• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಲ್ಮಾನ್ ಖಾನ್ ವಿಷಯದಲ್ಲಿ ಮೂಗು ತೂರಿಸಿದ ಪಾಕ್ ಸಚಿವನಿಗೆ ಮಣಿಪುರ ರಾಜ್ಯಪಾಲೆ ಹೇಗೆ ಟಾಂಗ್ ಕೊಟ್ಟಿದ್ದಾರೆ ಗೊತ್ತಾ?

TNN Correspondent Posted On April 7, 2018


  • Share On Facebook
  • Tweet It

ಇಂಫಾಲ: ಇದುವರೆಗೂ ಗಡಿಯಲ್ಲಿ ಉಪಟಳ ಮಾಡುತ್ತಿದ್ದ ಪಾಕಿಸ್ತಾನ, ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಕೃಷ್ಣಮೃಗ ಹತ್ಯೆ ಪ್ರಕರಣದಲ್ಲಿ ಜೋಧ್ ಪುರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸುತ್ತಲೇ ಭಾರತದ ಆಂತರಿಕ ವಿಷಯದಲ್ಲೂ ಮೂಗು ತೂರಿಸಿ, “ಸಲ್ಮಾನ್ ಖಾನ್ ಅಲ್ಪಸಂಖ್ಯಾತ ಆಗಿರುವ ಕಾರಣಕ್ಕಾಗಿಯೇ ಆತನಿಗೆ ದೀರ್ಘ ಶಿಕ್ಷೆ ವಿಧಿಸಲಾಗಿದೆ” ಎಂದು ಪಾಕಿಸ್ತಾನಿ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ ಹೇಳಿಕೆ ನೀಡಿದ್ದರು.

ಆದರೆ ಪಾಕಿಸ್ತಾನ ವಿದೇಶಾಂಗ ಸಚಿವನ ಈ ಹೇಳಿಕೆಗೆ ಮಣಿಪುರ ರಾಜ್ಯಪಾಲೆ ನಜ್ಮಾ ಹೆಪ್ಟುಲ್ಲಾ ಸರಿಯಾಗಿಯೇ ಟಾಂಗ್ ನೀಡಿದ್ದು, “ಅಪರಾಧ ಮಾಡಲು ಅಲ್ಪಸಂಖ್ಯಾತ ಹಾಗೂ ಬಹುಸಂಖ್ಯಾತ ಎಂಬ ಭೇದವಿಲ್ಲ. ಒಬ್ಬ ನಟನಾದರೇನು, ಯಾರಾದರೇನು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದು ಛಾಟಿ ಬೀಸಿದ್ದಾರೆ.

ಭಾರತ ತನ್ನದೇ ಆದ ಸಂವಿಧಾನ ಹೊಂದಿದ್ದು, ಯಾವುದೇ ಸಮಸ್ಯೆ ಇದ್ದರೂ ಕಾನೂನು ಬಗೆಹರಿಸುವ ತಾಕತ್ತು ಹೊಂದಿದೆ. ಪಾಕಿಸ್ತಾನ ಹೀಗೆ ಮೂಗು ತೂರಿಸುವ ಅವಶ್ಯವಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತ ಇದುವರೆಗೂ ಪಾಕಿಸ್ತಾನದ ಆಂತರಿಕ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಿಲ್ಲ. ಹಾಗೆಯೇ ಪಾಕಿಸ್ತಾನ ನಮ್ಮ ಬಗ್ಗೆ ಯೋಚಿಸದೆ, ತಮ್ಮ ದೇಶದಲ್ಲಿರುವ ಸಮಸ್ಯೆಗಳತ್ತ ಗಮನಹರಿಸಿ, ಮೊದಲು ಅವುಗಳನ್ನು ಬಗೆಹರಿಸುವತ್ತ ಗಮನ ಹರಿಸಬೇಕು ಎಂದಿದ್ದಾರೆ.

ಅಷ್ಟಕ್ಕೂ ಭಾರತದ ಆಂತರಿಕ ವಿಷಯದಲ್ಲಿ ಮೂಗು ತೂರಿಸಲು ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ. ದೇಶದಲ್ಲಿರುವ ಯಾವುದೇ ಸಮಸ್ಯೆಯನ್ನು ಕಾನೂನು ಹಾಗೂ ಸಂವಿಧಾನದ ಅನ್ವಯ ಭಾರತದ ಬಗೆಹರಿಸಿಕೊಳ್ಳಲು ಶಕ್ತವಾಗಿದೆ ಎಂದು ದೇಶದ ಘನತೆಯನ್ನು ಎತ್ತಿಹಿಡಿದಿದ್ದಾರೆ ನಜ್ಮಾ.

ಸಲ್ಮಾನ್ ಖಾನ್ ಒಬ್ಬ ಅಲ್ಪಸಂಖ್ಯಾತ ಎಂಬ ಕಾರಣಕ್ಕಾಗಿಯೇ ಐದು ವರ್ಷಗಳ ದೀರ್ಘ ಶಿಕ್ಷೆಯಾಗಿದೆ. ಒಂದು ವೇಳೆ ಸಲ್ಮಾನ್ ಖಾನ್ ಆಡಳಿತ ಪಕ್ಷದ ಧರ್ಮದವರಾಗಿದ್ದರೆ ಆತನಿಗೆ ಇಂತಹ ಕಠಿಣ ಶಿಕ್ಷೆಯಾಗುತ್ತಿರಲಿಲ್ಲ ಎಂದು ಖಾಜ್ವಾ ಆಸಿಫ್ ಹೇಳಿದ್ದ.

  • Share On Facebook
  • Tweet It


- Advertisement -


Trending Now
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
Leave A Reply

  • Recent Posts

    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
  • Popular Posts

    • 1
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 2
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 3
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 4
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 5
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search