• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈಲ್ವೆಗೆ ಮೋದಿ ಕೊಟ್ಟರು ಬೂಸ್ಟ್, ಇದೇ ಮೊದಲ ಬಾರಿಗೆ ಅತೀ ಹೆಚ್ಚು ಸರಕು ಸಾಗಣೆ!

TNN Correspondent Posted On April 4, 2018
0


0
Shares
  • Share On Facebook
  • Tweet It

ದೆಹಲಿ: ಕಳೆದ 2017ರ ಬಜೆಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈಲ್ವೆ ಅಭಿವೃದ್ಧಿ, ನಿಲ್ದಾಣಗಳ ಮೇಲ್ದರ್ಜೆಗೆ ಏರಿಸಲು ಅಪಾರ ಹಣ ಮೀಸಲು ಇಟ್ಟ ಬಳಿಕ ಭಾರತೀಯ ರೈಲುಗಳಲ್ಲಿ ಅಪಾರ ಸುಧಾರಣೆಯಾಗಿದೆ.

ಹೌದು, 2017-18ರಲ್ಲಿ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಸರಕನ್ನು ರೈಲುಗಳ ಮೂಲಕ ಸಾಗಣೆ ಮಾಡಲಾಗಿದೆ ಎಂದು ರೈಲ್ವೆ ಖಾತೆ ಸಚಿವಾಲಯವೇ ಮಾಹಿತಿ ನೀಡಿದೆ.

2017-18ನೇ ಸಾಲಿನಲ್ಲಿ ರೈಲುಗಳ ಮೂಲಕ ದೇಶಾದ್ಯಂತ 1,160 ದಶಲಕ್ಷ ಟನ್ ಸರಕನ್ನು ಸಾಗಣೆ ಮಾಡಲಾಗಿದೆ. ಇದು ದೇಶದ ಇತಿಹಾಸದಲ್ಲೇ ಅತೀ ಹೆಚ್ಚು ಸರಕು ಸಾಗಣೆ ಮಾಡಲಾದ ವರ್ಷ ಎಂಬ ದಾಖಲೆಗೆ ಭಾಜವಾಗಿದೆ ಎಂದು ಸಚಿವಾಲಯ ವಿವರಣೆ ನೀಡಿದೆ.

2013-14ನೇ ಸಾಲಿನಲ್ಲಿ ರೈಲುಗಳ ಮೂಲಕ 1,051 ದಶಲಕ್ಷ ಟನ್ ಸರಕು ಸಾಗಣೆ ಮಾಡಲಾಗಿತ್ತು. ಹಾಗೆಯೇ 2014-15ನೇ ಸಾಲಿನಲ್ಲಿ 1,095 ದಶಲಕ್ಷ ಟನ್ ಹಾಗೂ 2016-17ರಲ್ಲಿ 1,109 ದಶಲಕ್ಷ ಟನ್ ಸರಕು ಸಾಗಣೆ ಮಾಡಲಾಗಿದೆ. ಆದರೆ ಈ ಬಾರಿ ಈ ಸಂಖ್ಯೆ 1,160 ದಶಲಕ್ಷ ಮಿಲಿಯನ್ ಗೆರೆ ತಲುಪಿದ್ದು, ಸಾರ್ವಕಾಲಿಕ ದಾಖಲೆ ದಾಖಲಿಸಿದೆ.

ದೇಶದಲ್ಲಿ ಸುಮಾರು 13 ಸಾವಿರ ಸರಕು ಸಾಗಣೆ ರೈಲುಗಳು ಓಡಾಡುತ್ತಿದ್ದು, ರೈಲು ಇಲಾಖೆಯ ಒಟ್ಟು ಆದಾಯದಲ್ಲಿ ಈ ವಿಭಾಗವೇ ಶೇ.65ರಷ್ಟು ಆದಾಯ ಒದಗಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search