• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೋಟ್ ಬ್ಯಾನ್, ಜಿಎಸ್ಟಿಯಿಂದ ದೇಶದ ವಿತ್ತೀಯ ಸ್ಥಿತಿ ಕುಸಿಯಿತು ಎಂದ ನಕಲಿ ಅರ್ಥಶಾಸ್ತ್ರಜ್ಞರು ಎಲ್ಲಿದ್ದಾರೆ ಈಗ?

TNN Correspondent Posted On April 7, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರು ಕಾಳಧನಿಕರ ಬಗ್ಗಬಡಿಯಲು ಐನೂರು, ಸಾವಿರ ರೂಪಾಯಿ ನೋಟು ನಿಷೇಧ ಮಾಡಿದ ಬಳಿಕ, ದಲ್ಲಾಳಿಗಳಿಂದ ನಲುಗುತ್ತಿದ್ದ ಭಾರತದ ಆರ್ಥಿಕ ಸುಧಾರಣೆಗಾಗಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಯೋಜನೆ ಜಾರಿ ಮಾಡಿದ ಬಳಿಕ, ಅವರ ವಿರೋಧಿಗಳೆಲ್ಲ ಧುತ್ತನೆ ಎದ್ದು ಕುಳಿತರು.

ಹೀಗೆ ಎದ್ದು ಕುಳಿತವರೇ ಆರ್ಥಿಕ ತಜ್ಞರಂತೆ ಮಾತನಾಡತೊಡಗಿದರು. ನೋಟು ನಿಷೇಧ, ಜಿಎಸ್ಟಿ ಜಾರಿಯಿಂದ ದೇಶದ ವಿತ್ತೀಯ ಸ್ಥಿತಿ ಪಾತಾಳಕ್ಕಿಳಿಯುತ್ತದೆ. ಪ್ರಸ್ತುತ ಜಿಡಿಪಿ ದರ ಕುಸಿಯುವುದನ್ನು ನೋಡಿದರೆ ದೇಶದ ಆರ್ಥ ವ್ಯವಸ್ಥೆ ಅಧೋಗತಿಗೆ ಇಳಿದುಬಿಡುತ್ತದೆ ಎಂದು ಘೀಳಿಟ್ಟರು.

ಆದರೂ ಪ್ರಧಾನಿ ಮೋದಿ ಅವರು ಜಾರಿಗೆ ತಂದ ಯೋಜನೆಗಳಿಗೇ ಜಯವಾಯಿತು. ಪ್ರಸ್ತುತ ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನ ದರ (ಜಿಡಿಪಿ) ಏಳರ ಗಡಿ ದಾಟಿ ಮುನ್ನುಗುತ್ತಿದೆ. ಭಾರತದ ಆರ್ಥಿಕ ಸ್ಥಿತಿ ಉತ್ತಮ ಗತಿಯಲ್ಲಿ ಸಾಗುತ್ತಿದೆ ಎಂದು ಅಂತಾರಾಷ್ಟ್ರೀಯ ಸಂಸ್ಥೆಗಳೇ ತಿಳಿಸಿವೆ.

ಹಾಗಾದರೆ ನೋಟು ನಿಷೇಧ ಹಾಗೂ ಜಿಎಸ್ಟಿ ಜಾರಿಯಾದ ಬಳಿಕ ದೇಶದ ಅರ್ಥವ್ಯವಸ್ಥೆಯಲ್ಲಿ ನಿಖರವಾಗಿ ಆದ ಸಕಾರಾತ್ಮಕ ಬೆಳವಣಿಗೆಗಳು ಯಾವವು ಎಂಬುದರ ಕುರಿತು ಇಲ್ಲಿ ಪಟ್ಟಿಮಾಡಲಾಗಿದೆ. ಯೋಜನೆ ಜಾರಿಯಾದ ಬಳಿಕ ಬೊಬ್ಬೆಹಾಕಿದ ನಕಲಿ ಅರ್ಥಶಾಸ್ತ್ರಜ್ಞರು ಈ ಪಟ್ಟಿ ಓದಲಿ ಮೊದಲು.

