• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸ್ವಚ್ಛ ಭಾರತ ಯೋಜನೆಗೆ ಅಭೂತಪೂರ್ವ ಯಶಸ್ಸು, ದೇಶದ ಶೇ.93ರಷ್ಟು ಜನರಿಂದ ಶೌಚಾಲಯ ಬಳಕೆ!

TNN Correspondent Posted On April 2, 2018


  • Share On Facebook
  • Tweet It

ದೆಹಲಿ: ಅದು 2014ರ ಅಕ್ಟೋಬರ್ 2. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಯೋಜನೆ ಜಾರಿಗೊಳಿಸಿದಾಗ, ಇದು ವಿಫಲ ಯೋಜನೆ ಎಂದು ಪ್ರತಿಪಕ್ಷಗಳು ಸುಖಾಸುಮ್ಮನೆ ಟೀಕಿಸಿದ್ದವು. ಆದರೆ ಅಂದು ಪ್ರಧಾನಿ ಮೋದಿ ಅವರು ಜಾರಿಗೊಳಿಸಿದ್ದ ಸ್ವಚ್ಛ ಭಾರತ ಯೋಜನೆ ಈಗ ಭಾರತದಾದ್ಯಂತ ಅಭೂತಪೂರ್ವ ಯಶಸ್ಸು ಗಳಿಸಿದೆ.

ವಿಶ್ವ ಬ್ಯಾಂಕ್ ಅಡಿಯಲ್ಲಿ ಕಾರ್ಯನಿರ್ವಹಿಸುವ ಎನ್ಎಆರ್ ಎಸ್ಎಸ್ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಭಾರತದ ಶೇ.93ರಷ್ಟು ಜನರಿಗೆ ಶೌಚಾಲಯ ಬಳಕೆ ಗೊತ್ತಿದೆ. ಅಲ್ಲದೆ ಸ್ವಚ್ಛ ಭಾರತ ಯೋಜನೆ ಜಾರಿಯಾದ ಬಳಿಕ ಭಾರತದ ಗ್ರಾಮೀಣ ಪ್ರದೇಶದಲ್ಲಿ ಶೇ.77ರಷ್ಟು ಕುಟುಂಬಗಳು ಶೌಚಾಲಯ ಹೊಂದಿವೆ ಎಂದು ತಿಳಿದುಬಂದಿದೆ.

2017ರ ನವೆಂಬರ್ ನಿಂದ 2018ರ ಮಾರ್ಚ್ ಅವಧಿಯಲ್ಲಿ ಸಮೀಕ್ಷೆ ನಡೆಸಿದ್ದು, ಗ್ರಾಮೀಣ ಪ್ರದೇಶದ ಶೇ.96ರಷ್ಟು ಜನ ಶೌಚಾಲಯವನ್ನೇ ಬಳಸುತ್ತಿದ್ದಾರೆ. 2014ರ ಅಕ್ಟೋಬರ್ 2ರಿಂದ ಇದುವರೆಗೆ ದೇಶಾದ್ಯಂತ ಸುಮಾರು 6.6 ಕೋಟಿ ಶೌಚಾಲಯ ನಿರ್ಮಿಸಲಾಗಿದೆ ಎಂದು ಸಮೀಕ್ಷೆಯಿಂದ ಬಹಿರಂಗವಾಗಿದೆ.

ಈ ಯೋಜನೆ ಜಾರಿಯಾದ ಬಳಿಕ ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿದ್ದು, ಇದುವರೆಗೆ 3.4 ಲಕ್ಷ ಗ್ರಾಮಗಳು ಹಾಗೂ 341 ಜಿಲ್ಲೆಗಳನ್ನು ಬಯಲು ಶೌಚ ಮುಕ್ತ ಗ್ರಾಮಗಳು ಎಂದು ಘೋಷಿಸಲಾಗಿದೆ. ಒಟ್ಟಿನಲ್ಲಿ ಶೌಚಾಲಯವೇ ಕಾಣದ ಲಕ್ಷಾಂತರ ಗ್ರಾಮಗಳು, ಕೋಟ್ಯಂತರ ಜನ ಒಂದೇ ಒಂದು ಯೋಜನೆಯಿಂದ ಶೌಚಾಲಯ ಕಟ್ಟಿಸಿಕೊಂಡು ಸ್ವಚ್ಛ ಭಾರತಕ್ಕೆ ಮುನ್ನುಡಿಯಾಗಿರುವುದು ಸ್ವಾಗತಾರ್ಹವಾಗಿದೆ.

  • Share On Facebook
  • Tweet It


- Advertisement -


Trending Now
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
Leave A Reply

  • Recent Posts

    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
  • Popular Posts

    • 1
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 2
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 3
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 4
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 5
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search