• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ್ರೋಹಿಗಳಿಂದ ಮೈಸೂರು ಪೊಲೀಸ್ ವೆಬ್ ಸೈಟ್ ಹ್ಯಾಕ್, ರಾಷ್ಟ್ರ ಧ್ವಜಕ್ಕೆ ಅಪಮಾನ

TNN Correspondent Posted On April 2, 2018
0


0
Shares
  • Share On Facebook
  • Tweet It

ಮೈಸೂರು: ಭಾರತದಲ್ಲಿ ದೇಶದ್ರೋಹಿಗಳ ಕಿರಿಕಿರಿ ಮುಂದುವರಿದಿದ್ದು, ಸದಾ ಭಾರತದೊಂದಿಗೆ ಸೆಣಸಾಡುವ, ದೇಶದ ಅನ್ನವೇ ತಿಂದು ದ್ರೋಹ ಬಗೆಯುವ ಕೆಲವು ವಿಕೃತ ಮನಸ್ಸಿನವರು ಕುತಂತ್ರದ ಕಾರ್ಯಗಳು ಸದಾ ಚಾಲ್ತಿಯಲ್ಲಿವೆ. ಇಷ್ಟು ದಿನ ನೇರವಾಗಿ ದೇಶದ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದ ಕೆಲವು ಕೊಳಕು ಮನಸ್ಸುಗಳು ಇದೀಗ ಅಂತರ್ಜಾಲದಲ್ಲಿ ದೇಶವನ್ನು, ರಾಷ್ಟ್ರಧ್ವಜವನ್ನು ಅವಮಾನಿಸುವ ಕಾರ್ಯದಲ್ಲಿ ನಿರತವಾಗಿವೆ. ಅದಕ್ಕೆ ಸಾಕ್ಷಿ ಸಾಂಸ್ಕೃತಿಕ ನಗರಿ ಮೈಸೂರಿನ ಪೊಲೀಸ್ ಘಟಕದ ವೆಬ್ ಸೈಟ್ ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ರಾಷ್ಟ್ರಧ್ವಜವನ್ನು ಅವಮಾನ ಮಾಡುವಂತ ಪೋಸ್ಟ್ ಮಾಡಿದ್ದಾರೆ.

ಮೈಸೂರು ನಗರ ಪೊಲೀಸ್‌ ಘಟಕದ http://mysorecitypolice.gov.in/ ವೆಬ್‌ಸೈಟ್‌ ಹ್ಯಾಕ್‌ ಆಗಿದ್ದು, ‘ಮೈಸೂರು ಸಿಟಿ ಪೊಲೀಸ್‌ – ಗವರ್ನಮೆಂಟ್‌ ಆಫ್‌ ಇಂಡಿಯಾ ಹ್ಯಾಕಡ್‌- ಮಿಸ್ಟರ್‌. ನೈಟ್ರೋಜಿನ್‌ ಟೀಂ ಪಿಸಿಇ, ಪಾಕಿಸ್ತಾನ್‌ ಜಿಂದಾಬಾದ್‌ ‘ಎಂದು ವೆಬ್ ಸೈಟ್ ವಾಲ್ ನಲ್ಲಿ ಪೋಸ್ಟ್ ಮಾಡಿದಲ್ಲದೇ, ರಾಷ್ಟ್ರಧ್ವಜವನ್ನು ಕಾಲಿನಿಂದ ತುಳಿಯುತ್ತಿರುವ ಚಿತ್ರವನ್ನು ಪ್ರಕಟಿಸಿ, ಹೀನ ಮನಸ್ಥಿತಿ ತೋರ್ಪಡಿಸಿದೆ. ಅಲ್ಲದೇ ದೇಶಕ್ಕೆ ಅಪಮಾನ ಮಾಡಲಾಗಿದೆ.

ಇನ್ನು ವೆಬ್ ಸೈಟ್ ಆಗಿರುವ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಇಲಾಖೆ ವೆಬ್ ಸೈಟ್ ನ್ನು ಬ್ಲಾಕ್ ಮಾಡಿದೆ. ವೆಬ್‌ಸೈಟ್‌ ಹ್ಯಾಕ್‌ ಮಾಡಿರುವದನ್ನು ಗಮನಿಸಿದ ಪೊಲೀಸರು, ತಜ್ಞರ ಸಹಾಯದಿಂದ ವೆಬ್‌ಸೈಟ್‌ ಬ್ಲಾಕ್‌ ಮಾಡಿಸಿ, ಹ್ಯಾಕಿಂಗ್‌ ತಡೆಹಿಡಿಯುವ ಪ್ರಕ್ರಿಯೆ ಆರಂಭಿಸಿದ್ದಾರೆ. ಮೈಸೂರಿನ ನಗರ ಪೊಲೀಸ್ ಇಲಾಖೆಯ ವೆಬ್ ಸೈಟ್ ಹ್ಯಾಕ್ ಮಾಡಿರುವುದು ಗಮನಕ್ಕೆ ಬಂದಿದೆ. ವೆಬ್ ಸೈಟ್ ಹ್ಯಾಕ್ ಕುರಿತು ವಿಚಾರಣೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಮಣ್ಯೇಶ್ವರ ರಾವ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search