ್ಯಕ್ತಿ. ಒಬ್ಬ ದೇಶದ ನಾಯಕನಿಗಿರುವ ಪ್ರಮುಖ ಅಂಶಗಳು ಸಹ ಇವೆಯೇ.

ಹಾಗಂತ ದೇಶದ ನಾಯಕ ಮಾತ್ರ ಹೀಗೆ ಹಗಲಿರುಳು ಕೆಲಸ ಮಾಡಬೇಕಾ? ಉಳಿದವರೆಲ್ಲ ಸುಮ್ಮನಿದ್ದರೂ ಆದೀತೇ? ಇದನ್ನು ಮನಗಂಡ ಪ್ರಧಾನಿ ಮೋದಿ ಅವರು 2014ರ ಲೋಕಸಭೆ ಚುನಾವಣೆ ವೇಳೆ ನಾನು ತಿನ್ನುವುದಿಲ್ಲ, ಬೇರೆಯವರಿಗೂ ತಿನ್ನಲು ಬಿಡುವುದಿಲ್ಲ ಎಂದು ಹೇಳಿದ್ದು ಸುದ್ದಿಯಾಗಿತ್ತು. ಈಗ ಅದರಂತೆಯೇ ಸರ್ಕಾರ ಸಹ ನಡೆಸುತ್ತಿರುವುದು ಬೇರೆ ಮಾತು.

ಇಂತಹ ಕ್ರಿಯಾಶೀಲ ನರೇಂದ್ರ ಮೋದಿ ಅವರು ಈಗ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು, ಅಧಿಕಾರಿಗಳಿಗೆ ಮಲಗಲು ಸಹ ಬಿಡುತ್ತಿಲ್ಲವಂತೆ!

ಹೌದು, ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾಹಿತಿ ನೀಡಿದ್ದು, ಯಾವುದೇ ಯೋಜನೆ, ಜವಾಬ್ದಾರಿಯನ್ನು ಪ್ರಧಾನಿ ಮೋದಿ ಅವರು ಯಾರಿಗಾದರೂ ಒಪ್ಪಿಸಿದರೆ, ಅದು ಮುಗಿಯುವವರೆಗೆ ಅವರನ್ನು ಮಲಗಲು ಸಹ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಲಾಥೂರ್ ನಲ್ಲಿ ರೈಲು ಬೋಗಿ ಉತ್ಪಾದನೆ ಕಾರ್ಖಾನೆ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಎಂದಿಗೂ ಅಭಿವೃದ್ಧಿಯ ಬಗ್ಗೆಯೇ ಯೋಚಿಸುತ್ತಾರೆ. ಯಾವುದೇ ಯೋಜನೆ ಜಾರಿಯಾದರೂ ಸಾಕು, ಅದು ಮುಗಿಯುವ ಹಂತದವರೆಗೂ ಪರಿಶೀಲನೆ ನಡೆಸುತ್ತಾರೆ. ವಿಳಂಬವಾದರೆ ಜವಾಬ್ದಾರಿ ವಹಿಸಿಕೊಂಡವರಿಗೆ ಸೂಚಿಸುತ್ತಾರೆ ಎಂದು ತಿಳಿಸಿದ್ದಾರೆ.

ದೇಶದ ಪ್ರಧಾನಿಯಾದವರು ತಾನೂ ತಿನ್ನದೆ, ಬೇರೆಯವರೂ ತಿನ್ನಲು ಬಿಡದೆ, ತಾನೂ ಮಲಗದೆ, ಬೇರೆಯವರನ್ನೂ ಮಲಗದೆ ದೇಶದ ಅಭಿವೃದ್ಧಿಗೆ ಬದ್ಧರಾಗಿದ್ದಾರಲ್ಲ, ಅದಕ್ಕಿಂತ ಇನ್ನೇನು ಬೇಕು ಒಂದು ದೇಶಕ್ಕೆ?

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search