• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತರ ಪ್ರದೇಶದಲ್ಲಿ ನಕಲಿ ಮದರಸಾಗಳ ಮೇಲೆ ಯೋಗಿ ಆದಿತ್ಯನಾಥರೇಕೆ ಉರಿದುಬೀಳುತ್ತಾರೆ ಎಂದರೆ?

TNN Correspondent Posted On April 6, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾದ ಬಳಿಕ ತೆಗೆದುಕೊಂಡ ಪ್ರಮುಖ ಹಾಗೂ ದಿಟ್ಟ ನಿರ್ಧಾರಗಳಲ್ಲಿ ನಕಲಿ ಮದರಸಾಗಳಿಗೆ ಬೀಗ ಹಾಕಿಸುವುದು. ಆದರೆ ಇದಕ್ಕೆ ಯೋಗಿ ಆದಿತ್ಯನಾಥರಿಗೇ ಮುಸ್ಲಿಂ ವಿರೋಧಿ ಎಂಬ ಪಟ್ಟ ಕಟ್ಟಲಾಯಿತು.

ಆದರೆ ಉತ್ತರ ಪ್ರದೇಶದಲ್ಲಿ ಕೆಲವು ಮದರಸಾಗಳು ಎಷ್ಟು ಅಪಾಯಕಾರಿ ಎಂಬುದಕ್ಕೆ ಸ್ಪಷ್ಟ ನಿದರ್ಶನವೊಂದು ಸಿಕ್ಕಿದ್ದು, ಉಗ್ರರ ಜತೆ ನಂಟು ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಜಾಮಿಯಾ ಅರೇಬಿಯಾ ಮದರಸಾದಲ್ಲಿ ಓದುತ್ತಿದ್ದ 7 ವಿದ್ಯಾರ್ಥಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

ಈ ಏಳೂ ವಿದ್ಯಾರ್ಥಿಗಳು ಕಾಶ್ಮೀರದವರಾಗಿದ್ದು, ಇವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉಗ್ರ ಸಂಘಟನೆಗಳ ಜತೆ ಸಂಪರ್ಕ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಏಳೂ ವಿದ್ಯಾರ್ಥಿಗಳನ್ನು ದೆಹಲಿಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ.

ಕಳೆದ ಮೂರು ತಿಂಗಳ ಹಿಂದಷ್ಟೇ ತೌಸೀಫ್ ಮಲಿಕ್ ಎಂಬಾತನನ್ನು ಬಂಧಿಸಲಾಗಿದ್ದು, ಈತ ಉಗ್ರನ ಜತೆ ನಂಟು ಹೊಂದಿದ್ದಾನೆ ಎಂಬ ಪ್ರಕರಣದಲ್ಲಿ ಎನ್ಐಎ ತನಿಖೆ ನಡೆಸುತ್ತಿದೆ. ಆದಾಗ್ಯೂ ಈತನೂ ಇದೇ ಮದರಸಾದಲ್ಲಿ ಕಲಿತಿದ್ದ ಎಂಬ ಕಾರಣಕ್ಕಾಗಿ ಕಳೆದ ಮಾರ್ಚ್ ನಲ್ಲಿ ಎನ್ಐಎ ಅಧಿಕಾರಿಗಳು ಈ ಮದರಸಾದಲ್ಲಿ ಪರಿಶೀಲನೆ ನಡೆಸಿದ್ದರು ಎಂದು ತಿಳಿದುಬಂದಿದೆ.

ಏಳು ಜನ ಕಾಶ್ಮೀರಿಗಳ ಬಂಧನದ ಕುರಿತು ಯಾವುದೇ ಮಾಹಿತಿ ನೀಡಿಲ್ಲವಾದರೂ, ಮದರಸಾ ಮೂಲಗಳ ಪ್ರಕಾರ ಕಳೆದ ಬುಧವಾರ ಅಧಿಕಾರಿಗಳು ಮದರಸಾಕ್ಕೆ ತೆರಳಿ ಏಳು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಈಗಲಾದರೂ ಗೊತ್ತಾಯಿತಲ್ಲ, ಏಕೆ ಯೋಗಿ ಆದಿತ್ಯನಾಥರು ನಕಲಿ ಮದರಸಾಗಳೆಂದರೆ ಉರಿದುಬೀಳುತ್ತಾರೆ ಎಂದು?

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search