• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಪಿಸಿಸಿ ಅಧ್ಯಕ್ಷರ ಜಿಲ್ಲೆಯಲ್ಲೇ ಫ್ಲೋರೈಡ್ ಯುಕ್ತ ನೀರು, ಗಮನ ಹರಿಸೋರು ಯಾರು?

TNN Correspondent Posted On April 7, 2018
0


0
Shares
  • Share On Facebook
  • Tweet It

ತುಮಕೂರು: ಈ ಬಾರಿಯ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಭಾರಿ ಚಟುವಟಿಕೆಯಿಂದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಅದಕ್ಕೆ, ಕಳೆದ ಬಾರಿ ಕೊರಟಗೆರೆ ಕ್ಷೇತ್ರದಲ್ಲಿ ಜನ ಸೋಲಿಸಿದರು ಎಂಬ ಹಳೆಯ ಭೀತಿಯೋ ಇಲ್ಲವೇ ಈ ಬಾರಿ ಕಾಂಗ್ರೆಸ್ ಗೆದ್ದರೆ ಮುಖ್ಯಮಂತ್ರಿ ಆಗುತ್ತೇನೆ ಎಂಬ ಭ್ರಾಂತಿಯೋ, ಪರಮೇಶ್ವರ್ ಅವರನ್ನು ಚಟುವಟಿಕೆಯಿಂದಿರಿಸಿದೆ.

ಆದರೆ, ಹೋದ ಕಡೆಯಲ್ಲೆಲ್ಲ, ನಾವು ಬಡವರ ಪರ, ಅಭಿವೃದ್ಧಿ ಪರ ಎನ್ನುವ ಡಾ.ಜಿ.ಪರಮೇಶ್ವರ್ ಅವರ ಜಿಲ್ಲೆಯಲ್ಲೇ ಜನ ಫ್ಲೋರೈಡ್ ನೀರು ಕುಡಿದು ಆಸ್ಪತ್ರೆ ಪಾಲಾಗುತ್ತಿದ್ದು, ಈ ಕುರಿತು ಪರಮೇಶ್ವರ್ ಯೋಚಿಸಿಯೇ ಇಲ್ಲವೇ ಎಂಬ ಪ್ರಶ್ನೆ ಕಾಡುತ್ತಿದೆ.

ಹೌದು, ಕೇಂದ್ರ ಅಂತರ್ಜಲ ಮಂಡಳಿ ತುಮಕೂರು ಜಿಲ್ಲೆಯ ಶಿರಾ, ಗುಬ್ಬಿ, ಪಾವಗಡ, ಮಧುಗಿರಿ ಹಾಗೂ ಸ್ವತಃ ಡಾ.ಜಿ.ಪರಮೇಶ್ವರ್ ಅವರ ಕ್ಷೇತ್ರವಾದ ಕೊರಟಗೆರೆ ತಾಲೂಕಿನಲ್ಲಿ ನೀರಿನ ಪರೀಕ್ಷೆ ಮಾಡಿದ್ದು, ಸಾಮಾನ್ಯ ನೀರಿನಲ್ಲಿ ಇರುವ ಫ್ಲೋರೈಡ್ ಗಿಂತ, ಈ ತಾಲೂಕಿನ ನೀರಿನಲ್ಲಿ ಜಾಸ್ತಿಯಿದೆ ಎಂದು ತಿಳಿದುಬಂದಿದೆ.

ಅದರಲ್ಲೂ ಪಾವಗಡ ತಾಲೂಕಿನ ತಿರುಮಣಿಯಲ್ಲಿ ಈ ಫ್ಲೋರೈಡ್ ಪ್ರಮಾಣದ ಅಪಾಯದ ಅಂಚು ತಲುಪಿದ್ದು, ಜನ ಕುಡಿಯುವ ನೀರು ಸ್ಲೋ ಪಾಯ್ಸನ್ ಹಾಗೆ ಆಗುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದು, ಆಳುವ ಸರ್ಕಾರ ಏನು ಮಾಡುತ್ತಿದೆ ಎಂಬ ಪ್ರಶ್ನೆ ಸಹ ಮೂಡುತ್ತಿದೆ.

ಅಷ್ಟೇ ಅಲ್ಲ, ಈಗಾಗಲೇ ಈ ಫ್ಲೋರೈಡ್ ಯುಕ್ತ ನೀರು ತನ್ನ ಕೆಲಸ ಆರಂಭಿಸಿದ್ದು, ಜಿಲ್ಲೆಯ ಹಲವು ತಾಲೂಕಿನ ಜನ ಪದೇಪದೆ ಆವರಿಸುವ ತಲೆನೋವು, ಕೀಲು ನೋವು ಹಾಗೂ ಹಲ್ಲುಗಳ ನೋವಿನಿಂದ ಬಳಲುತ್ತಿದ್ದಾರೆ. ಸರ್ಕಾರ ಶುದ್ಧ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಒಟ್ಟಿನಲ್ಲಿ ತುಮಕೂರು ಜಿಲ್ಲೆ ಕೆಪಿಸಿಸಿ ಅಧ್ಯಕ್ಷರ ತವರು ಜಿಲ್ಲೆಯಾದರೂ ಇಲ್ಲೂ ನೂರಾರು ಅಡಿ ಕೊರೆದರೂ ನೀರು ಬೀಳದ ಪರಿಸ್ಥಿತಿ ಇದೆ. ಇದು ನೈಸರ್ಗಿಕ ಪರಿಣಾಮ ಎಂದರೂ, ಶುದ್ಧ ನೀರಿನ ಘಟಕ, ಕುಡಿಯುವ ನೀರಿನ ಪೂರೈಕೆಯಲ್ಲಿ ಪರಮೇಶ್ವರ್ ವಿಫಲರಾಗಿದ್ದಾರೆ ಎಂಬುದು ಜನರ ಪರಿಸ್ಥಿತಿ ನೋಡಿದರೆ ದಟ್ಟವಾಗುತ್ತದೆ.

ಚುನಾವಣೆಯಲ್ಲಿ ಬ್ಯುಸಿಯಾಗಿರುವ, ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಪರಮೇಶ್ವರ್ ಅವರಿಗೆ ಬಡಜನರ ಆರ್ತನಾದ ಹೇಗೆ ಕೇಳಬೇಕು? ಗ್ರಾಮವಾಸ್ತವ್ಯಕ್ಕೆ ಹೋದಾಗಲಾದರೂ ಅರ್ಥ ಮಾಡಿಕೊಳ್ಳಬಹುದಿತ್ತಲ್ಲವೇ ಪರಮೇಶ್ವರ್ ಅವರೇ?

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search