• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈಲ್ವೆಗೆ ಮೋದಿ ಕೊಟ್ಟರು ಬೂಸ್ಟ್, ಇದೇ ಮೊದಲ ಬಾರಿಗೆ ಅತೀ ಹೆಚ್ಚು ಸರಕು ಸಾಗಣೆ!

TNN Correspondent Posted On April 4, 2018
0


0
Shares
  • Share On Facebook
  • Tweet It

ದೆಹಲಿ: ಕಳೆದ 2017ರ ಬಜೆಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈಲ್ವೆ ಅಭಿವೃದ್ಧಿ, ನಿಲ್ದಾಣಗಳ ಮೇಲ್ದರ್ಜೆಗೆ ಏರಿಸಲು ಅಪಾರ ಹಣ ಮೀಸಲು ಇಟ್ಟ ಬಳಿಕ ಭಾರತೀಯ ರೈಲುಗಳಲ್ಲಿ ಅಪಾರ ಸುಧಾರಣೆಯಾಗಿದೆ.

ಹೌದು, 2017-18ರಲ್ಲಿ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಸರಕನ್ನು ರೈಲುಗಳ ಮೂಲಕ ಸಾಗಣೆ ಮಾಡಲಾಗಿದೆ ಎಂದು ರೈಲ್ವೆ ಖಾತೆ ಸಚಿವಾಲಯವೇ ಮಾಹಿತಿ ನೀಡಿದೆ.

2017-18ನೇ ಸಾಲಿನಲ್ಲಿ ರೈಲುಗಳ ಮೂಲಕ ದೇಶಾದ್ಯಂತ 1,160 ದಶಲಕ್ಷ ಟನ್ ಸರಕನ್ನು ಸಾಗಣೆ ಮಾಡಲಾಗಿದೆ. ಇದು ದೇಶದ ಇತಿಹಾಸದಲ್ಲೇ ಅತೀ ಹೆಚ್ಚು ಸರಕು ಸಾಗಣೆ ಮಾಡಲಾದ ವರ್ಷ ಎಂಬ ದಾಖಲೆಗೆ ಭಾಜವಾಗಿದೆ ಎಂದು ಸಚಿವಾಲಯ ವಿವರಣೆ ನೀಡಿದೆ.

2013-14ನೇ ಸಾಲಿನಲ್ಲಿ ರೈಲುಗಳ ಮೂಲಕ 1,051 ದಶಲಕ್ಷ ಟನ್ ಸರಕು ಸಾಗಣೆ ಮಾಡಲಾಗಿತ್ತು. ಹಾಗೆಯೇ 2014-15ನೇ ಸಾಲಿನಲ್ಲಿ 1,095 ದಶಲಕ್ಷ ಟನ್ ಹಾಗೂ 2016-17ರಲ್ಲಿ 1,109 ದಶಲಕ್ಷ ಟನ್ ಸರಕು ಸಾಗಣೆ ಮಾಡಲಾಗಿದೆ. ಆದರೆ ಈ ಬಾರಿ ಈ ಸಂಖ್ಯೆ 1,160 ದಶಲಕ್ಷ ಮಿಲಿಯನ್ ಗೆರೆ ತಲುಪಿದ್ದು, ಸಾರ್ವಕಾಲಿಕ ದಾಖಲೆ ದಾಖಲಿಸಿದೆ.

ದೇಶದಲ್ಲಿ ಸುಮಾರು 13 ಸಾವಿರ ಸರಕು ಸಾಗಣೆ ರೈಲುಗಳು ಓಡಾಡುತ್ತಿದ್ದು, ರೈಲು ಇಲಾಖೆಯ ಒಟ್ಟು ಆದಾಯದಲ್ಲಿ ಈ ವಿಭಾಗವೇ ಶೇ.65ರಷ್ಟು ಆದಾಯ ಒದಗಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search