• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಲ್ಮಾನ್ ಖಾನ್ ವಿಷಯದಲ್ಲಿ ಮೂಗು ತೂರಿಸಿದ ಪಾಕ್ ಸಚಿವನಿಗೆ ಮಣಿಪುರ ರಾಜ್ಯಪಾಲೆ ಹೇಗೆ ಟಾಂಗ್ ಕೊಟ್ಟಿದ್ದಾರೆ ಗೊತ್ತಾ?

TNN Correspondent Posted On April 7, 2018
0


0
Shares
  • Share On Facebook
  • Tweet It

ಇಂಫಾಲ: ಇದುವರೆಗೂ ಗಡಿಯಲ್ಲಿ ಉಪಟಳ ಮಾಡುತ್ತಿದ್ದ ಪಾಕಿಸ್ತಾನ, ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಕೃಷ್ಣಮೃಗ ಹತ್ಯೆ ಪ್ರಕರಣದಲ್ಲಿ ಜೋಧ್ ಪುರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸುತ್ತಲೇ ಭಾರತದ ಆಂತರಿಕ ವಿಷಯದಲ್ಲೂ ಮೂಗು ತೂರಿಸಿ, “ಸಲ್ಮಾನ್ ಖಾನ್ ಅಲ್ಪಸಂಖ್ಯಾತ ಆಗಿರುವ ಕಾರಣಕ್ಕಾಗಿಯೇ ಆತನಿಗೆ ದೀರ್ಘ ಶಿಕ್ಷೆ ವಿಧಿಸಲಾಗಿದೆ” ಎಂದು ಪಾಕಿಸ್ತಾನಿ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ ಹೇಳಿಕೆ ನೀಡಿದ್ದರು.

ಆದರೆ ಪಾಕಿಸ್ತಾನ ವಿದೇಶಾಂಗ ಸಚಿವನ ಈ ಹೇಳಿಕೆಗೆ ಮಣಿಪುರ ರಾಜ್ಯಪಾಲೆ ನಜ್ಮಾ ಹೆಪ್ಟುಲ್ಲಾ ಸರಿಯಾಗಿಯೇ ಟಾಂಗ್ ನೀಡಿದ್ದು, “ಅಪರಾಧ ಮಾಡಲು ಅಲ್ಪಸಂಖ್ಯಾತ ಹಾಗೂ ಬಹುಸಂಖ್ಯಾತ ಎಂಬ ಭೇದವಿಲ್ಲ. ಒಬ್ಬ ನಟನಾದರೇನು, ಯಾರಾದರೇನು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದು ಛಾಟಿ ಬೀಸಿದ್ದಾರೆ.

ಭಾರತ ತನ್ನದೇ ಆದ ಸಂವಿಧಾನ ಹೊಂದಿದ್ದು, ಯಾವುದೇ ಸಮಸ್ಯೆ ಇದ್ದರೂ ಕಾನೂನು ಬಗೆಹರಿಸುವ ತಾಕತ್ತು ಹೊಂದಿದೆ. ಪಾಕಿಸ್ತಾನ ಹೀಗೆ ಮೂಗು ತೂರಿಸುವ ಅವಶ್ಯವಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತ ಇದುವರೆಗೂ ಪಾಕಿಸ್ತಾನದ ಆಂತರಿಕ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಿಲ್ಲ. ಹಾಗೆಯೇ ಪಾಕಿಸ್ತಾನ ನಮ್ಮ ಬಗ್ಗೆ ಯೋಚಿಸದೆ, ತಮ್ಮ ದೇಶದಲ್ಲಿರುವ ಸಮಸ್ಯೆಗಳತ್ತ ಗಮನಹರಿಸಿ, ಮೊದಲು ಅವುಗಳನ್ನು ಬಗೆಹರಿಸುವತ್ತ ಗಮನ ಹರಿಸಬೇಕು ಎಂದಿದ್ದಾರೆ.

ಅಷ್ಟಕ್ಕೂ ಭಾರತದ ಆಂತರಿಕ ವಿಷಯದಲ್ಲಿ ಮೂಗು ತೂರಿಸಲು ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ. ದೇಶದಲ್ಲಿರುವ ಯಾವುದೇ ಸಮಸ್ಯೆಯನ್ನು ಕಾನೂನು ಹಾಗೂ ಸಂವಿಧಾನದ ಅನ್ವಯ ಭಾರತದ ಬಗೆಹರಿಸಿಕೊಳ್ಳಲು ಶಕ್ತವಾಗಿದೆ ಎಂದು ದೇಶದ ಘನತೆಯನ್ನು ಎತ್ತಿಹಿಡಿದಿದ್ದಾರೆ ನಜ್ಮಾ.

ಸಲ್ಮಾನ್ ಖಾನ್ ಒಬ್ಬ ಅಲ್ಪಸಂಖ್ಯಾತ ಎಂಬ ಕಾರಣಕ್ಕಾಗಿಯೇ ಐದು ವರ್ಷಗಳ ದೀರ್ಘ ಶಿಕ್ಷೆಯಾಗಿದೆ. ಒಂದು ವೇಳೆ ಸಲ್ಮಾನ್ ಖಾನ್ ಆಡಳಿತ ಪಕ್ಷದ ಧರ್ಮದವರಾಗಿದ್ದರೆ ಆತನಿಗೆ ಇಂತಹ ಕಠಿಣ ಶಿಕ್ಷೆಯಾಗುತ್ತಿರಲಿಲ್ಲ ಎಂದು ಖಾಜ್ವಾ ಆಸಿಫ್ ಹೇಳಿದ್ದ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search