• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬರಲಿದೆ ಭಾರತೀಯ ಸೇನೆಗೆ 110 ಯುದ್ಧ ವಿಮಾನಗಳ ಬಲ, ಕಂಗಾಲಾಗಲಿವೆ ಶತ್ರುರಾಷ್ಟ್ರಗಳು!

TNN Correspondent Posted On April 7, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತೀಯ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ಜತೆಗೆ ಅವರಿಗೆ ಶಸ್ತ್ರಾಸ್ತ್ರ ಪೂರೈಕೆಗಾಗಿ ಹಣಕಾಸು ಸ್ವಾತಂತ್ರ್ಯವನ್ನೂ ನೀಡುವ ಮೂಲಕ ವೈರಿಗಳಿಂದ ದೇಶವನ್ನು ರಕ್ಷಿಸಲು ಮುಂದಾದರು.

ಈಗ ಅದರ ಮುಂದುವರಿದ ಭಾಗವಾಗಿ ಕೇಂದ್ರ ಸರ್ಕಾರ ಭಾರತೀಯ ವಾಯುದಳವನ್ನು ಮುಂದಾಗಿದ್ದು, 15 ಶತಕೋಟಿ ಅಮೆರಿಕನ್ ಡಾಲರ್ ಹಣ ವ್ಯಯಿಸಿ ಬರೋಬ್ಬರಿ 110 ಯುದ್ಧ ವಿಮಾನಗಳ ಖರೀದಿ ಹಾಗೂ ತಯಾರಿಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವದ ಯೋಜನೆ ಮೇಕ್ ಇನ್ ಇಂಡಿಯಾಗೆ ಪ್ರಾತಿನಿಧ್ಯ ನೀಡುವ ದೃಷ್ಟಿಯಿಂದ 110 ಯುದ್ಧ ವಿಮಾನಗಳಲ್ಲಿ ಶೇ.85ರಷ್ಟು ಯುದ್ಧ ವಿಮಾನಗಳನ್ನು ಭಾರತದಲ್ಲೇ ತಯಾರಿಸಲಾಗುವುದು ಎಂದು ರಕ್ಷಣಾ ಸಚಿವಾಲಯ ತನ್ನ ವೆಬ್ ಸೈಟಿನಲ್ಲಿ ಪ್ರಕಟಿಸಿದೆ.

ಅಮೆರಿಕದ ಬೋಯಿಂಗ್ ಹಾಗೂ ಲಾಖೀಡ್ ಮಾರ್ಟಿನ್, ಸ್ವೀಡನ್‌ನ ಸಾಬ್ ಮತ್ತು ಫ್ರಾನ್ಸ್ ನ ದಸಾಲ್ಟ್ ವಿಮಾನ ತಯಾರಿಕಾ ಕಂಪನಿಗಳಿಗೆ ಟೆಂಡರ್ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಟೆಂಡರ್ ಕುರಿತು ಮಾಹಿತಿಗಾಗಿ ಮನವಿ ಸಲ್ಲಿಸಲು ಕಂಪನಿಗಳಿಗೆ ಜುಲೈ ವರೆಗೆ ಕಾಲಾವಕಾಶ ನೀಡಲಾಗಿದ್ದುಘಿ, ಟೆಂಡರ್ ಕರೆಯಲಾಗುತ್ತದೆ. ಎಲ್ಲ ಪ್ರಕ್ರಿಯೆ ಮುಗಿಯಲು ಮೂರ್ನಾಲ್ಕು ವರ್ಷವಾಗಬಹುದು ಎಂದು ಅಂದಾಜಿಸಲಾಗಿದೆ.

ಒಟ್ಟಿನಲ್ಲಿ ಡೋಕ್ಲಾಂ, ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ಹಾಗೂ ಜಮ್ಮು ಕಾಶ್ಮೀರ ಗಡಿಯಲ್ಲಿ ಉದ್ಧಟತನಮಾಡುವ ಪಾಕಿಸ್ತಾಕ್ಕೆ ಭಾರತದ ಈ ದಿಟ್ಟ ನಿರ್ಧಾರದಿಂದ ನಡುಕ ಉಂಟಾಗಿದೆ. ಈ 110ಯುದ್ಧ ವಿಮಾನಗಳು ಭಾರತೀಯ ವಾಯುದಳ ಸೇರಿದರೆ, ಭಾರತಕ್ಕೆ ದೈತ್ಯ ಶಕ್ತಿಯೊಂದು ಸೇರ್ಪಡೆಯಾಗಲಿದೆ ಎಂದೇ ವಿಶ್ಲೇಷಿಸಲಾಗಿದೆ.

0
Shares
  • Share On Facebook
  • Tweet It




Trending Now
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
Tulunadu News October 28, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
  • Popular Posts

    • 1
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 2
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 3
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 4
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search