• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಪಿಸಿಸಿ ಅಧ್ಯಕ್ಷರ ಜಿಲ್ಲೆಯಲ್ಲೇ ಫ್ಲೋರೈಡ್ ಯುಕ್ತ ನೀರು, ಗಮನ ಹರಿಸೋರು ಯಾರು?

TNN Correspondent Posted On April 7, 2018
0


0
Shares
  • Share On Facebook
  • Tweet It

ತುಮಕೂರು: ಈ ಬಾರಿಯ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಭಾರಿ ಚಟುವಟಿಕೆಯಿಂದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಅದಕ್ಕೆ, ಕಳೆದ ಬಾರಿ ಕೊರಟಗೆರೆ ಕ್ಷೇತ್ರದಲ್ಲಿ ಜನ ಸೋಲಿಸಿದರು ಎಂಬ ಹಳೆಯ ಭೀತಿಯೋ ಇಲ್ಲವೇ ಈ ಬಾರಿ ಕಾಂಗ್ರೆಸ್ ಗೆದ್ದರೆ ಮುಖ್ಯಮಂತ್ರಿ ಆಗುತ್ತೇನೆ ಎಂಬ ಭ್ರಾಂತಿಯೋ, ಪರಮೇಶ್ವರ್ ಅವರನ್ನು ಚಟುವಟಿಕೆಯಿಂದಿರಿಸಿದೆ.

ಆದರೆ, ಹೋದ ಕಡೆಯಲ್ಲೆಲ್ಲ, ನಾವು ಬಡವರ ಪರ, ಅಭಿವೃದ್ಧಿ ಪರ ಎನ್ನುವ ಡಾ.ಜಿ.ಪರಮೇಶ್ವರ್ ಅವರ ಜಿಲ್ಲೆಯಲ್ಲೇ ಜನ ಫ್ಲೋರೈಡ್ ನೀರು ಕುಡಿದು ಆಸ್ಪತ್ರೆ ಪಾಲಾಗುತ್ತಿದ್ದು, ಈ ಕುರಿತು ಪರಮೇಶ್ವರ್ ಯೋಚಿಸಿಯೇ ಇಲ್ಲವೇ ಎಂಬ ಪ್ರಶ್ನೆ ಕಾಡುತ್ತಿದೆ.

ಹೌದು, ಕೇಂದ್ರ ಅಂತರ್ಜಲ ಮಂಡಳಿ ತುಮಕೂರು ಜಿಲ್ಲೆಯ ಶಿರಾ, ಗುಬ್ಬಿ, ಪಾವಗಡ, ಮಧುಗಿರಿ ಹಾಗೂ ಸ್ವತಃ ಡಾ.ಜಿ.ಪರಮೇಶ್ವರ್ ಅವರ ಕ್ಷೇತ್ರವಾದ ಕೊರಟಗೆರೆ ತಾಲೂಕಿನಲ್ಲಿ ನೀರಿನ ಪರೀಕ್ಷೆ ಮಾಡಿದ್ದು, ಸಾಮಾನ್ಯ ನೀರಿನಲ್ಲಿ ಇರುವ ಫ್ಲೋರೈಡ್ ಗಿಂತ, ಈ ತಾಲೂಕಿನ ನೀರಿನಲ್ಲಿ ಜಾಸ್ತಿಯಿದೆ ಎಂದು ತಿಳಿದುಬಂದಿದೆ.

ಅದರಲ್ಲೂ ಪಾವಗಡ ತಾಲೂಕಿನ ತಿರುಮಣಿಯಲ್ಲಿ ಈ ಫ್ಲೋರೈಡ್ ಪ್ರಮಾಣದ ಅಪಾಯದ ಅಂಚು ತಲುಪಿದ್ದು, ಜನ ಕುಡಿಯುವ ನೀರು ಸ್ಲೋ ಪಾಯ್ಸನ್ ಹಾಗೆ ಆಗುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದು, ಆಳುವ ಸರ್ಕಾರ ಏನು ಮಾಡುತ್ತಿದೆ ಎಂಬ ಪ್ರಶ್ನೆ ಸಹ ಮೂಡುತ್ತಿದೆ.

ಅಷ್ಟೇ ಅಲ್ಲ, ಈಗಾಗಲೇ ಈ ಫ್ಲೋರೈಡ್ ಯುಕ್ತ ನೀರು ತನ್ನ ಕೆಲಸ ಆರಂಭಿಸಿದ್ದು, ಜಿಲ್ಲೆಯ ಹಲವು ತಾಲೂಕಿನ ಜನ ಪದೇಪದೆ ಆವರಿಸುವ ತಲೆನೋವು, ಕೀಲು ನೋವು ಹಾಗೂ ಹಲ್ಲುಗಳ ನೋವಿನಿಂದ ಬಳಲುತ್ತಿದ್ದಾರೆ. ಸರ್ಕಾರ ಶುದ್ಧ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಒಟ್ಟಿನಲ್ಲಿ ತುಮಕೂರು ಜಿಲ್ಲೆ ಕೆಪಿಸಿಸಿ ಅಧ್ಯಕ್ಷರ ತವರು ಜಿಲ್ಲೆಯಾದರೂ ಇಲ್ಲೂ ನೂರಾರು ಅಡಿ ಕೊರೆದರೂ ನೀರು ಬೀಳದ ಪರಿಸ್ಥಿತಿ ಇದೆ. ಇದು ನೈಸರ್ಗಿಕ ಪರಿಣಾಮ ಎಂದರೂ, ಶುದ್ಧ ನೀರಿನ ಘಟಕ, ಕುಡಿಯುವ ನೀರಿನ ಪೂರೈಕೆಯಲ್ಲಿ ಪರಮೇಶ್ವರ್ ವಿಫಲರಾಗಿದ್ದಾರೆ ಎಂಬುದು ಜನರ ಪರಿಸ್ಥಿತಿ ನೋಡಿದರೆ ದಟ್ಟವಾಗುತ್ತದೆ.

ಚುನಾವಣೆಯಲ್ಲಿ ಬ್ಯುಸಿಯಾಗಿರುವ, ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಪರಮೇಶ್ವರ್ ಅವರಿಗೆ ಬಡಜನರ ಆರ್ತನಾದ ಹೇಗೆ ಕೇಳಬೇಕು? ಗ್ರಾಮವಾಸ್ತವ್ಯಕ್ಕೆ ಹೋದಾಗಲಾದರೂ ಅರ್ಥ ಮಾಡಿಕೊಳ್ಳಬಹುದಿತ್ತಲ್ಲವೇ ಪರಮೇಶ್ವರ್ ಅವರೇ?

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search