• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೇಶದ್ರೋಹಿಗಳಿಂದ ಮೈಸೂರು ಪೊಲೀಸ್ ವೆಬ್ ಸೈಟ್ ಹ್ಯಾಕ್, ರಾಷ್ಟ್ರ ಧ್ವಜಕ್ಕೆ ಅಪಮಾನ

TNN Correspondent Posted On April 2, 2018


  • Share On Facebook
  • Tweet It

ಮೈಸೂರು: ಭಾರತದಲ್ಲಿ ದೇಶದ್ರೋಹಿಗಳ ಕಿರಿಕಿರಿ ಮುಂದುವರಿದಿದ್ದು, ಸದಾ ಭಾರತದೊಂದಿಗೆ ಸೆಣಸಾಡುವ, ದೇಶದ ಅನ್ನವೇ ತಿಂದು ದ್ರೋಹ ಬಗೆಯುವ ಕೆಲವು ವಿಕೃತ ಮನಸ್ಸಿನವರು ಕುತಂತ್ರದ ಕಾರ್ಯಗಳು ಸದಾ ಚಾಲ್ತಿಯಲ್ಲಿವೆ. ಇಷ್ಟು ದಿನ ನೇರವಾಗಿ ದೇಶದ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದ ಕೆಲವು ಕೊಳಕು ಮನಸ್ಸುಗಳು ಇದೀಗ ಅಂತರ್ಜಾಲದಲ್ಲಿ ದೇಶವನ್ನು, ರಾಷ್ಟ್ರಧ್ವಜವನ್ನು ಅವಮಾನಿಸುವ ಕಾರ್ಯದಲ್ಲಿ ನಿರತವಾಗಿವೆ. ಅದಕ್ಕೆ ಸಾಕ್ಷಿ ಸಾಂಸ್ಕೃತಿಕ ನಗರಿ ಮೈಸೂರಿನ ಪೊಲೀಸ್ ಘಟಕದ ವೆಬ್ ಸೈಟ್ ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ರಾಷ್ಟ್ರಧ್ವಜವನ್ನು ಅವಮಾನ ಮಾಡುವಂತ ಪೋಸ್ಟ್ ಮಾಡಿದ್ದಾರೆ.

ಮೈಸೂರು ನಗರ ಪೊಲೀಸ್‌ ಘಟಕದ http://mysorecitypolice.gov.in/ ವೆಬ್‌ಸೈಟ್‌ ಹ್ಯಾಕ್‌ ಆಗಿದ್ದು, ‘ಮೈಸೂರು ಸಿಟಿ ಪೊಲೀಸ್‌ – ಗವರ್ನಮೆಂಟ್‌ ಆಫ್‌ ಇಂಡಿಯಾ ಹ್ಯಾಕಡ್‌- ಮಿಸ್ಟರ್‌. ನೈಟ್ರೋಜಿನ್‌ ಟೀಂ ಪಿಸಿಇ, ಪಾಕಿಸ್ತಾನ್‌ ಜಿಂದಾಬಾದ್‌ ‘ಎಂದು ವೆಬ್ ಸೈಟ್ ವಾಲ್ ನಲ್ಲಿ ಪೋಸ್ಟ್ ಮಾಡಿದಲ್ಲದೇ, ರಾಷ್ಟ್ರಧ್ವಜವನ್ನು ಕಾಲಿನಿಂದ ತುಳಿಯುತ್ತಿರುವ ಚಿತ್ರವನ್ನು ಪ್ರಕಟಿಸಿ, ಹೀನ ಮನಸ್ಥಿತಿ ತೋರ್ಪಡಿಸಿದೆ. ಅಲ್ಲದೇ ದೇಶಕ್ಕೆ ಅಪಮಾನ ಮಾಡಲಾಗಿದೆ.

ಇನ್ನು ವೆಬ್ ಸೈಟ್ ಆಗಿರುವ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಇಲಾಖೆ ವೆಬ್ ಸೈಟ್ ನ್ನು ಬ್ಲಾಕ್ ಮಾಡಿದೆ. ವೆಬ್‌ಸೈಟ್‌ ಹ್ಯಾಕ್‌ ಮಾಡಿರುವದನ್ನು ಗಮನಿಸಿದ ಪೊಲೀಸರು, ತಜ್ಞರ ಸಹಾಯದಿಂದ ವೆಬ್‌ಸೈಟ್‌ ಬ್ಲಾಕ್‌ ಮಾಡಿಸಿ, ಹ್ಯಾಕಿಂಗ್‌ ತಡೆಹಿಡಿಯುವ ಪ್ರಕ್ರಿಯೆ ಆರಂಭಿಸಿದ್ದಾರೆ. ಮೈಸೂರಿನ ನಗರ ಪೊಲೀಸ್ ಇಲಾಖೆಯ ವೆಬ್ ಸೈಟ್ ಹ್ಯಾಕ್ ಮಾಡಿರುವುದು ಗಮನಕ್ಕೆ ಬಂದಿದೆ. ವೆಬ್ ಸೈಟ್ ಹ್ಯಾಕ್ ಕುರಿತು ವಿಚಾರಣೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಮಣ್ಯೇಶ್ವರ ರಾವ್ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
Leave A Reply

  • Recent Posts

    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
  • Popular Posts

    • 1
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 2
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 3
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 4
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 5
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search