• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

150 ಕೋಟಿ ರೂ. ಮೌಲ್ಯದ ಕೃಷಿ ಭೂಮಿ ಮಾರ್ಪಾಡು ಮಾಡಿದರೇ ಕೆ.ಜೆ.ಜಾರ್ಜ್?

TNN Correspondent Posted On April 7, 2018
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಚುನಾವಣೆ ಕಾವು ರಂಗೇರುತ್ತಿರುವ ಬೆನ್ನಲ್ಲೇ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಸಂಕಷ್ಟ ಎದುರಾಗಿದ್ದು, ಬರೋಬ್ಬರಿ 150 ಕೋಟಿ ರೂ. ಮೌಲ್ಯದ ಕೃಷಿ ಭೂಮಿಯನ್ನು ಗೃಹ ನಿರ್ಮಾಣ ಭೂಮಿಯಾಗಿ ಮಾರ್ಪಾಡು ಮಾಡಿದ ಆರೋಪದಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವವರು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಹೊಸಕೋಟೆ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ತಿಮ್ಮೇಗೌಡ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಬಿಎಂಆರ್ ಡಿಎ ಆಯುಕ್ತ ಬಿ.ಎಸ್.ಶೇಖರಪ್ಪ, ಬಿಎಂಆರ್ ಡಿಎ ನಗರ ಯೋಜಕ ಎನ್.ಕೆ.ತಿಪ್ಪೇಸ್ವಾಮಿ, ಬಿಎಂಆರ್ ಡಿಎ ಹೆಚ್ಚುವರಿ ನಿರ್ದೇಶಕ ವಿ.ಧನಂಜಯರೆಡ್ಡಿ ಮತ್ತು ಬಿಎಂಆರ್ ಡಿಎ ಅಧಿಕಾರಿ ಎನ್.ನರಸಿಂಹಮೂರ್ತಿ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಿಸಲಾಗಿದೆ.

ಹೊಸಕೋಟೆಯಲ್ಲಿ ಹೊಸಕೋಟೆ ಯೋಜನಾ ಪ್ರಾಧಿಕಾರದ ಅಡಿಯಲ್ಲಿ ಮಾಸ್ಟರ್ ಪ್ಲಾನ್ ರಚಿಸುವ ಸೋಗು ಹಾಕಿ ಸುಮಾರು 870 ಹೆಕ್ಟೇರ್ ಕೃಷಿ ಭೂಮಿಯನ್ನು ಅಕ್ರಮವಾಗಿ ವಸತಿ ಹಾಗೂ ಗೃಹ ನಿರ್ಮಾಣ ಭೂಮಿಯನ್ನಾಗಿ ಮಾರ್ಪಾಡು ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದು ಸುಮಾರು 150 ಕೋಟಿ ರೂಪಾಯಿ ಮೌಲ್ಯದ ಹಗರಣವಾಗಿದ್ದು, ಸಚಿವ ಕೆ.ಜೆ.ಜಾರ್ಜ್ ಹಾಗೂ ಆರು ಅಧಿಕಾರಿಗಳಲ್ಲದೆ 40 ಬ್ಯುಲ್ಡರ್ ಗಳು ಸಹ ಹಗರಣದಲ್ಲಿ ಭಾಗಿಯಾಗಿದ್ದಾರೆ. ಇದರ ಕುರಿತು ತನಿಖೆ ನಡೆಸಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆದಾಗ್ಯೂ, ಡಿವೈಎಸ್ ಪಿ ಎಂ.ಕೆ.ಗಣಪತಿ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಜೆ.ಜಾರ್ಜ್ ಅವರಿಗೆ ಚುನಾವಣೆ ಹೊಸ್ತಿಲಿನಲ್ಲಿ ಮತ್ತೊಂದು ಕಂಟಕ ಎದುರಾಗಿದ್ದು, ಎಲ್ಲರ ದೃಷ್ಟಿ ತನಿಖೆಯತ್ತ ನೆಟ್ಟಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search