• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಲ್ಮಾನ್ ಖಾನ್ ವಿಷಯದಲ್ಲಿ ಮೂಗು ತೂರಿಸಿದ ಪಾಕ್ ಸಚಿವನಿಗೆ ಮಣಿಪುರ ರಾಜ್ಯಪಾಲೆ ಹೇಗೆ ಟಾಂಗ್ ಕೊಟ್ಟಿದ್ದಾರೆ ಗೊತ್ತಾ?

TNN Correspondent Posted On April 7, 2018


  • Share On Facebook
  • Tweet It

ಇಂಫಾಲ: ಇದುವರೆಗೂ ಗಡಿಯಲ್ಲಿ ಉಪಟಳ ಮಾಡುತ್ತಿದ್ದ ಪಾಕಿಸ್ತಾನ, ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಕೃಷ್ಣಮೃಗ ಹತ್ಯೆ ಪ್ರಕರಣದಲ್ಲಿ ಜೋಧ್ ಪುರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸುತ್ತಲೇ ಭಾರತದ ಆಂತರಿಕ ವಿಷಯದಲ್ಲೂ ಮೂಗು ತೂರಿಸಿ, “ಸಲ್ಮಾನ್ ಖಾನ್ ಅಲ್ಪಸಂಖ್ಯಾತ ಆಗಿರುವ ಕಾರಣಕ್ಕಾಗಿಯೇ ಆತನಿಗೆ ದೀರ್ಘ ಶಿಕ್ಷೆ ವಿಧಿಸಲಾಗಿದೆ” ಎಂದು ಪಾಕಿಸ್ತಾನಿ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ ಹೇಳಿಕೆ ನೀಡಿದ್ದರು.

ಆದರೆ ಪಾಕಿಸ್ತಾನ ವಿದೇಶಾಂಗ ಸಚಿವನ ಈ ಹೇಳಿಕೆಗೆ ಮಣಿಪುರ ರಾಜ್ಯಪಾಲೆ ನಜ್ಮಾ ಹೆಪ್ಟುಲ್ಲಾ ಸರಿಯಾಗಿಯೇ ಟಾಂಗ್ ನೀಡಿದ್ದು, “ಅಪರಾಧ ಮಾಡಲು ಅಲ್ಪಸಂಖ್ಯಾತ ಹಾಗೂ ಬಹುಸಂಖ್ಯಾತ ಎಂಬ ಭೇದವಿಲ್ಲ. ಒಬ್ಬ ನಟನಾದರೇನು, ಯಾರಾದರೇನು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದು ಛಾಟಿ ಬೀಸಿದ್ದಾರೆ.

ಭಾರತ ತನ್ನದೇ ಆದ ಸಂವಿಧಾನ ಹೊಂದಿದ್ದು, ಯಾವುದೇ ಸಮಸ್ಯೆ ಇದ್ದರೂ ಕಾನೂನು ಬಗೆಹರಿಸುವ ತಾಕತ್ತು ಹೊಂದಿದೆ. ಪಾಕಿಸ್ತಾನ ಹೀಗೆ ಮೂಗು ತೂರಿಸುವ ಅವಶ್ಯವಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತ ಇದುವರೆಗೂ ಪಾಕಿಸ್ತಾನದ ಆಂತರಿಕ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಿಲ್ಲ. ಹಾಗೆಯೇ ಪಾಕಿಸ್ತಾನ ನಮ್ಮ ಬಗ್ಗೆ ಯೋಚಿಸದೆ, ತಮ್ಮ ದೇಶದಲ್ಲಿರುವ ಸಮಸ್ಯೆಗಳತ್ತ ಗಮನಹರಿಸಿ, ಮೊದಲು ಅವುಗಳನ್ನು ಬಗೆಹರಿಸುವತ್ತ ಗಮನ ಹರಿಸಬೇಕು ಎಂದಿದ್ದಾರೆ.

ಅಷ್ಟಕ್ಕೂ ಭಾರತದ ಆಂತರಿಕ ವಿಷಯದಲ್ಲಿ ಮೂಗು ತೂರಿಸಲು ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ. ದೇಶದಲ್ಲಿರುವ ಯಾವುದೇ ಸಮಸ್ಯೆಯನ್ನು ಕಾನೂನು ಹಾಗೂ ಸಂವಿಧಾನದ ಅನ್ವಯ ಭಾರತದ ಬಗೆಹರಿಸಿಕೊಳ್ಳಲು ಶಕ್ತವಾಗಿದೆ ಎಂದು ದೇಶದ ಘನತೆಯನ್ನು ಎತ್ತಿಹಿಡಿದಿದ್ದಾರೆ ನಜ್ಮಾ.

ಸಲ್ಮಾನ್ ಖಾನ್ ಒಬ್ಬ ಅಲ್ಪಸಂಖ್ಯಾತ ಎಂಬ ಕಾರಣಕ್ಕಾಗಿಯೇ ಐದು ವರ್ಷಗಳ ದೀರ್ಘ ಶಿಕ್ಷೆಯಾಗಿದೆ. ಒಂದು ವೇಳೆ ಸಲ್ಮಾನ್ ಖಾನ್ ಆಡಳಿತ ಪಕ್ಷದ ಧರ್ಮದವರಾಗಿದ್ದರೆ ಆತನಿಗೆ ಇಂತಹ ಕಠಿಣ ಶಿಕ್ಷೆಯಾಗುತ್ತಿರಲಿಲ್ಲ ಎಂದು ಖಾಜ್ವಾ ಆಸಿಫ್ ಹೇಳಿದ್ದ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search