• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನನ್ನ ದೇಶ ನೆನಪಿಸಿಕೊಂಡಿದ್ದೇ ಬೆಳ್ಳಿ ಪದಕ ಗೆಲ್ಲಲು ಸಹಾಯಕವಾಯ್ತು ಎಂದಿದ್ದು ಯಾರು ಗೊತ್ತೇ?

TNN Correspondent Posted On April 6, 2018
0


0
Shares
  • Share On Facebook
  • Tweet It

ಗೋಲ್ಡ್ ಕೋಸ್ಟ್: 2012ರ ಒಲಿಂಪಿಕ್ ನಲ್ಲಿ ಕಂಚಿನ ಪದಕ ಗೆದ್ದ ಬಳಿಕ ತಮ್ಮ ಮನದಾಳ ಬಿಚ್ಚಿಟ್ಟಿದ್ದ ಸೈನಾ ನೆಹ್ವಾಲ್, ನಾನು ರಾಷ್ಟ್ರಧ್ವಜ ಕೇಳಬೇಕಾದರೂ ಪದಕ ಗೆಲ್ಲಬೇಕು ಎಂದುಕೊಂಡಿದ್ದೆ ಎಂದು ತಿಳಿಸಿದ್ದರು. ಇದು ಒಬ್ಬ ಆಟಗಾರನಲ್ಲಿ ದೇಶ, ದೇಶಪ್ರೇಮ ಎಷ್ಟರಮಟ್ಟಿಗೆ ಒಡಮೂಡಿರುತ್ತದೆ ಎಂಬುದರ ಸಂಕೇತ. ಒಡಲೊಳಗೆ ಕ್ಯಾನ್ಸರ್ ಗೆಡ್ಡೆ ಇಟ್ಟುಕೊಂಡು 2011ರ ವಿಶ್ವಕಪ್ ಪಂದ್ಯಾವಳಿ ಆಡಿದ ಯುವರಾಜ್ ಸಿಂಗ್ ಸಹ ಅಂಥ ಅಪ್ಪಟ ದೇಶಪ್ರೇಮಿಯೇ!

ಆಟಗಾರನಿಗೆ ದೇಶಪ್ರೇಮ ಎಷ್ಟರ ಮಟ್ಟಿಗೆ ಸಹಾಯಕವಾಗುತ್ತದೆ, ದೇಶದ ಹೆಮ್ಮೆಯನ್ನು ಬಾನೆತ್ತರಕ್ಕೆ ಹಾರಿಸಲು ಸ್ಫೂರ್ತಿ ನೀಡುತ್ತದೆ ಎಂಬುದು ಈ ಬಾರಿಯ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಸಾಬೀತಾಗಿದೆ.

ಕಾಮನ್ ವೆಲ್ತ್ ಗೇಮ್ಸ್ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಕುಂದಾಪುರದ ಗುರುರಾಜ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಭಾರ ಎತ್ತುವಾಗ ನನ್ನ ಕುಟುಂಬ ಹಾಗೂ ದೇಶವನ್ನು ನೆನಪಿಸಿಕೊಂಡೆ, ಇದೇ ಮುನ್ನಡೆ ಸಾಧಿಸಲು ಕಾರಣವಾಯಿತು ಎಂದು ತಿಳಿಸಿದ್ದಾರೆ.

ಪದಕ ಗೆಲ್ಲುವುದಕ್ಕೂ ಮೊದಲಿನ ಎರಡು ಪ್ರಯತ್ನದಲ್ಲಿ ನಾನು ಎರಡು ಬಾರಿ ಹಿನ್ನಡೆ ಅನುಭವಿಸಿದ್ದೆ. ಬಳಿಕ ನನ್ನ ತರಬೇತುದಾರ ಬಳಿ ಬಂದು ಇದು ನಿನ್ನ ಜೀವನದ ಮೇಲೆ ಅವಲಂಬಿತವಾಗಿದೆ, ಜನ ಹೇಗೆ ನಿನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ, ಈ ಮುನ್ನಡೆ ಹೇಗೆ ನಿನ್ನ ಜೀವನ ಬದಲಾಯಿಸುತ್ತದೆ ಎಂಬುದರ ಬಗ್ಗೆ ತಿಳಿಸಿದರು ಎಂದು ಗುರುರಾಜ್ ಸ್ಮರಿಸಿದ್ದಾರೆ.

ನಾನೂ ಸಹ ಧೈರ್ಯ ಮಾಡಿ ಭಾರ ಎತ್ತಲು ಮುಂದೆ ಬಂದೆ. ಆಗ ನನ್ನ ದೇಶ ಹಾಗೂ ಕುಟುಂಬವನ್ನು ನೆನಪಿಸಿಕೊಂಡೇ. ಅದೇ ಲಹರಿಯಲ್ಲಿ ಭಾರ ಎತ್ತಿದೆ. ಹಾಗಾಗಿ ಈ ಪದಕ ನನ್ನ ದೇಶ ಹಾಗೂ ಕುಟುಂಬಕ್ಕೆ ಸಮರ್ಪಿಸುತ್ತೇನೆ ಎಂದು ಕೃತಜ್ಞತೆ ಮೆರೆದಿದ್ದಾರೆ ಗುರುರಾಜ್. ಅಷ್ಟಕ್ಕೂ ದೇಶಪ್ರೇಮ ಎಂಬುದು ಸ್ಫೂರ್ತಿಯ ಚಿಲುಮೆಯಲ್ಲವೇ…

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search