• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೋಟ್ ಬ್ಯಾನ್, ಜಿಎಸ್ಟಿಯಿಂದ ದೇಶದ ವಿತ್ತೀಯ ಸ್ಥಿತಿ ಕುಸಿಯಿತು ಎಂದ ನಕಲಿ ಅರ್ಥಶಾಸ್ತ್ರಜ್ಞರು ಎಲ್ಲಿದ್ದಾರೆ ಈಗ?

TNN Correspondent Posted On April 7, 2018


  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರು ಕಾಳಧನಿಕರ ಬಗ್ಗಬಡಿಯಲು ಐನೂರು, ಸಾವಿರ ರೂಪಾಯಿ ನೋಟು ನಿಷೇಧ ಮಾಡಿದ ಬಳಿಕ, ದಲ್ಲಾಳಿಗಳಿಂದ ನಲುಗುತ್ತಿದ್ದ ಭಾರತದ ಆರ್ಥಿಕ ಸುಧಾರಣೆಗಾಗಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಯೋಜನೆ ಜಾರಿ ಮಾಡಿದ ಬಳಿಕ, ಅವರ ವಿರೋಧಿಗಳೆಲ್ಲ ಧುತ್ತನೆ ಎದ್ದು ಕುಳಿತರು.

ಹೀಗೆ ಎದ್ದು ಕುಳಿತವರೇ ಆರ್ಥಿಕ ತಜ್ಞರಂತೆ ಮಾತನಾಡತೊಡಗಿದರು. ನೋಟು ನಿಷೇಧ, ಜಿಎಸ್ಟಿ ಜಾರಿಯಿಂದ ದೇಶದ ವಿತ್ತೀಯ ಸ್ಥಿತಿ ಪಾತಾಳಕ್ಕಿಳಿಯುತ್ತದೆ. ಪ್ರಸ್ತುತ ಜಿಡಿಪಿ ದರ ಕುಸಿಯುವುದನ್ನು ನೋಡಿದರೆ ದೇಶದ ಆರ್ಥ ವ್ಯವಸ್ಥೆ ಅಧೋಗತಿಗೆ ಇಳಿದುಬಿಡುತ್ತದೆ ಎಂದು ಘೀಳಿಟ್ಟರು.

ಆದರೂ ಪ್ರಧಾನಿ ಮೋದಿ ಅವರು ಜಾರಿಗೆ ತಂದ ಯೋಜನೆಗಳಿಗೇ ಜಯವಾಯಿತು. ಪ್ರಸ್ತುತ ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನ ದರ (ಜಿಡಿಪಿ) ಏಳರ ಗಡಿ ದಾಟಿ ಮುನ್ನುಗುತ್ತಿದೆ. ಭಾರತದ ಆರ್ಥಿಕ ಸ್ಥಿತಿ ಉತ್ತಮ ಗತಿಯಲ್ಲಿ ಸಾಗುತ್ತಿದೆ ಎಂದು ಅಂತಾರಾಷ್ಟ್ರೀಯ ಸಂಸ್ಥೆಗಳೇ ತಿಳಿಸಿವೆ.

ಹಾಗಾದರೆ ನೋಟು ನಿಷೇಧ ಹಾಗೂ ಜಿಎಸ್ಟಿ ಜಾರಿಯಾದ ಬಳಿಕ ದೇಶದ ಅರ್ಥವ್ಯವಸ್ಥೆಯಲ್ಲಿ ನಿಖರವಾಗಿ ಆದ ಸಕಾರಾತ್ಮಕ ಬೆಳವಣಿಗೆಗಳು ಯಾವವು ಎಂಬುದರ ಕುರಿತು ಇಲ್ಲಿ ಪಟ್ಟಿಮಾಡಲಾಗಿದೆ. ಯೋಜನೆ ಜಾರಿಯಾದ ಬಳಿಕ ಬೊಬ್ಬೆಹಾಕಿದ ನಕಲಿ ಅರ್ಥಶಾಸ್ತ್ರಜ್ಞರು ಈ ಪಟ್ಟಿ ಓದಲಿ ಮೊದಲು.

