• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಉಗ್ರ ಪೋಷಣೆ ಬಯಲು: ಪಾಕಿಸ್ತಾನದಲ್ಲಿದ್ದಾರೆ 139 ಮೋಸ್ಟ್ ವಾಟೆಂಡ್ ಉಗ್ರರು

TNN Correspondent Posted On April 4, 2018
0


0
Shares
  • Share On Facebook
  • Tweet It

ದೆಹಲಿ: ಭಯೋತ್ಪಾದಕರ ಮೂಲ ಕೇಂದ್ರ ಸ್ಥಾನ ಪಾಕಿಸ್ತಾನ ಎಂಬುದು ಮತ್ತೊಮ್ಮೆ ಸಾಬೀತಾಗಿದ್ದು, ಇದೀಗ ವಿಶ್ವಸಂಸ್ಥೆ ಭದ್ರತಾ ಮಂಡಳಿ ಬಿಡುಗಡೆ ಮಾಡಿರುವ ಘೋಷಿತ ಭಯೋತ್ಪಾದಕರ ಪಟ್ಟಿಯಲ್ಲಲಿ 139 ಪಾಕಿಸ್ತಾನಿಯರು ಸ್ಥಾನ ಪಡೆದಿದ್ದಾರೆ. ಈ ಮೂಲಕ ಭಯೋತ್ಪಾದಕರನ್ನು ಪಾಕಿಸ್ತಾನ ಸಲಹುತ್ತಿರುವುದು ಪದೇ ಪದೆ ಸಾಬೀತಾಗಿದೆ. ಭೂಗತ ಪಾತಕಿ ದಾವೂದ್‌ ಇಬ್ರಾಹಿಂ, ಮುಂಬಯಿ ದಾಳಿ ಸಂಚುಕೋರ ಹಫೀಜ್ ಸಯೀದ್‌ ಈ ಪಟ್ಟಿಯಲ್ಲಿದ್ದಾರೆ.

ಈ ಕುರಿತು ಪಾಕಿಸ್ತಾನದ ಡಾನ್ ವರದಿ ಮಾಡಿದ್ದು, ಪಾತಕಿ ದಾವೂದ್‌ ಇಬ್ರಾಹಿಂ ರಾವಲ್ಪಿಂಡಿ ಹಾಗೂ ಕರಾಚಿಯಿಂದ ಪಾಸ್‌ಪೋರ್ಟ್‌ಗಳನ್ನು ತನ್ನ ಹೆಸರಿನಲ್ಲಿ ಪಡೆದುಕೊಂಡಿದ್ದಾನೆ. ಕರಾಚಿಯ ನೂರಾಬಾದ್‌ನಲ್ಲಿ ಅರಮನೆಯಂತಹ ಬಂಗಲೆ ಹೊಂದಿದ್ದಾರೆ ಎಂದು ಭದ್ರತಾ ಮಂಡಳಿ ವಿವರಿಸಿದೆ ಎಂದು ಡಾನ್ ವರದಿ ಮಾಡಿದೆ.

ಎಲ್‌ಇಟಿ ಸ್ಥಾಪಕ ಸಯೀದ್‌, ಎಲ್‌ಇಟಿಯ ‘ಮಾಧ್ಯಮ ಸಂಪರ್ಕ’ ಹಾಜಿ ಮೊಹಮ್ಮದ್‌ ಯಾಹ್ಯಾ ಮುಜಾಹಿದ್‌ ಮತ್ತು ಈತನ ಸಹಾಯಕರಾದ ಅಬ್ದುಲ್‌ ಸಲಾಮ್‌ ಹಾಗೂ ಝಫರ್‌ ಇಕ್ಬಾಲ್‌ ಕೂಡ ‘ಉಗ್ರರ ಪಟ್ಟಿಯಲ್ಲಿ’ ಸೇರಿದ್ದಾರೆ.
ಎಲ್‌ಇಟಿ ಜತೆಗೆ, ಅಲ್‌- ಮನ್ಸೂರಿಯನ್‌, ಪಾಸ್ಬಾನ್‌-ಇ-ಕಾಶ್ಮೀರ್, ಪಾಸ್ಬಾನ್‌-ಇ-ಅಹ್ಲೆ ಹಾದಿತ್‌, ಜಮಾತ್‌ ಉದ್‌ದಾವ, ಫಲಾಹ್‌-ಇ-ಇನ್ಸಾನಿಯತ್‌ ಫೌಂಡೇಶನ್‌ಗಳನ್ನೂ ಉಗ್ರ ಸಂಘಟನೆಗಳ ಪಟ್ಟಿಗೆ ಸೇರಿಸಲಾಗಿದೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search