• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತರ ಪ್ರದೇಶದಲ್ಲಿ ನಕಲಿ ಮದರಸಾಗಳ ಮೇಲೆ ಯೋಗಿ ಆದಿತ್ಯನಾಥರೇಕೆ ಉರಿದುಬೀಳುತ್ತಾರೆ ಎಂದರೆ?

TNN Correspondent Posted On April 6, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾದ ಬಳಿಕ ತೆಗೆದುಕೊಂಡ ಪ್ರಮುಖ ಹಾಗೂ ದಿಟ್ಟ ನಿರ್ಧಾರಗಳಲ್ಲಿ ನಕಲಿ ಮದರಸಾಗಳಿಗೆ ಬೀಗ ಹಾಕಿಸುವುದು. ಆದರೆ ಇದಕ್ಕೆ ಯೋಗಿ ಆದಿತ್ಯನಾಥರಿಗೇ ಮುಸ್ಲಿಂ ವಿರೋಧಿ ಎಂಬ ಪಟ್ಟ ಕಟ್ಟಲಾಯಿತು.

ಆದರೆ ಉತ್ತರ ಪ್ರದೇಶದಲ್ಲಿ ಕೆಲವು ಮದರಸಾಗಳು ಎಷ್ಟು ಅಪಾಯಕಾರಿ ಎಂಬುದಕ್ಕೆ ಸ್ಪಷ್ಟ ನಿದರ್ಶನವೊಂದು ಸಿಕ್ಕಿದ್ದು, ಉಗ್ರರ ಜತೆ ನಂಟು ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಜಾಮಿಯಾ ಅರೇಬಿಯಾ ಮದರಸಾದಲ್ಲಿ ಓದುತ್ತಿದ್ದ 7 ವಿದ್ಯಾರ್ಥಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

ಈ ಏಳೂ ವಿದ್ಯಾರ್ಥಿಗಳು ಕಾಶ್ಮೀರದವರಾಗಿದ್ದು, ಇವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉಗ್ರ ಸಂಘಟನೆಗಳ ಜತೆ ಸಂಪರ್ಕ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಏಳೂ ವಿದ್ಯಾರ್ಥಿಗಳನ್ನು ದೆಹಲಿಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ.

ಕಳೆದ ಮೂರು ತಿಂಗಳ ಹಿಂದಷ್ಟೇ ತೌಸೀಫ್ ಮಲಿಕ್ ಎಂಬಾತನನ್ನು ಬಂಧಿಸಲಾಗಿದ್ದು, ಈತ ಉಗ್ರನ ಜತೆ ನಂಟು ಹೊಂದಿದ್ದಾನೆ ಎಂಬ ಪ್ರಕರಣದಲ್ಲಿ ಎನ್ಐಎ ತನಿಖೆ ನಡೆಸುತ್ತಿದೆ. ಆದಾಗ್ಯೂ ಈತನೂ ಇದೇ ಮದರಸಾದಲ್ಲಿ ಕಲಿತಿದ್ದ ಎಂಬ ಕಾರಣಕ್ಕಾಗಿ ಕಳೆದ ಮಾರ್ಚ್ ನಲ್ಲಿ ಎನ್ಐಎ ಅಧಿಕಾರಿಗಳು ಈ ಮದರಸಾದಲ್ಲಿ ಪರಿಶೀಲನೆ ನಡೆಸಿದ್ದರು ಎಂದು ತಿಳಿದುಬಂದಿದೆ.

ಏಳು ಜನ ಕಾಶ್ಮೀರಿಗಳ ಬಂಧನದ ಕುರಿತು ಯಾವುದೇ ಮಾಹಿತಿ ನೀಡಿಲ್ಲವಾದರೂ, ಮದರಸಾ ಮೂಲಗಳ ಪ್ರಕಾರ ಕಳೆದ ಬುಧವಾರ ಅಧಿಕಾರಿಗಳು ಮದರಸಾಕ್ಕೆ ತೆರಳಿ ಏಳು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಈಗಲಾದರೂ ಗೊತ್ತಾಯಿತಲ್ಲ, ಏಕೆ ಯೋಗಿ ಆದಿತ್ಯನಾಥರು ನಕಲಿ ಮದರಸಾಗಳೆಂದರೆ ಉರಿದುಬೀಳುತ್ತಾರೆ ಎಂದು?

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search