• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬುದ್ಧನ ಬಗ್ಗೆ ಮಾಯಾವತಿಯ ಡೋಂಗಿ ಕಾಳಜಿಗೆ ಯೋಗಿ ಉತ್ತರ, ಬೌದ್ಧ ಕ್ಷೇತ್ರಗಳ ಅಭಿವೃದ್ಧಿಗೆ ಹೊಸ ತಂತ್ರ

TNN Correspondent Posted On April 4, 2018


  • Share On Facebook
  • Tweet It

ಲಖನೌ: ಬಿಜೆಪಿ ದಲಿತ ವಿರೋಧಿ, ಬೌದ್ಧ ವಿರೋಧಿ ಎಂಬಂತೆ ವಿನಾಕಾರಣ ಬಿಂಬಿಸುತ್ತಿದ್ದ ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿಗೆ ಉತ್ತರ ಪ್ರದೇಶದ ಯೋಗಿ ಸರ್ಕಾರ ತಕ್ಕ ಉತ್ತರವನ್ನು ತನ್ನ ಕಾರ್ಯದ ಮೂಲಕವೇ ನೀಡಿದೆ. ಉತ್ತರ ಪ್ರದೇಶದಲ್ಲಿರುವ ಪ್ರಮುಖ ಆರು ಬೌದ್ಧ ಕ್ಷೇತ್ರಗಳನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರವಾಸೋಧ್ಯಮ ತಾಣಗಳಾಗಿ ಅಭಿವೃದ್ಧಿ ಪಡಿಸಲು ಯೋಗಿ ಆದಿತ್ಯನಾಥ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಬೌದ್ಧನನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದ ಮಾಯಾವತಿ ಸೇರಿ ಹಲವು ಮುಖಂಡರಿಗೆ ಯೋಗಿ ದೊಡ್ಡ ಶಾಕ್ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿರುವ ತಾಜಮಹಲ್ ಮತ್ತು ವಾರಣಾಸಿ ಮಾದರಿಯಲ್ಲಿ, ವಿಶ್ವಖ್ಯಾತಿಯ ಹಲವು ತಾಣಗಳಿದ್ದು, ಅವುಗಳ ಅಭಿವೃದ್ಧಿಗೆ ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ. ಇದೀಗ ಬೌದ್ಧ ಕ್ಷೇತ್ರಗಳನ್ನು ಯೋಗಿ ಆದಿತ್ಯನಾಥ ಸರ್ಕಾರ ಕಣ್ಣಿಟ್ಟಿದ್ದು, ಹೊಸ ಬದಲಾವಣೆಗೆ ತೆರೆದುಕೊಂಡಿದೆ. ಬೌದ್ಧನ ಕ್ಷೇತ್ರಗಳ ಅಭಿವೃದ್ಧಿಗೆ ನೂತನ ಯೋಜನೆ ರೂಪಿಸಿದ್ದು, ಶೀಘ್ರದಲ್ಲಿ ಈ ಯೋಜನೆ ಕಾಮಗಾರಿ ಆರಂಭವಾಗಿಲಿದೆ. ಈ ಯೋಜನೆ ಪೂರ್ಣಗೊಂಡರೆ ಉತ್ತರ ಪ್ರದೇಶದಲ್ಲಿ ಪ್ರವಾಸೋಧ್ಯಮದ ವಿಶೇಷವಾಗಿ ಬೌದ್ಧರ ತಾಣಗಳಿಗೆ ಲಕ್ಷಾಂತರ ಜನರು ಭೇಟಿ ನೀಡುವಂತೆ ಮಾಡುವುದು ನಿಶ್ಚಿತ ಎಂಬುದು ಸರ್ಕಾರದ ಲೆಕ್ಕಾಚಾರ.

ಮಾಯಾವತಿ ಅಧಿಕಾರದಲ್ಲಿದ್ದಾಗ ಕೇವಲ ಕೆಲವು ನಗರಗಳಿಗೆ ಗೌತಮ ನಗರ, ಸಿದ್ಧಾರ್ಥ ನಗರ, ಬುದ್ಧ ನಗರ ಎಂದು ನಾಮಕರಣ ಮಾಡಿ ಬುದ್ಧನ ಸಾರಥಿಯಂತೆ ಬಿಂಬಿಸಿಕೊಂಡಿದ್ದರು. ಆದರೆ ಬೌದ್ಧ ಧರ್ಮದ ಪ್ರಸಿದ್ಧ ಕ್ಷೇತ್ರಗಳ ಅಭಿವೃದ್ಧಿ ಮರೆತ್ತಿದ್ದರು. ಆದರೆ ಇದೀಗ ಪ್ರಸಿದ್ಧ ಬೌದ್ಧ ಕ್ಷೇತ್ರಗಳಾದ ಸಾರಾನಾಥ, ಖುಷಿ ನಗರ, ಸ್ರವಸ್ತಿ, ಸಂಕಿಸಾ, ಕೌಷಂಬಿ ಮತ್ತು ಕಪಿಲವಸ್ತು ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಲು ನಿರ್ಧರಿಸಿದ್ದಾರೆ, ಅಲ್ಲದೇ ಎಲ್ಲ ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಸರಣಿಯಾಗಿ ಭೇಟಿನೀಡುವಂತ ಯೋಜನೆಯನ್ನು ರೂಪಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search