• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಾಡಪ್ರಭುವಿಗೆ ರಾಜ್ಯ ಸರ್ಕಾರದಿಂದ ಅವಮಾನ, ಅನೈತಿಕ ತಾಣದಲ್ಲಿ ಕೆಂಪೇಗೌಡರ ಪ್ರತಿಮೆ

TNN Correspondent Posted On April 7, 2018


  • Share On Facebook
  • Tweet It

ಬೆಂಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇವಲ ಜನರ ಮಧ್ಯೆ ಜಾತಿ, ಧರ್ಮಗಳ ಹೆಸರಲ್ಲಿ ವಿಷ ಬೀಜ ಬಿತ್ತಿ ಒಡೆದು ಆಳುತ್ತಿದೆ. ಇನ್ನೊಂದೆಡೆ ಕೆಲವು ಜಾತಿಗಳನ್ನು ಸೆಳೆಯಲು ಹೀನ ಕುತಂತ್ರ ಸಿದ್ದರಾಮಯ್ಯ ಸರ್ಕಾರ ಕೈಗೊಂಡಿದೆ. ಅಲ್ಲದೇ ಇತ್ತೀಚೆಗೆ ಚುನಾವಣೆ ನೀತಿ ಸಂಹಿತೆಯ ಭೀತಿಯಲ್ಲಿ ಆತುರದಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿ, ಅಪೂರ್ಣ ಕಾಮಗಾರಿಗಳನ್ನೇ ಉದ್ಘಾಟಿಸಲಾಗಿದೆ. ಚುನಾವಣೆಗಾಗಿ ಎಂತಹುದ್ದೇ ಹೀನ ಕೆಲಸಕ್ಕೆ ಬೇಕಾದರೂ ಇಳಿಯುತ್ತೇನೆ ಎನ್ನುವ ಕಾಂಗ್ರೆಸ್ ಸರ್ಕಾರದ ಧ್ಯೇಯ ಸ್ಪಷ್ಟವಾಗಿದ್ದು, ಸರ್ಕಾರ ನಾಡಪ್ರಭು ಕೆಂಪೇಗೌಡರಿಗೆ ಭಾರಿ ಅವಮಾನ ಮಾಡಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹೆಬ್ಬಾಳ ಜಂಕ್ಷನ್ ನಲ್ಲಿರೋ ಕಗ್ಗತ್ತಲ್ಲಲ್ಲಿ ನಾಡಪ್ರಭು ಕೆಂಪೇಗೌಡರ ಪುತ್ಥಳಿಯನ್ನು ರಾಜ್ಯ ಸರ್ಕಾರ ಅನಾವರಣಗೊಳಿಸಿದೆ. ಆದರೆ ಕಾಮಗಾರಿ ಪೂರ್ಣಗೊಂಡಿಲ್ಲ. ಅಲ್ಲದೇ ಮೂರ್ತಿ ಸ್ಥಾಪನೆ ಸ್ಥಳ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಮೂರ್ತಿ ಅನಾವರಣಗೊಂಡರೂ ಇಡೀ ಸ್ಥಳದಲ್ಲಿ ಯಾವುದೇ ಅಭಿವೃದ್ಧಿ ಕಾಣುತ್ತಿಲ್ಲ. ದುರಂತವೆಂದರೆ ಸ್ಥಳ ಸ್ವಚ್ಛತೆ ನಡೆಸದೇ ಇರುವುದರಿಂದ ಕಾಂಡೋಮ್ ಗಳು ಕಾಣುತ್ತಿರುವುದು ಒಕ್ಕಲಿಗ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.

ಅಭಿವೃದ್ಧಿ ಕಾಣದ ಪಾರ್ಕ್ ನಲ್ಲಿ ಅನೈತಿಕ ಚಟುವಟಿಕೆಗಳು ನಿರಂತರವಾಗಿದ್ದು, ಮದ್ಯದ ಬಾಟಲಿಗಳು, ಕಾಂಡೋಮ್ ಗಳು ಕಾಣುವುದು ಸಾಮಾನ್ಯವಾಗಿದೆ. ಚುನಾವಣೆಗಾಗಿ ಕೆಂಪೇಗೌಡರಿಗೆ ಅವಮಾನ ಮಾಡಿದಕ್ಕೆ ರಾಜ್ಯ ಒಕ್ಕಲಿಗರ ಸಂಘ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಹೆಬ್ಬಾಳ ಜಂಕ್ಷನಲ್ಲಿ ನಿರ್ಮಾಣವಾಗಿರೋ ನಾಡಪ್ರಭುವಿನ ಪುತ್ಥಳಿ ಸ್ಥಳ ಬಿಡಿಎ ಪಾರ್ಕ್ ಎನ್ನುತ್ತಿದ್ದರೂ ಅದು ಕಸದ ಡಂಪಿಂಗ್ ಯಾರ್ಡ್ ಆಗಿದೆ. ಇಲ್ಲಿ ಸ್ವಚ್ಛತೆ, ರಕ್ಷಣೆ ಇಲ್ಲವೇ ಇಲ್ಲ. 3 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಿರುವ ಕೆಂಪೇಗೌಡರ ಅಶ್ವಾರೂಢನ ಪುತ್ಥಳಿಗೆ ಒಂದೇ ಒಂದು ವಿದ್ಯುತ್ ದೀಪ ಹಾಕಿಲ್ಲ. ಅಲ್ಲದೇ ಬಿದ್ದಿರುವ ಕಾಂಡೋಮ್ ತೆರವು ಮಾಡಿ್ಲ. ಮಂಗಳಮುಖಿಯರ ಉಪಟಳವನ್ನು ತಡೆಯುತ್ತಿಲ್ಲ ಎಂದು ಒಕ್ಕಲಿಗರ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search