• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನನ್ನ ದೇಶ ನೆನಪಿಸಿಕೊಂಡಿದ್ದೇ ಬೆಳ್ಳಿ ಪದಕ ಗೆಲ್ಲಲು ಸಹಾಯಕವಾಯ್ತು ಎಂದಿದ್ದು ಯಾರು ಗೊತ್ತೇ?

TNN Correspondent Posted On April 6, 2018
0


0
Shares
  • Share On Facebook
  • Tweet It

ಗೋಲ್ಡ್ ಕೋಸ್ಟ್: 2012ರ ಒಲಿಂಪಿಕ್ ನಲ್ಲಿ ಕಂಚಿನ ಪದಕ ಗೆದ್ದ ಬಳಿಕ ತಮ್ಮ ಮನದಾಳ ಬಿಚ್ಚಿಟ್ಟಿದ್ದ ಸೈನಾ ನೆಹ್ವಾಲ್, ನಾನು ರಾಷ್ಟ್ರಧ್ವಜ ಕೇಳಬೇಕಾದರೂ ಪದಕ ಗೆಲ್ಲಬೇಕು ಎಂದುಕೊಂಡಿದ್ದೆ ಎಂದು ತಿಳಿಸಿದ್ದರು. ಇದು ಒಬ್ಬ ಆಟಗಾರನಲ್ಲಿ ದೇಶ, ದೇಶಪ್ರೇಮ ಎಷ್ಟರಮಟ್ಟಿಗೆ ಒಡಮೂಡಿರುತ್ತದೆ ಎಂಬುದರ ಸಂಕೇತ. ಒಡಲೊಳಗೆ ಕ್ಯಾನ್ಸರ್ ಗೆಡ್ಡೆ ಇಟ್ಟುಕೊಂಡು 2011ರ ವಿಶ್ವಕಪ್ ಪಂದ್ಯಾವಳಿ ಆಡಿದ ಯುವರಾಜ್ ಸಿಂಗ್ ಸಹ ಅಂಥ ಅಪ್ಪಟ ದೇಶಪ್ರೇಮಿಯೇ!

ಆಟಗಾರನಿಗೆ ದೇಶಪ್ರೇಮ ಎಷ್ಟರ ಮಟ್ಟಿಗೆ ಸಹಾಯಕವಾಗುತ್ತದೆ, ದೇಶದ ಹೆಮ್ಮೆಯನ್ನು ಬಾನೆತ್ತರಕ್ಕೆ ಹಾರಿಸಲು ಸ್ಫೂರ್ತಿ ನೀಡುತ್ತದೆ ಎಂಬುದು ಈ ಬಾರಿಯ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಸಾಬೀತಾಗಿದೆ.

ಕಾಮನ್ ವೆಲ್ತ್ ಗೇಮ್ಸ್ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಕುಂದಾಪುರದ ಗುರುರಾಜ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಭಾರ ಎತ್ತುವಾಗ ನನ್ನ ಕುಟುಂಬ ಹಾಗೂ ದೇಶವನ್ನು ನೆನಪಿಸಿಕೊಂಡೆ, ಇದೇ ಮುನ್ನಡೆ ಸಾಧಿಸಲು ಕಾರಣವಾಯಿತು ಎಂದು ತಿಳಿಸಿದ್ದಾರೆ.

ಪದಕ ಗೆಲ್ಲುವುದಕ್ಕೂ ಮೊದಲಿನ ಎರಡು ಪ್ರಯತ್ನದಲ್ಲಿ ನಾನು ಎರಡು ಬಾರಿ ಹಿನ್ನಡೆ ಅನುಭವಿಸಿದ್ದೆ. ಬಳಿಕ ನನ್ನ ತರಬೇತುದಾರ ಬಳಿ ಬಂದು ಇದು ನಿನ್ನ ಜೀವನದ ಮೇಲೆ ಅವಲಂಬಿತವಾಗಿದೆ, ಜನ ಹೇಗೆ ನಿನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ, ಈ ಮುನ್ನಡೆ ಹೇಗೆ ನಿನ್ನ ಜೀವನ ಬದಲಾಯಿಸುತ್ತದೆ ಎಂಬುದರ ಬಗ್ಗೆ ತಿಳಿಸಿದರು ಎಂದು ಗುರುರಾಜ್ ಸ್ಮರಿಸಿದ್ದಾರೆ.

ನಾನೂ ಸಹ ಧೈರ್ಯ ಮಾಡಿ ಭಾರ ಎತ್ತಲು ಮುಂದೆ ಬಂದೆ. ಆಗ ನನ್ನ ದೇಶ ಹಾಗೂ ಕುಟುಂಬವನ್ನು ನೆನಪಿಸಿಕೊಂಡೇ. ಅದೇ ಲಹರಿಯಲ್ಲಿ ಭಾರ ಎತ್ತಿದೆ. ಹಾಗಾಗಿ ಈ ಪದಕ ನನ್ನ ದೇಶ ಹಾಗೂ ಕುಟುಂಬಕ್ಕೆ ಸಮರ್ಪಿಸುತ್ತೇನೆ ಎಂದು ಕೃತಜ್ಞತೆ ಮೆರೆದಿದ್ದಾರೆ ಗುರುರಾಜ್. ಅಷ್ಟಕ್ಕೂ ದೇಶಪ್ರೇಮ ಎಂಬುದು ಸ್ಫೂರ್ತಿಯ ಚಿಲುಮೆಯಲ್ಲವೇ…

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search