• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಲ್ಮಾನ್ ಖಾನ್ ವಿಷಯದಲ್ಲಿ ಮೂಗು ತೂರಿಸಿದ ಪಾಕ್ ಸಚಿವನಿಗೆ ಮಣಿಪುರ ರಾಜ್ಯಪಾಲೆ ಹೇಗೆ ಟಾಂಗ್ ಕೊಟ್ಟಿದ್ದಾರೆ ಗೊತ್ತಾ?

TNN Correspondent Posted On April 7, 2018
0


0
Shares
  • Share On Facebook
  • Tweet It

ಇಂಫಾಲ: ಇದುವರೆಗೂ ಗಡಿಯಲ್ಲಿ ಉಪಟಳ ಮಾಡುತ್ತಿದ್ದ ಪಾಕಿಸ್ತಾನ, ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಕೃಷ್ಣಮೃಗ ಹತ್ಯೆ ಪ್ರಕರಣದಲ್ಲಿ ಜೋಧ್ ಪುರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸುತ್ತಲೇ ಭಾರತದ ಆಂತರಿಕ ವಿಷಯದಲ್ಲೂ ಮೂಗು ತೂರಿಸಿ, “ಸಲ್ಮಾನ್ ಖಾನ್ ಅಲ್ಪಸಂಖ್ಯಾತ ಆಗಿರುವ ಕಾರಣಕ್ಕಾಗಿಯೇ ಆತನಿಗೆ ದೀರ್ಘ ಶಿಕ್ಷೆ ವಿಧಿಸಲಾಗಿದೆ” ಎಂದು ಪಾಕಿಸ್ತಾನಿ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ ಹೇಳಿಕೆ ನೀಡಿದ್ದರು.

ಆದರೆ ಪಾಕಿಸ್ತಾನ ವಿದೇಶಾಂಗ ಸಚಿವನ ಈ ಹೇಳಿಕೆಗೆ ಮಣಿಪುರ ರಾಜ್ಯಪಾಲೆ ನಜ್ಮಾ ಹೆಪ್ಟುಲ್ಲಾ ಸರಿಯಾಗಿಯೇ ಟಾಂಗ್ ನೀಡಿದ್ದು, “ಅಪರಾಧ ಮಾಡಲು ಅಲ್ಪಸಂಖ್ಯಾತ ಹಾಗೂ ಬಹುಸಂಖ್ಯಾತ ಎಂಬ ಭೇದವಿಲ್ಲ. ಒಬ್ಬ ನಟನಾದರೇನು, ಯಾರಾದರೇನು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದು ಛಾಟಿ ಬೀಸಿದ್ದಾರೆ.

ಭಾರತ ತನ್ನದೇ ಆದ ಸಂವಿಧಾನ ಹೊಂದಿದ್ದು, ಯಾವುದೇ ಸಮಸ್ಯೆ ಇದ್ದರೂ ಕಾನೂನು ಬಗೆಹರಿಸುವ ತಾಕತ್ತು ಹೊಂದಿದೆ. ಪಾಕಿಸ್ತಾನ ಹೀಗೆ ಮೂಗು ತೂರಿಸುವ ಅವಶ್ಯವಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತ ಇದುವರೆಗೂ ಪಾಕಿಸ್ತಾನದ ಆಂತರಿಕ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಿಲ್ಲ. ಹಾಗೆಯೇ ಪಾಕಿಸ್ತಾನ ನಮ್ಮ ಬಗ್ಗೆ ಯೋಚಿಸದೆ, ತಮ್ಮ ದೇಶದಲ್ಲಿರುವ ಸಮಸ್ಯೆಗಳತ್ತ ಗಮನಹರಿಸಿ, ಮೊದಲು ಅವುಗಳನ್ನು ಬಗೆಹರಿಸುವತ್ತ ಗಮನ ಹರಿಸಬೇಕು ಎಂದಿದ್ದಾರೆ.

ಅಷ್ಟಕ್ಕೂ ಭಾರತದ ಆಂತರಿಕ ವಿಷಯದಲ್ಲಿ ಮೂಗು ತೂರಿಸಲು ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ. ದೇಶದಲ್ಲಿರುವ ಯಾವುದೇ ಸಮಸ್ಯೆಯನ್ನು ಕಾನೂನು ಹಾಗೂ ಸಂವಿಧಾನದ ಅನ್ವಯ ಭಾರತದ ಬಗೆಹರಿಸಿಕೊಳ್ಳಲು ಶಕ್ತವಾಗಿದೆ ಎಂದು ದೇಶದ ಘನತೆಯನ್ನು ಎತ್ತಿಹಿಡಿದಿದ್ದಾರೆ ನಜ್ಮಾ.

ಸಲ್ಮಾನ್ ಖಾನ್ ಒಬ್ಬ ಅಲ್ಪಸಂಖ್ಯಾತ ಎಂಬ ಕಾರಣಕ್ಕಾಗಿಯೇ ಐದು ವರ್ಷಗಳ ದೀರ್ಘ ಶಿಕ್ಷೆಯಾಗಿದೆ. ಒಂದು ವೇಳೆ ಸಲ್ಮಾನ್ ಖಾನ್ ಆಡಳಿತ ಪಕ್ಷದ ಧರ್ಮದವರಾಗಿದ್ದರೆ ಆತನಿಗೆ ಇಂತಹ ಕಠಿಣ ಶಿಕ್ಷೆಯಾಗುತ್ತಿರಲಿಲ್ಲ ಎಂದು ಖಾಜ್ವಾ ಆಸಿಫ್ ಹೇಳಿದ್ದ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search