• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಪಿಸಿಸಿ ಅಧ್ಯಕ್ಷರ ಜಿಲ್ಲೆಯಲ್ಲೇ ಫ್ಲೋರೈಡ್ ಯುಕ್ತ ನೀರು, ಗಮನ ಹರಿಸೋರು ಯಾರು?

TNN Correspondent Posted On April 7, 2018
0


0
Shares
  • Share On Facebook
  • Tweet It

ತುಮಕೂರು: ಈ ಬಾರಿಯ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಭಾರಿ ಚಟುವಟಿಕೆಯಿಂದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಅದಕ್ಕೆ, ಕಳೆದ ಬಾರಿ ಕೊರಟಗೆರೆ ಕ್ಷೇತ್ರದಲ್ಲಿ ಜನ ಸೋಲಿಸಿದರು ಎಂಬ ಹಳೆಯ ಭೀತಿಯೋ ಇಲ್ಲವೇ ಈ ಬಾರಿ ಕಾಂಗ್ರೆಸ್ ಗೆದ್ದರೆ ಮುಖ್ಯಮಂತ್ರಿ ಆಗುತ್ತೇನೆ ಎಂಬ ಭ್ರಾಂತಿಯೋ, ಪರಮೇಶ್ವರ್ ಅವರನ್ನು ಚಟುವಟಿಕೆಯಿಂದಿರಿಸಿದೆ.

ಆದರೆ, ಹೋದ ಕಡೆಯಲ್ಲೆಲ್ಲ, ನಾವು ಬಡವರ ಪರ, ಅಭಿವೃದ್ಧಿ ಪರ ಎನ್ನುವ ಡಾ.ಜಿ.ಪರಮೇಶ್ವರ್ ಅವರ ಜಿಲ್ಲೆಯಲ್ಲೇ ಜನ ಫ್ಲೋರೈಡ್ ನೀರು ಕುಡಿದು ಆಸ್ಪತ್ರೆ ಪಾಲಾಗುತ್ತಿದ್ದು, ಈ ಕುರಿತು ಪರಮೇಶ್ವರ್ ಯೋಚಿಸಿಯೇ ಇಲ್ಲವೇ ಎಂಬ ಪ್ರಶ್ನೆ ಕಾಡುತ್ತಿದೆ.

ಹೌದು, ಕೇಂದ್ರ ಅಂತರ್ಜಲ ಮಂಡಳಿ ತುಮಕೂರು ಜಿಲ್ಲೆಯ ಶಿರಾ, ಗುಬ್ಬಿ, ಪಾವಗಡ, ಮಧುಗಿರಿ ಹಾಗೂ ಸ್ವತಃ ಡಾ.ಜಿ.ಪರಮೇಶ್ವರ್ ಅವರ ಕ್ಷೇತ್ರವಾದ ಕೊರಟಗೆರೆ ತಾಲೂಕಿನಲ್ಲಿ ನೀರಿನ ಪರೀಕ್ಷೆ ಮಾಡಿದ್ದು, ಸಾಮಾನ್ಯ ನೀರಿನಲ್ಲಿ ಇರುವ ಫ್ಲೋರೈಡ್ ಗಿಂತ, ಈ ತಾಲೂಕಿನ ನೀರಿನಲ್ಲಿ ಜಾಸ್ತಿಯಿದೆ ಎಂದು ತಿಳಿದುಬಂದಿದೆ.

ಅದರಲ್ಲೂ ಪಾವಗಡ ತಾಲೂಕಿನ ತಿರುಮಣಿಯಲ್ಲಿ ಈ ಫ್ಲೋರೈಡ್ ಪ್ರಮಾಣದ ಅಪಾಯದ ಅಂಚು ತಲುಪಿದ್ದು, ಜನ ಕುಡಿಯುವ ನೀರು ಸ್ಲೋ ಪಾಯ್ಸನ್ ಹಾಗೆ ಆಗುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದು, ಆಳುವ ಸರ್ಕಾರ ಏನು ಮಾಡುತ್ತಿದೆ ಎಂಬ ಪ್ರಶ್ನೆ ಸಹ ಮೂಡುತ್ತಿದೆ.

ಅಷ್ಟೇ ಅಲ್ಲ, ಈಗಾಗಲೇ ಈ ಫ್ಲೋರೈಡ್ ಯುಕ್ತ ನೀರು ತನ್ನ ಕೆಲಸ ಆರಂಭಿಸಿದ್ದು, ಜಿಲ್ಲೆಯ ಹಲವು ತಾಲೂಕಿನ ಜನ ಪದೇಪದೆ ಆವರಿಸುವ ತಲೆನೋವು, ಕೀಲು ನೋವು ಹಾಗೂ ಹಲ್ಲುಗಳ ನೋವಿನಿಂದ ಬಳಲುತ್ತಿದ್ದಾರೆ. ಸರ್ಕಾರ ಶುದ್ಧ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಒಟ್ಟಿನಲ್ಲಿ ತುಮಕೂರು ಜಿಲ್ಲೆ ಕೆಪಿಸಿಸಿ ಅಧ್ಯಕ್ಷರ ತವರು ಜಿಲ್ಲೆಯಾದರೂ ಇಲ್ಲೂ ನೂರಾರು ಅಡಿ ಕೊರೆದರೂ ನೀರು ಬೀಳದ ಪರಿಸ್ಥಿತಿ ಇದೆ. ಇದು ನೈಸರ್ಗಿಕ ಪರಿಣಾಮ ಎಂದರೂ, ಶುದ್ಧ ನೀರಿನ ಘಟಕ, ಕುಡಿಯುವ ನೀರಿನ ಪೂರೈಕೆಯಲ್ಲಿ ಪರಮೇಶ್ವರ್ ವಿಫಲರಾಗಿದ್ದಾರೆ ಎಂಬುದು ಜನರ ಪರಿಸ್ಥಿತಿ ನೋಡಿದರೆ ದಟ್ಟವಾಗುತ್ತದೆ.

ಚುನಾವಣೆಯಲ್ಲಿ ಬ್ಯುಸಿಯಾಗಿರುವ, ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಪರಮೇಶ್ವರ್ ಅವರಿಗೆ ಬಡಜನರ ಆರ್ತನಾದ ಹೇಗೆ ಕೇಳಬೇಕು? ಗ್ರಾಮವಾಸ್ತವ್ಯಕ್ಕೆ ಹೋದಾಗಲಾದರೂ ಅರ್ಥ ಮಾಡಿಕೊಳ್ಳಬಹುದಿತ್ತಲ್ಲವೇ ಪರಮೇಶ್ವರ್ ಅವರೇ?

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search