• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಪಿಸಿಸಿ ಅಧ್ಯಕ್ಷರ ಜಿಲ್ಲೆಯಲ್ಲೇ ಫ್ಲೋರೈಡ್ ಯುಕ್ತ ನೀರು, ಗಮನ ಹರಿಸೋರು ಯಾರು?

TNN Correspondent Posted On April 7, 2018
0


0
Shares
  • Share On Facebook
  • Tweet It

ತುಮಕೂರು: ಈ ಬಾರಿಯ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಭಾರಿ ಚಟುವಟಿಕೆಯಿಂದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಅದಕ್ಕೆ, ಕಳೆದ ಬಾರಿ ಕೊರಟಗೆರೆ ಕ್ಷೇತ್ರದಲ್ಲಿ ಜನ ಸೋಲಿಸಿದರು ಎಂಬ ಹಳೆಯ ಭೀತಿಯೋ ಇಲ್ಲವೇ ಈ ಬಾರಿ ಕಾಂಗ್ರೆಸ್ ಗೆದ್ದರೆ ಮುಖ್ಯಮಂತ್ರಿ ಆಗುತ್ತೇನೆ ಎಂಬ ಭ್ರಾಂತಿಯೋ, ಪರಮೇಶ್ವರ್ ಅವರನ್ನು ಚಟುವಟಿಕೆಯಿಂದಿರಿಸಿದೆ.

ಆದರೆ, ಹೋದ ಕಡೆಯಲ್ಲೆಲ್ಲ, ನಾವು ಬಡವರ ಪರ, ಅಭಿವೃದ್ಧಿ ಪರ ಎನ್ನುವ ಡಾ.ಜಿ.ಪರಮೇಶ್ವರ್ ಅವರ ಜಿಲ್ಲೆಯಲ್ಲೇ ಜನ ಫ್ಲೋರೈಡ್ ನೀರು ಕುಡಿದು ಆಸ್ಪತ್ರೆ ಪಾಲಾಗುತ್ತಿದ್ದು, ಈ ಕುರಿತು ಪರಮೇಶ್ವರ್ ಯೋಚಿಸಿಯೇ ಇಲ್ಲವೇ ಎಂಬ ಪ್ರಶ್ನೆ ಕಾಡುತ್ತಿದೆ.

ಹೌದು, ಕೇಂದ್ರ ಅಂತರ್ಜಲ ಮಂಡಳಿ ತುಮಕೂರು ಜಿಲ್ಲೆಯ ಶಿರಾ, ಗುಬ್ಬಿ, ಪಾವಗಡ, ಮಧುಗಿರಿ ಹಾಗೂ ಸ್ವತಃ ಡಾ.ಜಿ.ಪರಮೇಶ್ವರ್ ಅವರ ಕ್ಷೇತ್ರವಾದ ಕೊರಟಗೆರೆ ತಾಲೂಕಿನಲ್ಲಿ ನೀರಿನ ಪರೀಕ್ಷೆ ಮಾಡಿದ್ದು, ಸಾಮಾನ್ಯ ನೀರಿನಲ್ಲಿ ಇರುವ ಫ್ಲೋರೈಡ್ ಗಿಂತ, ಈ ತಾಲೂಕಿನ ನೀರಿನಲ್ಲಿ ಜಾಸ್ತಿಯಿದೆ ಎಂದು ತಿಳಿದುಬಂದಿದೆ.

ಅದರಲ್ಲೂ ಪಾವಗಡ ತಾಲೂಕಿನ ತಿರುಮಣಿಯಲ್ಲಿ ಈ ಫ್ಲೋರೈಡ್ ಪ್ರಮಾಣದ ಅಪಾಯದ ಅಂಚು ತಲುಪಿದ್ದು, ಜನ ಕುಡಿಯುವ ನೀರು ಸ್ಲೋ ಪಾಯ್ಸನ್ ಹಾಗೆ ಆಗುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದು, ಆಳುವ ಸರ್ಕಾರ ಏನು ಮಾಡುತ್ತಿದೆ ಎಂಬ ಪ್ರಶ್ನೆ ಸಹ ಮೂಡುತ್ತಿದೆ.

ಅಷ್ಟೇ ಅಲ್ಲ, ಈಗಾಗಲೇ ಈ ಫ್ಲೋರೈಡ್ ಯುಕ್ತ ನೀರು ತನ್ನ ಕೆಲಸ ಆರಂಭಿಸಿದ್ದು, ಜಿಲ್ಲೆಯ ಹಲವು ತಾಲೂಕಿನ ಜನ ಪದೇಪದೆ ಆವರಿಸುವ ತಲೆನೋವು, ಕೀಲು ನೋವು ಹಾಗೂ ಹಲ್ಲುಗಳ ನೋವಿನಿಂದ ಬಳಲುತ್ತಿದ್ದಾರೆ. ಸರ್ಕಾರ ಶುದ್ಧ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಒಟ್ಟಿನಲ್ಲಿ ತುಮಕೂರು ಜಿಲ್ಲೆ ಕೆಪಿಸಿಸಿ ಅಧ್ಯಕ್ಷರ ತವರು ಜಿಲ್ಲೆಯಾದರೂ ಇಲ್ಲೂ ನೂರಾರು ಅಡಿ ಕೊರೆದರೂ ನೀರು ಬೀಳದ ಪರಿಸ್ಥಿತಿ ಇದೆ. ಇದು ನೈಸರ್ಗಿಕ ಪರಿಣಾಮ ಎಂದರೂ, ಶುದ್ಧ ನೀರಿನ ಘಟಕ, ಕುಡಿಯುವ ನೀರಿನ ಪೂರೈಕೆಯಲ್ಲಿ ಪರಮೇಶ್ವರ್ ವಿಫಲರಾಗಿದ್ದಾರೆ ಎಂಬುದು ಜನರ ಪರಿಸ್ಥಿತಿ ನೋಡಿದರೆ ದಟ್ಟವಾಗುತ್ತದೆ.

ಚುನಾವಣೆಯಲ್ಲಿ ಬ್ಯುಸಿಯಾಗಿರುವ, ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಪರಮೇಶ್ವರ್ ಅವರಿಗೆ ಬಡಜನರ ಆರ್ತನಾದ ಹೇಗೆ ಕೇಳಬೇಕು? ಗ್ರಾಮವಾಸ್ತವ್ಯಕ್ಕೆ ಹೋದಾಗಲಾದರೂ ಅರ್ಥ ಮಾಡಿಕೊಳ್ಳಬಹುದಿತ್ತಲ್ಲವೇ ಪರಮೇಶ್ವರ್ ಅವರೇ?

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.

  • Privacy Policy
  • Contact
© Tulunadu Infomedia.

Press enter/return to begin your search