  1. ಪ್ರತ್ಯಕ್ಷ ತೆರಿಗೆ ಸಂಗ್ರಹಣೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಮೊದಲು ಪ್ರತ್ಯಕ್ಷ ತೆರಿಗೆ ಸಂಗ್ರಹಣೆ ಪ್ರಮಾಣ 9.8 ಲಕ್ಷ ಕೋಟಿ ರೂಪಾಯಿ ಇತ್ತು. ಆದರೆ ನೋಟ್ ಬ್ಯಾನ್ ಹಾಗೂ ಜಿಎಸ್ಟಿ ಪರಿಣಾಮ 2017-18ನೇ ಸಾಲಿನ ವಿತ್ತೀಯ ವರ್ಷದಲ್ಲಿ ಇದರ ಪ್ರಮಾಣ 9.95 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ. ಇದು ದೇಶದ ಆರ್ಥಿಕ ವ್ಯವಸ್ಥೆ ಮೇಲಾದ ಪ್ರಮುಖ ನಕಾರಾತ್ಮಕ ಪರಿಣಾಮ.
  2. ಯಾವುದೇ ಒಂದು ದೇಶ ಅಭಿವೃದ್ಧಿಯಾಗಬೇಕಾದರೆ, ಅಲ್ಲಿನ ಜನ ಹೇಗೆ ಪ್ರಾಮಾಣಿಕವಾಗಿ ತೆರಿಗೆ ಪಾವತಿಸುತ್ತಾರೆ ಎಂಬುದು ಪರಿಗಣನೆಯಾಗುತ್ತದೆ ಎಂಬುದು ತೆರಿಗೆ ತಜ್ಞರ ಅಂಬೋಣ. ಜಿಎಸ್ಟಿ ಹಾಗೂ ನೋಟು ನಿಷೇಧ ಯೋಜನೆಗಳು ಇದೇ ಹಾದಿಯಲ್ಲಿ ಸಾಗುವ ಮೂಲಕ ಐಟಿ ರಿಟರ್ನ್ಸ್ ಸಲ್ಲಿಸುವವರ ಸಂಖ್ಯೆಯನ್ನು 6.84 ಕೋಟಿಗೆ ಏರಿಸಿತು. ಹೀಗೆ ಐಟಿ ರಿಟರ್ನ್ಸ್ ಸಲ್ಲಿಸುವವರ ಸಂಖ್ಯೆ ಮೊದಲು 5.43 ಕೋಟಿ ಇತ್ತು. ಹೇಳಿ ಇದು, ದೇಶದ ವಿತ್ತೀಯ ವ್ಯವಸ್ಥೆಯ ಬೆಳವಣಿಗೆಯಲ್ಲವೇ?
  3. ದೇಶದಲ್ಲಿ ತೆರಿಗೆಚೋರರ ಬಹುದೊಡ್ಡ ತಂಡವೇ ಇತ್ತು. ಇದು ದೇಶದ ಬೊಕ್ಕಸಕ್ಕೆ ಹಾನಿ ಮಾಡುವಂತಿತ್ತು. ಆದರೆ ಜಿಎಸ್ಟಿ ಮತ್ತು ನೋಟು ನಿಷೇಧ ಜಾರಿ ಬಳಿಕ ಹತ್ತಿರ ಹತ್ತಿರ ಒಂದು ಕೋಟಿ, ಅಂದರೆ 99.49 ಲಕ್ಷ ನೂತನ ತೆರಿಗೆದಾರರು ನೋಂದಣಿಯಾದರು. ಅದಕ್ಕೂ ಮೊದಲು ಇದ್ದ ತೆರಿಗೆ ದಾರರ ಸಂಖ್ಯೆ 85 ಲಕ್ಷದಷ್ಟಿತ್ತು. ಅಲ್ಲಿಗೆಮೊದಲು ಇದ್ದ ತೆರಿಗೆದಾರರ ಸಂಖ್ಯೆಗಿಂತ ಇದು ದುಪ್ಪಟ್ಟಾಯಿತಲ್ಲ? ಇದು ದೇಶದ ವಿತ್ತೀಯ ಪರಿಸ್ಥಿತಿ ಮೇಲಾದ ಸಕಾರಾತ್ಮಕ ಪರಿಣಾಮ.
  4. ಅಷ್ಟೇ ಅಲ್ಲ, ಇ-ವೇ ಬಿಲ್ ಪಾವತಿದಾರರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾದದ್ದು, ಜಿಡಿಪಿ 7ರ ಗಡಿ ದಾಟಿ ಚೀನಾವನ್ನೇ ಸೆಡ್ಡು ಹೊಡೆದಿದ್ದು, ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದು ಇದೇ ನೋಟು ನಿಷೇಧ ಹಾಗೂ ಜಿಎಸ್ಟಿ ಯೋಜನೆಗಳು. ಈಗ ಹೇಳಿ ಪ್ರಧಾನಿ ಮೋದಿ ಅವರು ಜಾರಿಗೊಳಿಸಿದ ಈ ಯೋಜನೆಗಳು ದೇಶದ ಆರ್ಥಿಕ ಪರಿಸ್ಥಿತಿಗೆ ಹೊಡೆತ ನೀಡಿವೆಯೇ? ಈಗ ಏಕೆ ನಕಲಿ ಆರ್ಥಿಕ ತಜ್ಞರು ಬಾಯಿಬಿಡುತ್ತಿಲ್ಲ?
  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search