• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬರಲಿದೆ ಭಾರತೀಯ ಸೇನೆಗೆ 110 ಯುದ್ಧ ವಿಮಾನಗಳ ಬಲ, ಕಂಗಾಲಾಗಲಿವೆ ಶತ್ರುರಾಷ್ಟ್ರಗಳು!

TNN Correspondent Posted On April 7, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತೀಯ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ಜತೆಗೆ ಅವರಿಗೆ ಶಸ್ತ್ರಾಸ್ತ್ರ ಪೂರೈಕೆಗಾಗಿ ಹಣಕಾಸು ಸ್ವಾತಂತ್ರ್ಯವನ್ನೂ ನೀಡುವ ಮೂಲಕ ವೈರಿಗಳಿಂದ ದೇಶವನ್ನು ರಕ್ಷಿಸಲು ಮುಂದಾದರು.

ಈಗ ಅದರ ಮುಂದುವರಿದ ಭಾಗವಾಗಿ ಕೇಂದ್ರ ಸರ್ಕಾರ ಭಾರತೀಯ ವಾಯುದಳವನ್ನು ಮುಂದಾಗಿದ್ದು, 15 ಶತಕೋಟಿ ಅಮೆರಿಕನ್ ಡಾಲರ್ ಹಣ ವ್ಯಯಿಸಿ ಬರೋಬ್ಬರಿ 110 ಯುದ್ಧ ವಿಮಾನಗಳ ಖರೀದಿ ಹಾಗೂ ತಯಾರಿಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವದ ಯೋಜನೆ ಮೇಕ್ ಇನ್ ಇಂಡಿಯಾಗೆ ಪ್ರಾತಿನಿಧ್ಯ ನೀಡುವ ದೃಷ್ಟಿಯಿಂದ 110 ಯುದ್ಧ ವಿಮಾನಗಳಲ್ಲಿ ಶೇ.85ರಷ್ಟು ಯುದ್ಧ ವಿಮಾನಗಳನ್ನು ಭಾರತದಲ್ಲೇ ತಯಾರಿಸಲಾಗುವುದು ಎಂದು ರಕ್ಷಣಾ ಸಚಿವಾಲಯ ತನ್ನ ವೆಬ್ ಸೈಟಿನಲ್ಲಿ ಪ್ರಕಟಿಸಿದೆ.

ಅಮೆರಿಕದ ಬೋಯಿಂಗ್ ಹಾಗೂ ಲಾಖೀಡ್ ಮಾರ್ಟಿನ್, ಸ್ವೀಡನ್‌ನ ಸಾಬ್ ಮತ್ತು ಫ್ರಾನ್ಸ್ ನ ದಸಾಲ್ಟ್ ವಿಮಾನ ತಯಾರಿಕಾ ಕಂಪನಿಗಳಿಗೆ ಟೆಂಡರ್ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಟೆಂಡರ್ ಕುರಿತು ಮಾಹಿತಿಗಾಗಿ ಮನವಿ ಸಲ್ಲಿಸಲು ಕಂಪನಿಗಳಿಗೆ ಜುಲೈ ವರೆಗೆ ಕಾಲಾವಕಾಶ ನೀಡಲಾಗಿದ್ದುಘಿ, ಟೆಂಡರ್ ಕರೆಯಲಾಗುತ್ತದೆ. ಎಲ್ಲ ಪ್ರಕ್ರಿಯೆ ಮುಗಿಯಲು ಮೂರ್ನಾಲ್ಕು ವರ್ಷವಾಗಬಹುದು ಎಂದು ಅಂದಾಜಿಸಲಾಗಿದೆ.

ಒಟ್ಟಿನಲ್ಲಿ ಡೋಕ್ಲಾಂ, ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ಹಾಗೂ ಜಮ್ಮು ಕಾಶ್ಮೀರ ಗಡಿಯಲ್ಲಿ ಉದ್ಧಟತನಮಾಡುವ ಪಾಕಿಸ್ತಾಕ್ಕೆ ಭಾರತದ ಈ ದಿಟ್ಟ ನಿರ್ಧಾರದಿಂದ ನಡುಕ ಉಂಟಾಗಿದೆ. ಈ 110ಯುದ್ಧ ವಿಮಾನಗಳು ಭಾರತೀಯ ವಾಯುದಳ ಸೇರಿದರೆ, ಭಾರತಕ್ಕೆ ದೈತ್ಯ ಶಕ್ತಿಯೊಂದು ಸೇರ್ಪಡೆಯಾಗಲಿದೆ ಎಂದೇ ವಿಶ್ಲೇಷಿಸಲಾಗಿದೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search