• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತಿಪಕ್ಷಗಳಿಂದ ಕಲಾಪ ವ್ಯರ್ಥ, 23 ದಿನದ ವೇತನ ಭತ್ಯೆ ಮರಳಿಸಿದ ಪ್ರಧಾನಿ ಮೋದಿ

TNN Correspondent Posted On April 8, 2018
0


0
Shares
  • Share On Facebook
  • Tweet It

ದೆಹಲಿ: ಸಂಸತ್ ನಲ್ಲಿ ನಿರಂತರವಾಗಿ ಗದ್ದಲವೆಬ್ಬಿಸಿ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಎರಡನೆಯ ಇಡೀ ಅವಧಿ ವ್ಯರ್ಥವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಅವರು ತಮ್ಮ 23 ದಿನಗಳ ವೇತನ ಮತ್ತು ಭತ್ಯೆಯನ್ನು ಸರ್ಕಾರಕ್ಕೆ ಮರಳಿಸಿದ್ದಾರೆ. ಸಂಸತ್ ಅಧಿವೇಶನ ವ್ಯರ್ಥವಾದ ಹಿನ್ನೆಲೆಯಲ್ಲಿ ಎನ್ ಡಿಎ ಸಂಸದರು ವೇತನ ತ್ಯಜಿಸುವ ನಿರ್ಧಾರ ಕೈಗೊಂಡಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 28 ದಿನಗಳ 79,750 ರೂಪಾಯಿಯನ್ನು ಮರಳಿ ನೀಡುವ ಮೂಲಕ ಮಾದರಿಯಾಗಿದ್ದಾರೆ.

ಜ.29ರಂದು ಆರಂಭವಾಗಿದ್ದ ಸಂಸತ್‌ ಅಧಿವೇಶನ ಶೂನ್ಯ ಸಾಧನೆಯ ಮೂಲಕ ಶುಕ್ರವಾರ ಅಂತ್ಯವಾಗಿತ್ತು. ಬಜೆಟ್‌ ಅಧಿವೇಶನದ ವಿಸ್ತರಿತ ಭಾಗ ಆರಂಭವಾದಾಗಿನಿಂತಲೂ ಕಾವೇರಿ ನಿರ್ವಹಣಾ ಮಂಡಳಿ ರಚನೆ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಹಗರಣ, ಎಸ್‌ಸಿ-ಎಸ್‌ಟಿ ದೌರ್ಜನ್ಯ ಕಾಯ್ದೆಯ ಕುರಿತು ಪ್ರತಿಪಕ್ಷಗಳ ವಿನಾಕಾರಣ ಅಲಾಪದಿಂದ ಕಲಾಪ ವ್ಯರ್ಥವಾಗಿತ್ತು. ಉಭಯ ಸದನಗಳಲ್ಲಿ ಯಾವುದೇ ರೀತಿಯ ಚರ್ಚೆಗಳು ನಡೆಯಲಿಲ್ಲ.

ಕೇಂದ್ರ ಸರ್ಕಾರದ ವಿರುದ್ಧ ವೈಎಸ್ಸಾರ್‌ ಕಾಂಗ್ರೆಸ್‌, ತೆಲುಗುದೇಶಂ, ಕಾಂಗ್ರೆಸ್‌ ಹಾಗೂ ಎಡರಂಗಗಳು ಅವಿಶ್ವಾಸ ಗೊತ್ತುವಳಿ ಮಂಡನೆಗೆ ಮುಂದಾದರೂ ಕೆಲವು ಪ್ರಾದೇಶಿಕ ಪಕ್ಷಗಳ ಗಲಾಟೆಯಿಂದ ಇದನ್ನು ಕೈಗೆತ್ತಿಕೊಳ್ಳಲೂ ಆಗಲಿಲ್ಲ. ಈ ಬಿಕ್ಕಟ್ಟಿಗೆ ವಿಪಕ್ಷಗಳು ಕಾರಣ ಎಂದು ಸರ್ಕಾರ ಟೀಕಿಸಿತ್ತು. ಆದರೆ ಕೇಂದ್ರದ ನಿಲುವುಗಳು ಇದಕ್ಕೆ ಕಾರಣ ಎಂದು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಇದೆಲ್ಲದರ ಮಧ್ಯೆ 23 ದಿನಗಳ ಕಲಾಪ ವ್ಯರ್ಥವಾಗಿತ್ತು. ಆದ್ದರಿಂದ ಎನ್ ಡಿಎ ಸಂಸದರು ವೇತನ ಮತ್ತು ಭತ್ಯೆ ನಿರಾಕರಿಸಿದ್ದರು. ಇದರಿಂದ 3.66 ಕೋಟಿ ರು. ಸರ್ಕಾರಕ್ಕೆ ಮರಳಿಲಿದೆ ಎಂದು ಸಂಸದೀಯ ಖಾತೆ ಸಚಿವ ಅನಂತ್‌ಕುಮಾರ್‌ ಮಾಹಿತಿ ನೀಡಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಕೂಡ ವೇತನ ಮತ್ತು ಭತ್ಯೆ ನಿರಾಕರಿಸುವ ಮೂಲಕ ಮಾದರಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search