• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರತಿಪಕ್ಷಗಳಿಂದ ಕಲಾಪ ವ್ಯರ್ಥ, 23 ದಿನದ ವೇತನ ಭತ್ಯೆ ಮರಳಿಸಿದ ಪ್ರಧಾನಿ ಮೋದಿ

TNN Correspondent Posted On April 8, 2018


  • Share On Facebook
  • Tweet It

ದೆಹಲಿ: ಸಂಸತ್ ನಲ್ಲಿ ನಿರಂತರವಾಗಿ ಗದ್ದಲವೆಬ್ಬಿಸಿ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಎರಡನೆಯ ಇಡೀ ಅವಧಿ ವ್ಯರ್ಥವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಅವರು ತಮ್ಮ 23 ದಿನಗಳ ವೇತನ ಮತ್ತು ಭತ್ಯೆಯನ್ನು ಸರ್ಕಾರಕ್ಕೆ ಮರಳಿಸಿದ್ದಾರೆ. ಸಂಸತ್ ಅಧಿವೇಶನ ವ್ಯರ್ಥವಾದ ಹಿನ್ನೆಲೆಯಲ್ಲಿ ಎನ್ ಡಿಎ ಸಂಸದರು ವೇತನ ತ್ಯಜಿಸುವ ನಿರ್ಧಾರ ಕೈಗೊಂಡಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 28 ದಿನಗಳ 79,750 ರೂಪಾಯಿಯನ್ನು ಮರಳಿ ನೀಡುವ ಮೂಲಕ ಮಾದರಿಯಾಗಿದ್ದಾರೆ.

ಜ.29ರಂದು ಆರಂಭವಾಗಿದ್ದ ಸಂಸತ್‌ ಅಧಿವೇಶನ ಶೂನ್ಯ ಸಾಧನೆಯ ಮೂಲಕ ಶುಕ್ರವಾರ ಅಂತ್ಯವಾಗಿತ್ತು. ಬಜೆಟ್‌ ಅಧಿವೇಶನದ ವಿಸ್ತರಿತ ಭಾಗ ಆರಂಭವಾದಾಗಿನಿಂತಲೂ ಕಾವೇರಿ ನಿರ್ವಹಣಾ ಮಂಡಳಿ ರಚನೆ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಹಗರಣ, ಎಸ್‌ಸಿ-ಎಸ್‌ಟಿ ದೌರ್ಜನ್ಯ ಕಾಯ್ದೆಯ ಕುರಿತು ಪ್ರತಿಪಕ್ಷಗಳ ವಿನಾಕಾರಣ ಅಲಾಪದಿಂದ ಕಲಾಪ ವ್ಯರ್ಥವಾಗಿತ್ತು. ಉಭಯ ಸದನಗಳಲ್ಲಿ ಯಾವುದೇ ರೀತಿಯ ಚರ್ಚೆಗಳು ನಡೆಯಲಿಲ್ಲ.

ಕೇಂದ್ರ ಸರ್ಕಾರದ ವಿರುದ್ಧ ವೈಎಸ್ಸಾರ್‌ ಕಾಂಗ್ರೆಸ್‌, ತೆಲುಗುದೇಶಂ, ಕಾಂಗ್ರೆಸ್‌ ಹಾಗೂ ಎಡರಂಗಗಳು ಅವಿಶ್ವಾಸ ಗೊತ್ತುವಳಿ ಮಂಡನೆಗೆ ಮುಂದಾದರೂ ಕೆಲವು ಪ್ರಾದೇಶಿಕ ಪಕ್ಷಗಳ ಗಲಾಟೆಯಿಂದ ಇದನ್ನು ಕೈಗೆತ್ತಿಕೊಳ್ಳಲೂ ಆಗಲಿಲ್ಲ. ಈ ಬಿಕ್ಕಟ್ಟಿಗೆ ವಿಪಕ್ಷಗಳು ಕಾರಣ ಎಂದು ಸರ್ಕಾರ ಟೀಕಿಸಿತ್ತು. ಆದರೆ ಕೇಂದ್ರದ ನಿಲುವುಗಳು ಇದಕ್ಕೆ ಕಾರಣ ಎಂದು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಇದೆಲ್ಲದರ ಮಧ್ಯೆ 23 ದಿನಗಳ ಕಲಾಪ ವ್ಯರ್ಥವಾಗಿತ್ತು. ಆದ್ದರಿಂದ ಎನ್ ಡಿಎ ಸಂಸದರು ವೇತನ ಮತ್ತು ಭತ್ಯೆ ನಿರಾಕರಿಸಿದ್ದರು. ಇದರಿಂದ 3.66 ಕೋಟಿ ರು. ಸರ್ಕಾರಕ್ಕೆ ಮರಳಿಲಿದೆ ಎಂದು ಸಂಸದೀಯ ಖಾತೆ ಸಚಿವ ಅನಂತ್‌ಕುಮಾರ್‌ ಮಾಹಿತಿ ನೀಡಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಕೂಡ ವೇತನ ಮತ್ತು ಭತ್ಯೆ ನಿರಾಕರಿಸುವ ಮೂಲಕ ಮಾದರಿಯಾಗಿದ್ದಾರೆ.

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search