• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನೂ ತಿನ್ನಲ್ಲ, ತಿನ್ನಲು ಬಿಡಲ್ಲ ಎಂದ ಮೋದಿ ಈಗ ಮಲಗಲು ಸಹ ಬಿಡುತ್ತಿಲ್ಲವಂತೆ! ಏನಿದು? ಈ ಸುದ್ದಿ ಓದಿ!

TNN Correspondent Posted On April 2, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೇ ಹಾಗೆ, ಕುಳಿತಲ್ಲಿ ಕೂರಲಾರದ, ಸದಾ ಕೆಲಸವನ್ನೇ ಮಾಡುವ, ದೇಶಕ್ಕಾಗಿ ಹಲವು ವರ್ಷಗಳಿಂದ ರಜೆಯನ್ನೇ ತೆಗೆದುಕೊಳ್ಳದೆ ದುಡಿಯುವ, ದೇಶದ ಅಭಿವೃದ್ಧಿಯನ್ನೇ ಯೋಚಿಸು, ಸದಾ ಚಿಂತನಾಶೀಲರಾಗಿರುವ ವ್ಯಕ್ತಿ. ಒಬ್ಬ ದೇಶದ ನಾಯಕನಿಗಿರುವ ಪ್ರಮುಖ ಅಂಶಗಳು ಸಹ ಇವೆಯೇ.

ಹಾಗಂತ ದೇಶದ ನಾಯಕ ಮಾತ್ರ ಹೀಗೆ ಹಗಲಿರುಳು ಕೆಲಸ ಮಾಡಬೇಕಾ? ಉಳಿದವರೆಲ್ಲ ಸುಮ್ಮನಿದ್ದರೂ ಆದೀತೇ? ಇದನ್ನು ಮನಗಂಡ ಪ್ರಧಾನಿ ಮೋದಿ ಅವರು 2014ರ ಲೋಕಸಭೆ ಚುನಾವಣೆ ವೇಳೆ ನಾನು ತಿನ್ನುವುದಿಲ್ಲ, ಬೇರೆಯವರಿಗೂ ತಿನ್ನಲು ಬಿಡುವುದಿಲ್ಲ ಎಂದು ಹೇಳಿದ್ದು ಸುದ್ದಿಯಾಗಿತ್ತು. ಈಗ ಅದರಂತೆಯೇ ಸರ್ಕಾರ ಸಹ ನಡೆಸುತ್ತಿರುವುದು ಬೇರೆ ಮಾತು.

ಇಂತಹ ಕ್ರಿಯಾಶೀಲ ನರೇಂದ್ರ ಮೋದಿ ಅವರು ಈಗ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು, ಅಧಿಕಾರಿಗಳಿಗೆ ಮಲಗಲು ಸಹ ಬಿಡುತ್ತಿಲ್ಲವಂತೆ!

ಹೌದು, ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾಹಿತಿ ನೀಡಿದ್ದು, ಯಾವುದೇ ಯೋಜನೆ, ಜವಾಬ್ದಾರಿಯನ್ನು ಪ್ರಧಾನಿ ಮೋದಿ ಅವರು ಯಾರಿಗಾದರೂ ಒಪ್ಪಿಸಿದರೆ, ಅದು ಮುಗಿಯುವವರೆಗೆ ಅವರನ್ನು ಮಲಗಲು ಸಹ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಲಾಥೂರ್ ನಲ್ಲಿ ರೈಲು ಬೋಗಿ ಉತ್ಪಾದನೆ ಕಾರ್ಖಾನೆ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಎಂದಿಗೂ ಅಭಿವೃದ್ಧಿಯ ಬಗ್ಗೆಯೇ ಯೋಚಿಸುತ್ತಾರೆ. ಯಾವುದೇ ಯೋಜನೆ ಜಾರಿಯಾದರೂ ಸಾಕು, ಅದು ಮುಗಿಯುವ ಹಂತದವರೆಗೂ ಪರಿಶೀಲನೆ ನಡೆಸುತ್ತಾರೆ. ವಿಳಂಬವಾದರೆ ಜವಾಬ್ದಾರಿ ವಹಿಸಿಕೊಂಡವರಿಗೆ ಸೂಚಿಸುತ್ತಾರೆ ಎಂದು ತಿಳಿಸಿದ್ದಾರೆ.

ದೇಶದ ಪ್ರಧಾನಿಯಾದವರು ತಾನೂ ತಿನ್ನದೆ, ಬೇರೆಯವರೂ ತಿನ್ನಲು ಬಿಡದೆ, ತಾನೂ ಮಲಗದೆ, ಬೇರೆಯವರನ್ನೂ ಮಲಗದೆ ದೇಶದ ಅಭಿವೃದ್ಧಿಗೆ ಬದ್ಧರಾಗಿದ್ದಾರಲ್ಲ, ಅದಕ್ಕಿಂತ ಇನ್ನೇನು ಬೇಕು ಒಂದು ದೇಶಕ್ಕೆ?

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search