  1. ಪ್ರತ್ಯಕ್ಷ ತೆರಿಗೆ ಸಂಗ್ರಹಣೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಮೊದಲು ಪ್ರತ್ಯಕ್ಷ ತೆರಿಗೆ ಸಂಗ್ರಹಣೆ ಪ್ರಮಾಣ 9.8 ಲಕ್ಷ ಕೋಟಿ ರೂಪಾಯಿ ಇತ್ತು. ಆದರೆ ನೋಟ್ ಬ್ಯಾನ್ ಹಾಗೂ ಜಿಎಸ್ಟಿ ಪರಿಣಾಮ 2017-18ನೇ ಸಾಲಿನ ವಿತ್ತೀಯ ವರ್ಷದಲ್ಲಿ ಇದರ ಪ್ರಮಾಣ 9.95 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ. ಇದು ದೇಶದ ಆರ್ಥಿಕ ವ್ಯವಸ್ಥೆ ಮೇಲಾದ ಪ್ರಮುಖ ನಕಾರಾತ್ಮಕ ಪರಿಣಾಮ.
  2. ಯಾವುದೇ ಒಂದು ದೇಶ ಅಭಿವೃದ್ಧಿಯಾಗಬೇಕಾದರೆ, ಅಲ್ಲಿನ ಜನ ಹೇಗೆ ಪ್ರಾಮಾಣಿಕವಾಗಿ ತೆರಿಗೆ ಪಾವತಿಸುತ್ತಾರೆ ಎಂಬುದು ಪರಿಗಣನೆಯಾಗುತ್ತದೆ ಎಂಬುದು ತೆರಿಗೆ ತಜ್ಞರ ಅಂಬೋಣ. ಜಿಎಸ್ಟಿ ಹಾಗೂ ನೋಟು ನಿಷೇಧ ಯೋಜನೆಗಳು ಇದೇ ಹಾದಿಯಲ್ಲಿ ಸಾಗುವ ಮೂಲಕ ಐಟಿ ರಿಟರ್ನ್ಸ್ ಸಲ್ಲಿಸುವವರ ಸಂಖ್ಯೆಯನ್ನು 6.84 ಕೋಟಿಗೆ ಏರಿಸಿತು. ಹೀಗೆ ಐಟಿ ರಿಟರ್ನ್ಸ್ ಸಲ್ಲಿಸುವವರ ಸಂಖ್ಯೆ ಮೊದಲು 5.43 ಕೋಟಿ ಇತ್ತು. ಹೇಳಿ ಇದು, ದೇಶದ ವಿತ್ತೀಯ ವ್ಯವಸ್ಥೆಯ ಬೆಳವಣಿಗೆಯಲ್ಲವೇ?
  3. ದೇಶದಲ್ಲಿ ತೆರಿಗೆಚೋರರ ಬಹುದೊಡ್ಡ ತಂಡವೇ ಇತ್ತು. ಇದು ದೇಶದ ಬೊಕ್ಕಸಕ್ಕೆ ಹಾನಿ ಮಾಡುವಂತಿತ್ತು. ಆದರೆ ಜಿಎಸ್ಟಿ ಮತ್ತು ನೋಟು ನಿಷೇಧ ಜಾರಿ ಬಳಿಕ ಹತ್ತಿರ ಹತ್ತಿರ ಒಂದು ಕೋಟಿ, ಅಂದರೆ 99.49 ಲಕ್ಷ ನೂತನ ತೆರಿಗೆದಾರರು ನೋಂದಣಿಯಾದರು. ಅದಕ್ಕೂ ಮೊದಲು ಇದ್ದ ತೆರಿಗೆ ದಾರರ ಸಂಖ್ಯೆ 85 ಲಕ್ಷದಷ್ಟಿತ್ತು. ಅಲ್ಲಿಗೆಮೊದಲು ಇದ್ದ ತೆರಿಗೆದಾರರ ಸಂಖ್ಯೆಗಿಂತ ಇದು ದುಪ್ಪಟ್ಟಾಯಿತಲ್ಲ? ಇದು ದೇಶದ ವಿತ್ತೀಯ ಪರಿಸ್ಥಿತಿ ಮೇಲಾದ ಸಕಾರಾತ್ಮಕ ಪರಿಣಾಮ.
  4. ಅಷ್ಟೇ ಅಲ್ಲ, ಇ-ವೇ ಬಿಲ್ ಪಾವತಿದಾರರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾದದ್ದು, ಜಿಡಿಪಿ 7ರ ಗಡಿ ದಾಟಿ ಚೀನಾವನ್ನೇ ಸೆಡ್ಡು ಹೊಡೆದಿದ್ದು, ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದು ಇದೇ ನೋಟು ನಿಷೇಧ ಹಾಗೂ ಜಿಎಸ್ಟಿ ಯೋಜನೆಗಳು. ಈಗ ಹೇಳಿ ಪ್ರಧಾನಿ ಮೋದಿ ಅವರು ಜಾರಿಗೊಳಿಸಿದ ಈ ಯೋಜನೆಗಳು ದೇಶದ ಆರ್ಥಿಕ ಪರಿಸ್ಥಿತಿಗೆ ಹೊಡೆತ ನೀಡಿವೆಯೇ? ಈಗ ಏಕೆ ನಕಲಿ ಆರ್ಥಿಕ ತಜ್ಞರು ಬಾಯಿಬಿಡುತ್ತಿಲ್ಲ?
0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search