• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈಲ್ವೆ ಇಲಾಖೆ ಇತಿಹಾಸ: 3 ದಶಕದಲ್ಲೇ ಅತಿ ಕಡಿಮೆ ರೈಲ್ವೆ ಅಪಘಾತ

TNN Correspondent Posted On April 2, 2018
0


0
Shares
  • Share On Facebook
  • Tweet It

ದೆಹಲಿ: ಭಾರತ ಸಂಚಾರದ ಜೀವನಾಡಿಯಾಗಿರುವ ಮತ್ತು ಅತಿ ದೊಡ್ಡ ಸಾರಿಗೆ ವ್ಯವಸ್ಥೆಯಾಗಿರುವ ರೈಲ್ವೆ ಅಪಘಾತಗಳಲ್ಲಿ  ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗಣನೀಯವಾಗಿ ಕಡಿಮೆಯಾಗಿದೆ. ಪದೇ ಪದೆ ಹಳಿ ತಪ್ಪುವುದು, ಅಪಘಾತ, ಬಿರುಕು ಬಿಡುವ ಹಳಿಗಳಿಂದ ಭಾರಿ ಪ್ರಮಾಣದ ಸಾವು ನೋವು ಸಂಭವಿಸಿ ತೀವ್ರ ಟೀಕೆಗೆ ರೈಲ್ವೆ ಇಲಾಖೆ ಗುರಿಯಾಗುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ರೈಲ್ವೆ ಸುರಕ್ಷೆತೆ ದೃಷ್ಟಿಯಿಂದ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳು ಮತ್ತು ಕ್ರಮಬದ್ಧವಾದ ಜಾರಿಯಿಂದ ಸಾವು ನೋವುಗಳಲ್ಲಿ ಗಣನೀಯ ಇಳಿಕೆಯಾಗಿದೆ.

ರೈಲ್ವೆ ಇಲಾಖೆ ರೈಲು ಸುರಕ್ಷತೆ ದೃಷ್ಟಿಯಿಂದ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದ ಮೂರು ದಶಕಗಳಲ್ಲೇ ಕಾಣದಂತ ಹೊಸ ದಾಖಲೆ ಸೃಷ್ಟಿಸಿದೆ. ಕಳೆದ 35 ವರ್ಷಗಳಲ್ಲೇ ಮೊದಲ ಬಾರಿಗೆ ರೈಲ್ವೆ ಅಪಘಾತಗಳ ಪ್ರಮಾಣ ಎರಡಂಕಿಗೆ ಇಳಿದಿದೆ.

2017​-18ನೇ ಹಣಕಾಸು ವರ್ಷದಲ್ಲಿ ಮಾ.31ರವರೆಗೆ ಕೇವಲ 73 ಅಪಘಾತ ಸಂಭವಿಸಿದ್ದು, ಈ ಸಂಖ್ಯೆ ಕಳೆದ 35 ವರ್ಷಗಳಲ್ಲೇ ಅತಿ ಕಡಿಮೆ ಅಪಘಾತ ಸಂಭವಿಸಿದ ಸಂಖ್ಯೆಯಾಗಿದೆ. 2016​-2017ನೇ ಸಾಲಿನಲ್ಲಿ ದೇಶಾದ್ಯಂತ ಒಟ್ಟು 104 ಅಪಘಾತ ಸಂಭವಿಸಿದ್ದವು. 2017-18ರಲ್ಲಿ ಅಪಘಾತಗಳ ಪ್ರಮಾಣ ಶೇ.29ರಷ್ಟುಇಳಿಕೆಯಾಗಿದೆ. ರೈಲ್ವೆ ಹಳಿ ತಪ್ಪುವಿಕೆ ಪ್ರಮಾಣ ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ 39ಕ್ಕೆ ಇಳಿಕೆಯಾಗಿರುವುದು ಗಮನಾರ್ಹ ಸಂಗತಿ.

1968​-1969ರಲ್ಲಿ ಮೊದಲ ಬಾರಿಗೆ ರೈಲ್ವೆ ಅಪಘಾತಗಳ ಸಂಖ್ಯೆ 1000ಕ್ಕಿಂತ ಕೆಳಗೆ ಇಳಿದಿತ್ತು. ಆ ವರ್ಷ ಅಪಘಾತದ ಪ್ರಮಾಣ 908ಕ್ಕೆ ಇಳಿಕೆಯಾಗಿತ್ತು. ಅದಕ್ಕೂ ಮುನ್ನ ಪ್ರತಿ ವರ್ಷ 1000ಕ್ಕೂ ಹೆಚ್ಚು ಅಪಘಾತಗಳು ನಡೆಯುವುದು ಸಾಮಾನ್ಯ ಎನಿಸಿತ್ತು. ಕೆಲ ವರ್ಷದಿಂದ ರೈಲ್ವೆ ಸುರಕ್ಷತೆಗೆ ಆದ್ಯತೆ ನೀಡಿರುವುದು ಅಪಘಾತ ಪ್ರಮಾಣ ಇಳಿಕೆಗೆ ಪ್ರಮುಖ ಕಾರಣ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ರೇಲ್ವೆ ಸುರಕ್ಷೆಗೆ 7,267 ಕೋಟಿ ರು.ಗಳನ್ನು ಮೀಸಲಿಟ್ಟಿರುವುದು ಮತ್ತು ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿರುವುದು ಗಮನಾರ್ಹ ಸಂಗತಿ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • Privacy Policy
  • Contact
© Tulunadu Infomedia.

Press enter/return to begin your search